AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಕಾಶ ದೀಪ’ ಧಾರಾವಾಹಿ ನಟಿ ದಿವ್ಯಾ ಹೊರಿಸಿದ ಆರೋಪಕ್ಕೆ ಸ್ಪಷ್ಟನೆ ನೀಡಿದ ಪತಿ ಅಮ್ಜದ್​ ಖಾನ್​

Serial Actor Divya Sridhar: ‘ಕೆಟ್ಟ ಸ್ನೇಹಿತರ ಜತೆ ಸೇರಿ ದಿವ್ಯಾ ಇದನ್ನೆಲ್ಲಾ ಮಾಡುತ್ತಿದ್ದಾಳೆ. ಅಬಾರ್ಷನ್​ ಮಾಡಿಸಲು ನಾಟಕ ಆಡ್ತಿರೋ ಹಾಗಿದೆ’ ಎಂದು ಅಮ್ಜದ್​ ಖಾನ್​ ಪ್ರತ್ಯಾರೋಪ ಮಾಡಿದ್ದಾರೆ.

‘ಆಕಾಶ ದೀಪ’ ಧಾರಾವಾಹಿ ನಟಿ ದಿವ್ಯಾ ಹೊರಿಸಿದ ಆರೋಪಕ್ಕೆ ಸ್ಪಷ್ಟನೆ ನೀಡಿದ ಪತಿ ಅಮ್ಜದ್​ ಖಾನ್​
ದಿವ್ಯಾ ಶ್ರೀಧರ್, ಅಮ್ಜದ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on: Oct 07, 2022 | 12:42 PM

ಕನ್ನಡ ಕಿರುತೆರೆ ನಟಿ ದಿವ್ಯಾ ಶ್ರೀಧರ್​ (Divya Sridhar) ಹಾಗೂ ನಟ ಅಮ್ಜದ್​ ಖಾನ್​ ಸಂಸಾರದಲ್ಲಿ ಬಿರುಕು ಮೂಡಿದೆ. ಅವರ ದಾಂಪತ್ಯದ ಕಿರಿಕ್​ ಪೊಲೀಸ್​ ಠಾಣೆಯ ಮೆಟ್ಟಿಲೇರಿದೆ. ಪತಿ ವಿರುದ್ಧ ದಿವ್ಯಾ ಅನೇಕ ಆರೋಪಗಳನ್ನು ಮಾಡಿದ್ದಾರೆ. ಅವುಗಳಿಗೆ ಅಮ್ಜದ್​ ಖಾನ್​ (Amjad Khan) ಸ್ಪಷ್ಟನೆ ನೀಡಿದ್ದಾರೆ. ‘ನಾನು ಆಕೆ ಮೇಲೆ ಯಾವ ಹಲ್ಲೆಯನ್ನೂ ನಡೆಸಿಲ್ಲ. ಬೇಕಾದ್ರೆ ನಮ್ಮ ಮನೆಯ ಸಿಸಿ ಕ್ಯಾಮರಾ ಚೆಕ್​ ಮಾಡಿ. ಆಕೆ ಕೆಲವು ಕೆಟ್ಟ ಸ್ನೇಹಿತರ ಜೊತೆ ಸೇರಿ ಇದೆಲ್ಲಾ ಮಾಡ್ತಿದ್ದಾಳೆ. ಅಬಾರ್ಷನ್​ ಮಾಡಿಸಲು ನಾಟಕ ಆಡ್ತಿರೋ ಹಾಗಿದೆ. ಏನೇ ಆದ್ರೂ ನನಗೆ ಮಗು ಬೇಕೇ ಬೇಕು. ಕಮಿಷನರ್​ಗೆ ದೂರು ನೀಡಲು ರೆಡಿಯಾಗಿದ್ದೇನೆ’ ಎಂದು ಅಮ್ಜದ್​ ಖಾನ್ ಹೇಳಿದ್ದಾರೆ.

ದಿವ್ಯಾ ಶ್ರೀಧರ್ ಅವರು ಕನ್ನಡ ಕಿರುತೆರೆ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ‘ಆಕಾಶ ದೀಪ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. 2015ರಲ್ಲಿ ಪ್ರಸಾರ ಕಂಡ ತಮಿಳಿನ ‘ಕೆಳದಿ ಕಣ್ಮಣಿ’ ಧಾರಾವಾಹಿಯ ಸಹ ನಟ ಅಮ್ಜದ್ ಖಾನ್​ ಅವರನ್ನು ದಿವ್ಯಾ ಮದುವೆ ಆಗಿದ್ದರು. ಆದರೆ ಈಗ ಇವರ ಸಂಸಾರದಲ್ಲಿ ಬಿರುಕು ಮೂಡಿದೆ. ಪತಿ ವಿರುದ್ಧ ಹಲ್ಲೆ, ಕಿರುಕುಳ ಆರೋಪವನ್ನು ದಿವ್ಯಾ ಹೊರಿಸಿದ್ದಾರೆ.

ಏನಿದು ಕಿರಿಕ್​?

ಇದನ್ನೂ ಓದಿ
Image
‘ಮಾಯಾಮೃಗ’ ಧಾರಾವಾಹಿಗೆ ಸೀಕ್ವೆಲ್​; ಈ ಬಾರಿ ಟಿ.ಎನ್​. ಸೀತಾರಾಮ್ ಹೇಳ ಹೊರಟಿರುವ ವಿಚಾರಗಳೇನು?
Image
‘ಜೊತೆ ಜೊತೆಯಲಿ ಧಾರಾವಾಹಿಯ ಆರ್ಯವರ್ಧನ್​ ಪಾತ್ರಕ್ಕೆ ಆಫರ್ ಬಂದಿದ್ದು ನಿಜ, ಆದರೆ…’: ಅನೂಪ್ ಭಂಡಾರಿ ಸ್ಪಷ್ಟನೆ
Image
Anirudh Jatkar: ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಸಿಕ್ಕ ಸಂಬಳದ ಬಗ್ಗೆ ನೇರವಾಗಿ ಮಾತನಾಡಿದ ಅನಿರುದ್ಧ್​
Image
‘ನಾನು ಮತ್ತೆ ಆ ಧಾರಾವಾಹಿ ಮಾಡಲ್ಲ’; ತೆಲುಗು ಸೀರಿಯಲ್​ನಿಂದ ಹೊರ ಬರುವ ನಿರ್ಧಾರ ತೆಗೆದುಕೊಂಡ ಚಂದನ್ ಕುಮಾರ್

ದಿವ್ಯಾ ಶ್ರೀಧರ್ ಹಾಗೂ ಅಮ್ಜದ್ ಅವರು 2017ರಿಂದ ಪರಸ್ಪರ ಪ್ರೀತಿಸುತ್ತಿದ್ದರು. ಲಾಕ್​ಡೌನ್​ ಸಮಯದಲ್ಲಿ ಅಮ್ಜದ್ ಸಂಕಷ್ಟದಲ್ಲಿದ್ದರು. ಈ ವೇಳೆ ದಿವ್ಯಾ ಸಹಾಯ ಮಾಡಿದ್ದರು ಎನ್ನಲಾಗಿದೆ. ಲಾಕ್​ಡೌನ್​ ನಂತರದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು. ಮದುವೆ ನಂತರ ಇಬ್ಬರೂ ಚೆನ್ನೈನಲ್ಲಿ ನೆಲೆಸಿದ್ದರು. ಈಗ ಇವರ ಸಂಸಾರದ ಜಗಳ ಬೀದಿಗೆ ಬಂದಿದೆ.

‘ದಿವ್ಯಾ 3 ತಿಂಗಳ ಗರ್ಭಿಣಿ ಎನ್ನುವ ವಿಚಾರ ತಿಳಿದಿದ್ದರೂ ಕೂಡ ಅಮ್ಜದ್ ಖಾನ್​ ಅವರು ಹೊಟ್ಟೆಗೆ ಒದ್ದಿದ್ದಾರೆ. ಕಪಾಳಕ್ಕೆ ಹೊಡೆದಿದ್ದಾರೆ. ಸದ್ಯ ದಿವ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪೊಲೀಸರು ಅವರ ಹೇಳಿಕೆ ಪಡೆದಿದ್ದಾರೆ. ಅವರು ಆಸ್ಪತ್ರೆಯಿಂದ ಆಚೆಬಂದ ಮೇಲೆ ಪೊಲೀಸರಿಗೆ ದೂರು ಕೊಡುತ್ತೇವೆ’ ಎಂದು ದಿವ್ಯಾ ಪರ ವಕೀಲರು ಮಾಹಿತಿ ನೀಡಿದ್ದಾರೆ.

‘ನೀನು ಕನ್ನಡದ ನಟಿ. ನಮ್ಮ ರಾಜ್ಯಕ್ಕೆ ಬಂದು ಏನೂ ಮಾಡೋಕೆ ಆಗುವುದಿಲ್ಲ. ಇಲ್ಲಿ ನನ್ನ ಕಡೆಯವರು ತುಂಬಾ ಜನ ಇದ್ದಾರೆ’ ಎಂದು ಅಮ್ಜದ್ ಪತ್ನಿಗೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ದಿವ್ಯಾ ಪರ ವಕೀಲರು ಟಿವಿ9 ಕನ್ನಡದ ಜತೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಎಲ್ಲ ಆರೋಪಗಳನ್ನು ಅಮ್ಜದ್​ ಖಾನ್​ ತಳ್ಳಿ ಹಾಕಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್