AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾ ರಾಮ’ ಸೀರಿಯಲ್​ಗೆ ಒಳ್ಳೆಯ ಟಿಆರ್​ಪಿ; ಹೊಸ ಧಾರಾವಾಹಿಗಳಿಗೆ ಸಿಗಲಿಲ್ಲ ಭವ್ಯ ಸ್ವಾಗತ

‘ಸೀತಾ ರಾಮ’ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಈ ಧಾರಾವಾಹಿಯ ಪ್ರಮುಖ ಪಾತ್ರಧಾರಿಗಳಾದ ಸೀತಾ ಹಾಗೂ ರಾಮ್​ ಮದುವೆ ನೆರವೇರಿದೆ. ಇದಕ್ಕಾಗಿ ಭರ್ಜರಿ ಸೆಟ್ ಹಾಕಲಾಗಿದೆ. ಅದ್ದೂರಿ ಮದುವೆ ಸಮಾರಂಭಕ್ಕೆ ಇಡೀ ಕರ್ನಾಟಕ ಸಾಕ್ಷಿ ಆಗಿದೆ. ಹೀಗಾಗಿ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ.

‘ಸೀತಾ ರಾಮ’ ಸೀರಿಯಲ್​ಗೆ ಒಳ್ಳೆಯ ಟಿಆರ್​ಪಿ; ಹೊಸ ಧಾರಾವಾಹಿಗಳಿಗೆ ಸಿಗಲಿಲ್ಲ ಭವ್ಯ ಸ್ವಾಗತ
ಸೀತಾ ರಾಮ
ರಾಜೇಶ್ ದುಗ್ಗುಮನೆ
|

Updated on:Jul 18, 2024 | 2:28 PM

Share

ಕನ್ನಡದಲ್ಲಿ ಹೊಸ ಹೊಸ ಕಥೆಗಳೊಂದಿಗೆ ಧಾರಾವಾಹಿಗಳು ಬರುತ್ತಿವೆ. ಎಲ್ಲಾ ಧಾರಾವಾಹಿಗಳಿಗೂ ಭವ್ಯ ಸ್ವಾಗತ ಸಿಗೋದಿಲ್ಲ. ಇತ್ತೀಚೆಗೆ ಆರಂಭ ಆದ ಧಾರಾವಾಹಿಗಳಿಗೆ ಅಂದುಕೊಂಡ ಮಟ್ಟದ ಟಿಆರ್​ಪಿ ಸಿಕ್ಕಿಲ್ಲ. ಇನ್ನು ‘ಸೀತಾ ರಾಮ’ ಧಾರಾವಾಹಿಯಲ್ಲಿ ಮದುವೆ ಸೀಸನ್. ಹೀಗಾಗಿ, ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಕೆ ಕಂಡಿದೆ. ‘ಬ್ರಹ್ಮಗಂಟು’ ಧಾರಾವಾಹಿಯಲ್ಲೂ ಮದುವೆ ಜರುಗುತ್ತಿದ್ದು, ಅದರ ಟಿಆರ್​ಪಿಯಲ್ಲಿ ಏರಿಕೆ ಆಗಿದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಈ ಬಾರಿ ಅತಿ ಹೆಚ್ಚು ಟಿಆರ್​ಪಿ ಪಡೆದು ಮೊದಲ ಸ್ಥಾನ ಪಡೆದುಕೊಂಡಿದೆ. ಕಳೆದ ವಾರ ಈ ಧಾರಾವಾಹಿ ಹಾಗೂ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮಧ್ಯೆ ಸ್ಪರ್ಧೆ ಏರ್ಪಟ್ಟಿತ್ತು. ಈಗ ಕೆಲವೇ ಪಾಯಿಂಟ್​ಗಳ ಅಂತರದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಎರಡನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿಯನ್ನು ಜನರು ಮೆಚ್ಚಿಕೊಂಡಿದ್ದಾರೆ.

‘ಲಕ್ಷ್ಮೀ ನಿವಾಸ’ ಧಾರಾವಾಹಿಗೆ ಈ ಬಾರಿ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿಯನ್ನು ಜನರು ಹೆಚ್ಚು ವೀಕ್ಷಿಸುತ್ತಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಒಳ್ಳೆಯ ಟಿಆರ್​ಪಿ ಪಡೆದುಕೊಂಡಿದೆ. ಇದಕ್ಕೆ ಕಾರಣ ಆಗಿರೋದು ಸೀತಾ ಹಾಗೂ ರಾಮನ ಮದುವೆ. ನಗರ ಭಾಗದಲ್ಲಿ ಈ ಧಾರಾವಾಹಿ ಒಂದನೇ ಸ್ಥಾನ ಪಡೆದುಕೊಂಡಿದೆ. ಮದುವೆ ಬಳಿಕ ಟ್ವಿಸ್ಟ್​ಗಳು ಸಿಕ್ಕರೆ ಧಾರಾವಾಹಿ ಟಿಆರ್​ಪಿ ಮತ್ತಷ್ಟು ಹೆಚ್ಚಲಿದೆ.

ಇದನ್ನೂ ಓದಿ: ‘ಸೀತಾ ರಾಮ’ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ; ಉಳಿದ ಧಾರಾವಾಹಿಗಳ ಕಥೆ ಏನು?

ಐದನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಇದೆ. ಈ ಧಾರಾವಾಹಿ ಹಲವು ದಿನಗಳಿಂದ ಟಾಪ್ ಐದರಲ್ಲಿ ಬಂದಿರಲಿಲ್ಲ. ಈ ಧಾರಾವಾಹಿಯನ್ನು ಜನರು ಹೆಚ್ಚು ಇಷ್ಟಪಟ್ಟಿದ್ದಾರೆ. ಹೊಸ ಧಾರಾವಾಹಿಗಳಿಗೆ ಅಷ್ಟಾಗಿ ಟಿಆರ್​ಪಿ ಸಿಗುತ್ತಿಲ್ಲ. ‘ಕಲ್ಯಾಣಿ’ ಧಾರಾವಾಹಿ ಹಾಗೂ ‘ನನ್ನ ದೇವ್ರು’ 3 ಅಂಕದ ಟಿಆರ್​ಪಿ ಪಡೆಯಲು ಹರಸಾಹ ಪಟ್ಟಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:25 pm, Thu, 18 July 24

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!