AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಲಿದೆ ‘ಸೀತಾ ರಾಮ 2’; ಕ್ಲೈಮ್ಯಾಕ್ಸ್​ನಲ್ಲಿ ಸಿಕ್ತು ಅಪ್​ಡೇಟ್

Seetha Raama Serial: ಸೀತಾ ರಾಮ ಧಾರಾವಾಹಿಯು ಮೇ 30ರಂದು ತನ್ನ 490ನೇ ಮತ್ತು ಅಂತಿಮ ಎಪಿಸೋಡ್‌ನೊಂದಿಗೆ ಕೊನೆಗೊಂಡಿತು. ಆದರೆ, ಅಂತಿಮ ಎಪಿಸೋಡ್‌ನಲ್ಲಿ ಅಚ್ಚರಿಯ ಸುದ್ದಿಯೊಂದನ್ನು ಘೋಷಿಸಲಾಯಿತು. ಧಾರಾವಾಹಿಗೆ ಎರಡನೇ ಸೀಸನ್ ಬರಲಿದೆ ಎಂದು ತಿಳಿಸಲಾಗಿದೆ. ಈ ಧಾರಾವಾಹಿಯು ಮರಾಠಿ ಧಾರಾವಾಹಿಯ ರಿಮೇಕ್ ಆಗಿದೆ.

ಬರಲಿದೆ ‘ಸೀತಾ ರಾಮ 2’; ಕ್ಲೈಮ್ಯಾಕ್ಸ್​ನಲ್ಲಿ ಸಿಕ್ತು ಅಪ್​ಡೇಟ್
ಸೀತಾ ರಾಮ
 ಶ್ರೀಲಕ್ಷ್ಮೀ ಎಚ್
| Edited By: |

Updated on: May 31, 2025 | 7:53 AM

Share

‘ಸೀತಾ ರಾಮ’ ಧಾರಾವಾಹಿಯು (Seetha Raama Serial) ತನ್ನ ಕೊನೆಯ ಎಪಿಸೋಡ್​ನ ಮೇ 30ರಂದು ಪ್ರಸಾರ ಮಾಡಿದೆ. ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿದ್ದ ಧಾರಾವಾಹಿಯು ಬರೋಬ್ಬರಿ 490 ಎಪಿಸೋಡ್​ಗಳನ್ನು ಪ್ರಸಾರ ಮಾಡಿತ್ತು. ಈಗ ಧಾರಾವಾಹಿಯ ಕೊನೆಯ ದಿನದ ಎಪಿಸೋಡ್​ನಲ್ಲಿ ಒಂದು ಅಚ್ಚರಿಯ ಮಾಹಿತಿಯನ್ನು ತಂಡದವರು ನೀಡಿದ್ದನ್ನು ನೀವು ಕಾಣಬಹುದು. ‘ಸೀತಾ ರಾಮ’ ಧಾರಾವಾಹಿಯು ಇಲ್ಲಿಗೆ ಕೊನೆ ಆಗಿಲ್ಲ. ಈ ಧಾರಾವಾಹಿಗೆ ಮತ್ತೊಂದು ಸೀಸನ್ ಬರಲಿದೆ ಎನ್ನುವ ಸೂಚನೆಯನ್ನು ತಂಡದವರು ನೀಡಿದ್ದಾರೆ.

‘ಸೀತಾ ರಾಮ’ ಧಾರಾವಾಹಿ 2023ರ ಜುಲೈ 17ರಂದು ಮೊದಲ ಎಪಿಸೋಡ್ ಪ್ರಸಾರ ಕಂಡಿತು. ಮೇ 30ರಂದು ಧಾರಾವಾಹಿ ಕೊನೆಯ ಎಪಿಸೋಡ್ ಪ್ರಸಾರ ಆಗಿದೆ. ಈ ಧಾರಾವಾಹಿಯು ಮರಾಠಿಯ ‘ಮಜಿ ತುಜಿ ರೇಶಿಮಾಗಢ’ ಧಾರಾವಾಹಿಯ ರಿಮೇಕ್ ಆಗಿದೆ. ಈ ಧಾರಾವಾಹಿ ಆರಂಭದಲ್ಲಿ ಮೆಚ್ಚುಗೆ ಪಡೆಯಿತು. ಆದರೆ, ಕೊನೆಯ ಹಂತದಲ್ಲಿ ಧಾರಾವಾಹಿಯು ಸಮಯ ಬದಲಾವಣೆ ಮತ್ತು ಕಥೆಯಲ್ಲಿ ಆದ ಕೆಲವು ಬದಲಾವಣೆ ಸಿಟ್ಟನ್ನು ತರಿಸಿತು.

ಇದನ್ನೂ ಓದಿ
Image
ಟಾಲಿವುಡ್​ನಲ್ಲಿ ರೀ-ಯೂನಿಯನ್ ಸಂಭ್ರಮ; ಸ್ಯಾಂಡಲ್​ವುಡ್​ನಲ್ಲಿ ಯಾವಾಗ?
Image
ಎಚ್​ಎಸ್​ ವೆಂಕಟೇಶ​ಮೂರ್ತಿ ನಿಧನ; ಖ್ಯಾತ ಸಾಹಿತಿ, ಕವಿ ಇನ್ನಿಲ್ಲ
Image
ಹೊಂಬಾಳೆ ನಿರ್ಮಾಣದ ಹೃತಿಕ್ ಚಿತ್ರಕ್ಕೆ ದಕ್ಷಿಣದ ಖ್ಯಾತ ಹೀರೋ ಡೈರೆಕ್ಷನ್
Image
ರಶ್ಮಿಕಾಗೆ ನ್ಯಾಷನಲ್ ಕ್ರಶ್ ಎಂದು ಕರೆದ ಅಭಿಮಾನಿ; ನಟಿಯ ಪ್ರತಿಕ್ರಿಯೆ ಏನು?

‘ಸೀತಾ ರಾಮ’ ಧಾರಾವಾಹಿ ಮತ್ತೆ ಬರಲಿದೆಯಂತೆ. ಈ ಬಗ್ಗೆ ಧಾರಾವಾಹಿಯ ಕ್ಲೈಮ್ಯಾಕ್ಸ್​ನಲ್ಲಿ ಮಾಹಿತಿ ನೀಡಲಾಗಿದೆ. ‘ಮರಳಿ ಬರಲಿದ್ದಾರೆ ಸೀತಾ ರಾಮ’ ಎನ್ನುವ ಮಾಹಿತಿಯನ್ನು ನೀಡಲಾಗಿದೆ. ಅಂದರೆ ಮುಂದಿನದ ದಿನಗಲ್ಲಿ ಎರಡನೇ ಪಾರ್ಟ್ ಮಾಡುವ ಉದ್ದೇಶ ಅವರಿಗೆ ಇದೆ. ಆದರೆ, ಇದು ಎಷ್ಟರಮಟ್ಟಿಗೆ ಯಶಸ್ಸು ಕಾಣುತ್ತದೆ ಎಂಬುದಂತೂ ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ.

View this post on Instagram

A post shared by Zee Kannada (@zeekannada)

ಈ ಮೊದಲು ‘ಗಟ್ಟಿ ಮೇಳ’ ಧಾರಾವಾಹಿಯು ಕೊನೆಗೊಂಡಿತ್ತು ಮತ್ತು ಇದು ಕೊನೆಗೊಳ್ಳುವಾಗ ಈ ಧಾರಾವಾಹಿಗೆ ಮತ್ತೊಂದು ಪಾರ್ಟ್ ಬರಲಿದೆ ಎನ್ನುವ ಸೂಚನೆ ನೀಡಲಾಗಿತ್ತು. ಆದರೆ, ಆ ರೀತಿ ಆಗಲೇ ಇಲ್ಲ. ಈಗ ‘ಸೀತಾ ರಾಮ’ ಧಾರಾವಾಹಿ ತಂಡದವರು ನೀಡದ ಭರವಸೆಯೂ ಇದೇ ರೀತಿ ಆಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ಕೊನೆ ಆದ ‘ಸೀತಾ ರಾಮ’ ಧಾರಾವಾಹಿ; ಭಾರ್ಗವಿಯ ಗತಿ ಏನಾಯಿತು?

‘ಸೀತಾ ರಾಮ’ ಧಾರಾವಾಹಿಯ ಕೊನೆಯಲ್ಲಿ ಭಾರ್ಗವಿ ಕೆಟ್ಟವಳು ಎಂದು ಗೊತ್ತಾಗಿದೆ. ಈ ಕಾರಣದಿಂದಲೇ ಆಕೆಯನ್ನು ಜೈಲಿಗೆ ಹಾಕಲಾಗಿದೆ. ಒಂದೊಮ್ಮೆ ಎರಡನೇ ಪಾರ್ಟ್​ ಮಾಡಿದರೆ ಇದರ ಕಥೆ ಮುಂದುವರಿಯುವ ಸಾಧ್ಯತೆ ಇರುತ್ತದೆ. ಆದರೆ, ಸದ್ಯಕ್ಕಂತೂ ಹಾಗಿಲ್ಲ ಎಂಬುದು ಸ್ಪಷ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ