AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾ ರಾಮ’ ಸೀರಿಯಲ್​ಗೆ ಒಳ್ಳೆಯ ಟಿಆರ್​ಪಿ; ಹೊಸ ಧಾರಾವಾಹಿಗಳಿಗೆ ಸಿಗಲಿಲ್ಲ ಭವ್ಯ ಸ್ವಾಗತ

‘ಸೀತಾ ರಾಮ’ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಈ ಧಾರಾವಾಹಿಯ ಪ್ರಮುಖ ಪಾತ್ರಧಾರಿಗಳಾದ ಸೀತಾ ಹಾಗೂ ರಾಮ್​ ಮದುವೆ ನೆರವೇರಿದೆ. ಇದಕ್ಕಾಗಿ ಭರ್ಜರಿ ಸೆಟ್ ಹಾಕಲಾಗಿದೆ. ಅದ್ದೂರಿ ಮದುವೆ ಸಮಾರಂಭಕ್ಕೆ ಇಡೀ ಕರ್ನಾಟಕ ಸಾಕ್ಷಿ ಆಗಿದೆ. ಹೀಗಾಗಿ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ.

‘ಸೀತಾ ರಾಮ’ ಸೀರಿಯಲ್​ಗೆ ಒಳ್ಳೆಯ ಟಿಆರ್​ಪಿ; ಹೊಸ ಧಾರಾವಾಹಿಗಳಿಗೆ ಸಿಗಲಿಲ್ಲ ಭವ್ಯ ಸ್ವಾಗತ
ಸೀತಾ ರಾಮ
ರಾಜೇಶ್ ದುಗ್ಗುಮನೆ
|

Updated on:Jul 18, 2024 | 2:28 PM

Share

ಕನ್ನಡದಲ್ಲಿ ಹೊಸ ಹೊಸ ಕಥೆಗಳೊಂದಿಗೆ ಧಾರಾವಾಹಿಗಳು ಬರುತ್ತಿವೆ. ಎಲ್ಲಾ ಧಾರಾವಾಹಿಗಳಿಗೂ ಭವ್ಯ ಸ್ವಾಗತ ಸಿಗೋದಿಲ್ಲ. ಇತ್ತೀಚೆಗೆ ಆರಂಭ ಆದ ಧಾರಾವಾಹಿಗಳಿಗೆ ಅಂದುಕೊಂಡ ಮಟ್ಟದ ಟಿಆರ್​ಪಿ ಸಿಕ್ಕಿಲ್ಲ. ಇನ್ನು ‘ಸೀತಾ ರಾಮ’ ಧಾರಾವಾಹಿಯಲ್ಲಿ ಮದುವೆ ಸೀಸನ್. ಹೀಗಾಗಿ, ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಕೆ ಕಂಡಿದೆ. ‘ಬ್ರಹ್ಮಗಂಟು’ ಧಾರಾವಾಹಿಯಲ್ಲೂ ಮದುವೆ ಜರುಗುತ್ತಿದ್ದು, ಅದರ ಟಿಆರ್​ಪಿಯಲ್ಲಿ ಏರಿಕೆ ಆಗಿದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಈ ಬಾರಿ ಅತಿ ಹೆಚ್ಚು ಟಿಆರ್​ಪಿ ಪಡೆದು ಮೊದಲ ಸ್ಥಾನ ಪಡೆದುಕೊಂಡಿದೆ. ಕಳೆದ ವಾರ ಈ ಧಾರಾವಾಹಿ ಹಾಗೂ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮಧ್ಯೆ ಸ್ಪರ್ಧೆ ಏರ್ಪಟ್ಟಿತ್ತು. ಈಗ ಕೆಲವೇ ಪಾಯಿಂಟ್​ಗಳ ಅಂತರದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಎರಡನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿಯನ್ನು ಜನರು ಮೆಚ್ಚಿಕೊಂಡಿದ್ದಾರೆ.

‘ಲಕ್ಷ್ಮೀ ನಿವಾಸ’ ಧಾರಾವಾಹಿಗೆ ಈ ಬಾರಿ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿಯನ್ನು ಜನರು ಹೆಚ್ಚು ವೀಕ್ಷಿಸುತ್ತಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಒಳ್ಳೆಯ ಟಿಆರ್​ಪಿ ಪಡೆದುಕೊಂಡಿದೆ. ಇದಕ್ಕೆ ಕಾರಣ ಆಗಿರೋದು ಸೀತಾ ಹಾಗೂ ರಾಮನ ಮದುವೆ. ನಗರ ಭಾಗದಲ್ಲಿ ಈ ಧಾರಾವಾಹಿ ಒಂದನೇ ಸ್ಥಾನ ಪಡೆದುಕೊಂಡಿದೆ. ಮದುವೆ ಬಳಿಕ ಟ್ವಿಸ್ಟ್​ಗಳು ಸಿಕ್ಕರೆ ಧಾರಾವಾಹಿ ಟಿಆರ್​ಪಿ ಮತ್ತಷ್ಟು ಹೆಚ್ಚಲಿದೆ.

ಇದನ್ನೂ ಓದಿ: ‘ಸೀತಾ ರಾಮ’ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ; ಉಳಿದ ಧಾರಾವಾಹಿಗಳ ಕಥೆ ಏನು?

ಐದನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಇದೆ. ಈ ಧಾರಾವಾಹಿ ಹಲವು ದಿನಗಳಿಂದ ಟಾಪ್ ಐದರಲ್ಲಿ ಬಂದಿರಲಿಲ್ಲ. ಈ ಧಾರಾವಾಹಿಯನ್ನು ಜನರು ಹೆಚ್ಚು ಇಷ್ಟಪಟ್ಟಿದ್ದಾರೆ. ಹೊಸ ಧಾರಾವಾಹಿಗಳಿಗೆ ಅಷ್ಟಾಗಿ ಟಿಆರ್​ಪಿ ಸಿಗುತ್ತಿಲ್ಲ. ‘ಕಲ್ಯಾಣಿ’ ಧಾರಾವಾಹಿ ಹಾಗೂ ‘ನನ್ನ ದೇವ್ರು’ 3 ಅಂಕದ ಟಿಆರ್​ಪಿ ಪಡೆಯಲು ಹರಸಾಹ ಪಟ್ಟಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:25 pm, Thu, 18 July 24

‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ
ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ
ವಾಹನ ಸವಾರರೇ ಎಚ್ಚರ: ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸ್
ವಾಹನ ಸವಾರರೇ ಎಚ್ಚರ: ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸ್