AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾ ರಾಮ’ ಧಾರಾವಾಹಿ: ಸಿಹಿಯ ಸಾವು ಹತ್ತಿರ ಬಂದೇ ಬಿಡ್ತು; ವೀಕ್ಷಕರಿಗೆ ಬೇಸರ

ಸೀತಾ ರಾಮ ಧಾರಾವಾಹಿಯಲ್ಲಿ ಸಿಹಿಯ ಪಾತ್ರದ ಅನಿರೀಕ್ಷಿತವಾಗಿ ಕೊನೆ ಆಗುತ್ತಿದೆ. ಕಥಾವಸ್ತುವಿನ ಅನಗತ್ಯ ತಿರುವುಗಳು ಮತ್ತು ಟಿಆರ್​ಪಿಗಾಗಿ ಕಥೆಯನ್ನು ಬದಲಾಯಿಸಿರುವುದು ವೀಕ್ಷಕರ ಅಸಮಾಧಾನಕ್ಕೆ ಕಾರಣ ಆಗಿದೆ.

‘ಸೀತಾ ರಾಮ’ ಧಾರಾವಾಹಿ: ಸಿಹಿಯ ಸಾವು ಹತ್ತಿರ ಬಂದೇ ಬಿಡ್ತು; ವೀಕ್ಷಕರಿಗೆ ಬೇಸರ
ಸೀತಾ ರಾಮ
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 01, 2024 | 6:26 AM

Share

‘ಸೀತಾ ರಾಮ’ ಧಾರಾವಾಹಿಯಲ್ಲಿ ಪ್ರೇಕ್ಷಕ ಊಹಿಸಿದಂತೆ ಆಗುತ್ತಿಲ್ಲ. ಇದಕ್ಕೆ ವೀಕ್ಷಕರಿಗೆ ಸಖತ್ ಬೇಸರ ಇದೆ. ಟ್ವಿಸ್ಟ್ ಕೊಡೋ ಭರದಲ್ಲಿ ಇಲ್ಲ-ಸಲ್ಲದ್ದನ್ನು ತರುವ ಕೆಲಸ ಆಗುತ್ತಿದೆ ಎಂಬ ಬೇಸರವನ್ನು ವೀಕ್ಷಕರು ಹೊರಹಾಕುತ್ತಿದ್ದಾರೆ. ಇದು ಪ್ರೇಕ್ಷಕರ ಅಸಮಾಧಾನಕ್ಕೆ ಕಾರಣ ಆಗಿದೆ. ಈಗ ಸಿಹಿಯ ಸಾವು ಸಮೀಪಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಸಿಹಿಯ ಪಾತ್ರ ಕೊನೆ ಆಗೋದು ನಿಶ್ಚಯವಾಗಿದೆ.

‘ಸೀತಾ ರಾಮ’ ಧಾರವಾಹಿಯಲ್ಲಿ ಸೀತಾ ಹಾಗೂ ರಾಮನ ಪಾತ್ರ ಎಷ್ಟು ಮುಖ್ಯವೋ ಸಿಹಿಯ ಪಾತ್ರವೂ ಅಷ್ಟೇ ಮುಖ್ಯ. ಈ ಪಾತ್ರ ಕೂಡ ಪ್ರಮುಖವಾಗಿದೆ. ಆದರೆ, ಈಗ ಈ ಪಾತ್ರ ಕೊನೆ ಆಗೋ ಸೂಚನೆ ಸಿಕ್ಕಿದೆ. ಮುಂದಿನ ವಾರದ ಎಪಿಸೋಡ್​ಗಳು ಮಹತ್ವ ಪಡೆದುಕೊಳ್ಳಲಿದ್ದು, ಈ ಪಾತ್ರ ಕೊನೆಗೊಳ್ಳಲಿದೆ.

ಈಗ ಸೀತಾಳ ಜನ್ಮದಿನ. ಈ ದಿನದಂದೇ ಸಿಹಿಯನ್ನು ದತ್ತು ಪಡೆಯುವ ಪ್ರಕ್ರಿಯೆಗೆ ಸೀತಾ ಹಾಗೂ ರಾಮ ಮುಂದಾಗಿದ್ದಾರೆ. ಈ ದಿನದಂದು ಏಂಜಲ್ ರೀತಿಯ ಬಟ್ಟೆ ತೊಟ್ಟು ಕಾಣಿಸಿಕೊಂಡಿದ್ದಾರೆ ಸಿಹಿ. ಈ ಮೊದಲು ರಿಲೀಸ್ ಆದ ಪ್ರೋಮೋದಲ್ಲಿ ಸಿಹಿಗೆ ಅಪಘಾತ ಆದಂತೆ ಹಾಗೂ ಆಕೆ ಸತ್ತು ಹೋದಂತೆ ತೋರಿಸಲಾಗಿದೆ. ಅದು ಇದೇ ಡ್ರೆಸ್​ನಲ್ಲಿ. ಹೀಗಾಗಿ, ಆಕೆಯ ಪಾತ್ರ ಕೊನೆ ಆಗೋದು ಪಕ್ಕಾ ಎನ್ನಲಾಗುತ್ತಿದೆ.

ಇದಕ್ಕೆ ಭಾರ್ಗವಿ ಮಾಡಿದ ಆಟವೇ ಕಾರಣ. ಸಿಹಿಯನ್ನು ಸಾಯಿಸಲು ಭಾರ್ಗವಿ ಸಂಚು ರೂಪಿಸಿದ್ದಾಳೆ. ಈ ಸಂಚಿಗೆ ಮುಗ್ಧ ಜೀವ ಬಲಿಯಾಗಿದೆ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ. ಈಗಾಗಲೇ ಸಿಹಿ ನಿಧನ ಹೊಂದಿದ ಬಳಿಕ ಏನಾಗುತ್ತದೆ ಎಂಬುದನ್ನು ತೋರಿಸಲಾಗಿದೆ.

ಸಿಹಿ ನಿಧನ ಹೊಂದಿದ ಬೆನ್ನಲ್ಲೇ ಸೀತಾ ಹುಚ್ಚಿ ಆದ ಹಾಗೆ ತೋರಿಸಲಾಗಿದೆ. ಇಷ್ಟೇ ಅಲ್ಲ, ಸಿಹಿಗೆ ಸಹೋದರಿ ಇರುವಂತೆಯೂ, ಆ ಸಹೋದರಿ ಸಿಹಿ ರೀತಿಯೇ ಇರುವಂತೆಯೂ ತೋರಿಸಲಾಗಿದೆ. ಈ ಹುಡುಗಿ ನಂತರ ಸೀತಾಳ ಮಗಳಾಗಿ ಬರುವ ರೀತಿಯಲ್ಲಿ ತೋರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಸೀತಾ ರಾಮ’ ಸೀರಿಯಲ್​ಗೆ ಒಳ್ಳೆಯ ಟಿಆರ್​ಪಿ; ಹೊಸ ಧಾರಾವಾಹಿಗಳಿಗೆ ಸಿಗಲಿಲ್ಲ ಭವ್ಯ ಸ್ವಾಗತ

ಸದ್ಯ ‘ಸೀತಾ ರಾಮ’ ಧಾರಾವಾಹಿಯ ಕಥೆ ಹೋಗುತ್ತಿರುವ ರೀತಿಗೆ ಅನೇಕರಿಗೆ ಬೇಸರ ಇದೆ. ಟಿಆರ್​ಪಿಗೋಸ್ಕರ ಈ ರೀತಿ ಮಾಬಾಡಬಾರದಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಮಂದಿನ ದಿನಗಳಲ್ಲಿ ಯಾವ ರೀತಿಯಲ್ಲಿ ಕಥೆ ಸಾಗುತ್ತದೆ ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ