AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ಬಿಗ್​ ಬಾಸ್​ನಿಂದ ದೀಪಿಕಾ ದಾಸ್​ ಎಲಿಮಿನೇಟ್​; 2ನೇ ಚಾನ್ಸ್​ನಲ್ಲೂ ಮುಗ್ಗರಿಸಿದ ಸೀರಿಯಲ್​ ನಟಿ

BBK9 | Bigg Boss Elimination: ದೀಪಿಕಾ ದಾಸ್​ ಎಲಿಮಿನೇಷನ್​ ಬಳಿಕ ಒಟ್ಟು 11 ಸ್ಪರ್ಧಿಗಳು ಈಗ ದೊಡ್ಮನೆಯಲ್ಲಿ ಇದ್ದಾರೆ. 9ನೇ ವಾರದಲ್ಲಿ ಬಿಗ್​ ಬಾಸ್​ ಆಟ ಮುಂದುವರಿದಿದೆ.

Deepika Das: ಬಿಗ್​ ಬಾಸ್​ನಿಂದ ದೀಪಿಕಾ ದಾಸ್​ ಎಲಿಮಿನೇಟ್​; 2ನೇ ಚಾನ್ಸ್​ನಲ್ಲೂ ಮುಗ್ಗರಿಸಿದ ಸೀರಿಯಲ್​ ನಟಿ
ದೀಪಿಕಾ ದಾಸ್
Follow us
TV9 Web
| Updated By: ಮದನ್​ ಕುಮಾರ್​

Updated on:Nov 20, 2022 | 9:37 PM

ಕಿರುತೆರೆ ಧಾರಾವಾಹಿಗಳ ಮೂಲಕ ಕರುನಾಡಿನಲ್ಲಿ ಮನೆಮಾತಾಗಿರುವ ನಟಿ ದೀಪಿಕಾ ದಾಸ್​ (Deepika Das) ಅವರಿಗೆ ಬಿಗ್​ ಬಾಸ್​ ಮೂಲಕ ಇನ್ನಷ್ಟು ಜನಪ್ರಿಯತೆ ಸಿಕ್ಕಿದೆ. ಆದರೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ (Bigg Boss Kannada Season 9) ಅವರ ಆಟವೀಗ ಅಂತ್ಯವಾಗಿದೆ. 8ನೇ ವಾರದಲ್ಲಿ ದೀಪಿಕಾ ದಾಸ್​ ಎಲಿಮಿನೇಟ್​ ಆಗಿದ್ದಾರೆ. ‘ಸೂಪರ್​ ಸಂಡೇ ವಿಥ್​ ಸುದೀಪ’ ಸಂಚಿಕೆಯಲ್ಲಿ ಕಿಚ್ಚ ಸುದೀಪ್​ (Kichcha Sudeep) ಅವರು ಎಲಿಮಿನೇಷನ್​ ವಿಚಾರ ಘೋಷಿಸಿದರು. ಈ ಮೊದಲು ‘ಬಿಗ್​ ಬಾಸ್​ ಕನ್ನಡ ಸೀಸನ್​ 7’ರಲ್ಲೂ ದೀಪಿಕಾ ದಾಸ್​ ಸ್ಪರ್ಧಿಸಿದ್ದರು. ಆಗ ಕೂಡ ಅವರಿಗೆ ಟ್ರೋಫಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಈ ವರ್ಷದ ಹೊಸ ಸೀಸನ್​ನಲ್ಲಿ ಅವರಿಗೆ ಮತ್ತೆ ದೊಡ್ಮನೆಗೆ ಎಂಟ್ರಿ ನೀಡುವ ಚಾನ್ಸ್​ ಸಿಕ್ಕಿತು. ಆದರೆ 2ನೇ ಅವಕಾಶದಲ್ಲೂ ಅವರು ಮುಗ್ಗರಿಸಿದ್ದಾರೆ. ಟ್ರೋಫಿ ಗೆಲ್ಲುವ ಅವರ ಕನಸು ಭಗ್ನವಾಗಿದೆ.

ಕಿಚ್ಚ ಸುದೀಪ್​ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡುತ್ತಿದ್ದಾರೆ. ಈ ಬಾರಿ ಪ್ರವೀಣರು (ಹಳಬರು) ಮತ್ತು ನವೀನರು (ಹೊಸಬರು) ಎಂಬ ಕಾನ್ಸೆಪ್ಟ್​ನಲ್ಲಿ ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿತ್ತು. ದೀಪಿಕಾ ದಾಸ್​ ಅವರು ಪ್ರವೀಣರ ಗುಂಪಿನಿಂದ ಆಯ್ಕೆ ಆಗಿದ್ದರು. ಬಿಗ್​ ಬಾಸ್​ ಆಟದ ಬಗ್ಗೆ ಅವರಿಗೆ ಹೆಚ್ಚು ಅನುಭವ ಇತ್ತು. ಹಾಗಿದ್ದರೂ ಕೂಡ ಫಿನಾಲೆ ತಲುಪಲು ಅವರು ವಿಫಲರಾಗಿದ್ದಾರೆ.

9ನೇ ವಾರದಲ್ಲಿ ಬಿಗ್​ ಬಾಸ್​ ಆಟ ಮುಂದುವರಿದಿದೆ. ಒಟ್ಟು 11 ಸ್ಪರ್ಧಿಗಳು ಈಗ ದೊಡ್ಮನೆಯಲ್ಲಿ ಇದ್ದಾರೆ. ಪ್ರಶಾಂತ್​ ಸಂಬರ್ಗಿ, ರೂಪೇಶ್​ ರಾಜಣ್ಣ, ರೂಪೇಶ್​ ಶೆಟ್ಟಿ, ಅಮೂಲ್ಯಾ ಗೌಡ, ಕಾವ್ಯಶ್ರೀ ಗೌಡ, ವಿನೋದ್​ ಗೊಬ್ಬರಗಾಲ, ಅರುಣ್​ ಸಾಗರ್​, ರಾಕೇಶ್​ ಅಡಿಗ, ಅನುಪಮಾ ಗೌಡ, ದಿವ್ಯಾ ಉರುಡುಗ, ಆರ್ಯವರ್ಧನ್​ ಗುರೂಜಿ ನಡುವೆ ಹಣಾಹಣಿ ಮುಂದುವರಿದಿದೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಪ್ರಸಾರ ಆಗುತ್ತಿದೆ. ಸ್ಪರ್ಧಿಗಳ ಸಂಖ್ಯೆ ಕಡಿಮೆ ಆದಂತೆಲ್ಲ ಪೈಪೋಟಿಯ ಕಾವು ಹೆಚ್ಚುತ್ತಿದೆ. 11 ಸ್ಪರ್ಧಿಗಳ ಪೈಕಿ ಮುಂದಿನ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬ ಕೌತುಕ ಮೂಡಿದೆ. ಈ ಸೀಸನ್​ನಲ್ಲಿ 57 ದಿನಗಳು ಪೂರ್ಣ ಆಗಿವೆ. ರೂಪೇಶ್​ ರಾಜಣ್ಣ, ಪ್ರಶಾಂತ್​ ಸಂಬರ್ಗಿ ಅವರು ಅಬ್ಬರದ ಆಟ ಪ್ರದರ್ಶಿಸುತ್ತಿದ್ದಾರೆ. ಅರುಣ್​ ಸಾಗರ್​ ಹಾಗೂ ವಿನೋದ್​ ಗೊಬ್ಬರಗಾಲ ಅವರು ಹಾಸ್ಯದ ಮೂಲಕ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ರೂಪೇಶ್​ ರಾಜಣ್ಣ, ಆರ್ಯವರ್ಧನ್​ ಗುರೂಜಿ, ರಾಕೇಶ್​ ಅಡಿಗ ಅವರು ಬಿಗ್​ ಬಾಸ್​ ಒಟಿಟಿ ಶೋನಿಂದ ಈವರೆಗೂ ಆಟ ಮುಂದುವರಿಸಿಕೊಂಡು ಬಂದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:37 pm, Sun, 20 November 22

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ