AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kavya Gowda Marriage: ಕಾವ್ಯಾ ಗೌಡ ಮನೆಯಲ್ಲಿ ಮದುವೆ ಸಂಭ್ರಮ; ವಿವಾಹಕ್ಕೆ ಮಂಟಪ ಸಜ್ಜು

ಬೆಂಗಳೂರು ಮೂಲದ ಉದ್ಯಮಿ ಸೋಮಶೇಖರ್​ ಅವರನ್ನು ಕಾವ್ಯಾ ಗೌಡ ಮದುವೆ ಆಗುತ್ತಿದ್ದಾರೆ. ಮೇ 13ರಂದು ಈ ಜೋಡಿ ಬೆಂಗಳೂರಿನಲ್ಲಿ ಹಸೆಮಣೆ ಏರಬೇಕಿತ್ತು. ಬೆಂಗಳೂರಿನಲ್ಲಿ ಇಬ್ಬರೂ ಸಿಂಪಲ್​ ಆಗಿ ಮದುವೆ ಆಗಲು ನಿರ್ಧರಿಸಿದ್ದರು.

Kavya Gowda Marriage: ಕಾವ್ಯಾ ಗೌಡ ಮನೆಯಲ್ಲಿ ಮದುವೆ ಸಂಭ್ರಮ; ವಿವಾಹಕ್ಕೆ ಮಂಟಪ ಸಜ್ಜು
ಕಾವ್ಯಾ ಗೌಡ ಮನೆಯಲ್ಲಿ ಮದುವೆ ಸಂಭ್ರಮ
TV9 Web
| Edited By: |

Updated on: Dec 01, 2021 | 6:01 PM

Share

ಕೊರೊನಾ ಎರಡನೇ ಅಲೆ ಕಡಿಮೆ ಆದ ಬೆನ್ನಲ್ಲೇ ದೊಡ್ಡ ಬಜೆಟ್​ ಸಿನಿಮಾಗಳು ತೆರೆಗೆ ಬರುತ್ತಿವೆ. ಇದರ ಜತೆಜತೆಗೆ ಸೆಲೆಬ್ರಿಟಿಗಳು ಹಸೆಮಣೆ ಏರುತ್ತಿದ್ದಾರೆ. ಕೊವಿಡ್​ ಕಾರಣದಿಂದ ಮುಂದೂಡಲ್ಪಟ್ಟಿದ್ದ ವಿವಾಹ ಕಾರ್ಯಕ್ರಮಗಳು ಈಗ ಅದ್ದೂರಿಯಾಗಿ ನಡೆಯುತ್ತಿವೆ. ‘ರಾಧಾ ರಮಣ’ ಧಾರಾವಾಹಿ ಮೂಲಕ ಚಿರಪರಿಚಿತರಾದ ನಟಿ ಕಾವ್ಯಾ ಗೌಡ ಮನೆಯಲ್ಲಿ ಈಗ ಮದುವೆ ಸಂಭ್ರಮ ಕಳೆಗಟ್ಟಿದೆ. ಡಿಸೆಂಬರ್​ 2ರಂದು ಕಾವ್ಯಾ ಅವರು ಸೋಮಶೇಖರ್​ ಜತೆ ವಿವಾಹವಾಗುತ್ತಿದ್ದಾರೆ.

ಬೆಂಗಳೂರು ಮೂಲದ ಉದ್ಯಮಿ ಸೋಮಶೇಖರ್​ ಅವರನ್ನು ಕಾವ್ಯಾ ಗೌಡ ಮದುವೆ ಆಗುತ್ತಿದ್ದಾರೆ. ಮೇ 13ರಂದು ಈ ಜೋಡಿ ಬೆಂಗಳೂರಿನಲ್ಲಿ ಹಸೆಮಣೆ ಏರಬೇಕಿತ್ತು. ಬೆಂಗಳೂರಿನಲ್ಲಿ ಇಬ್ಬರೂ ಸಿಂಪಲ್​ ಆಗಿ ಮದುವೆ ಆಗಲು ನಿರ್ಧರಿಸಿದ್ದರು. ಆ ನಂತರ ಮದುವೆ ದಿನಾಂಕವನ್ನು ಮುಂದೂಡಲಾಗಿತ್ತು. ಈಗ ಮೆಹಂದಿ ಹಾಗೂ​ ಇತರ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದಿದ್ದು, ಡಿಸೆಂಬರ್ 2ರಂದು ಮದುವೆ ನಡೆಯುತ್ತಿದೆ.

ಮದುವೆ ತಯಾರಿ ಫೋಟೋಗಳನ್ನು ಕಾವ್ಯಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿವೆ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಈ ಜೋಡಿಗೆ ಶುಭಾಶಯ ಕೋರುತ್ತಿದ್ದಾರೆ. ಗುರುವಾರ ಈ ದಂಪತಿ ಅದ್ದೂರಿಯಾಗಿ ಮದುವೆಯಾಗುತ್ತಿದ್ದಾರೆ.

2015ರಲ್ಲಿ ತೆರೆಕಂಡ ‘ಶುಭ ವಿವಾಹ’ ಧಾರಾವಾಹಿ ಮೂಲಕ ಕಾವ್ಯಾ ಗೌಡ ತಮ್ಮ ಕಿರುತೆರೆ ಪಯಣ ಆರಂಭಿಸಿದರು. ನಂತರ ರಾಧಾ ರಮಣದಲ್ಲಿ ರಾಧಾ ಆಗಿ ಕಾಣಿಸಿಕೊಂಡರು. ಗಾಂಧಾರಿ ಧಾರಾವಾಹಿಯಲ್ಲೂ ಕಾವ್ಯಾ ನಟಿಸಿದ್ದರು. 2018ರಲ್ಲಿ ತೆರೆಕಂಡ ಬಕಾಸುರ ಸಿನಿಮಾ ಮೂಲಕ ಹಿರಿತೆರೆಗೆ ಕಾಲಿಟ್ಟರು.

ಈ ವರ್ಷ ಏಪ್ರಿಲ್​ ಸಂದರ್ಭದಲ್ಲಿ ದುಬೈಗೆ ತೆರಳಿದ್ದ ಅವರು ಅಲ್ಲಿಂದಲೇ ತಮ್ಮ ಲೈಫ್​ ಪಾರ್ಟ್ನರ್​​​ಅನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ತಾವು ಮದುವೆ ಆಗುತ್ತಿರುವ ಹುಡುಗನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ‘ಹೆಲ್ಲೋ ಮೈ ಮುದ್ದು ಮಾ. ನಿನ್ನ ಜತೆ ಪ್ರಯಾಣ ಬೆಳೆಸಲು ನಾನು ಕಾಯುತ್ತಿದ್ದೆ. ನಿನ್ನ ಜತೆ ಕಳೆದಿದ್ದು ನನ್ನ ಜೀವನದ ಅತ್ಯುತ್ತಮ ಕ್ಷಣಗಳು. ನನ್ನ ಜೀವನದಲ್ಲಿ ನಿನ್ನಂತ ಅದ್ಭುತ ವ್ಯಕ್ತಿಯನ್ನು ನಾನೆಂದು ಭೇಟಿ ಮಾಡಿಯೇ ಇರಲಿಲ್ಲ. ನಿನ್ನ ಎಲ್ಲಾ ಗುಣಗಳು ನಂಗೆ ಇಷ್ಟ. ನನ್ನ ಜೀವನವನ್ನು ಇಷ್ಟೊಂದು ಕಲರ್​ಫುಲ್​ ಮಾಡಿದ್ದಕ್ಕೆ ಧನ್ಯವಾದಗಳು’ ಎಂದಿದ್ದರು.

ಇದನ್ನೂ ಓದಿ: ಆಹಾರಕ್ಕಿಂತಲೂ ನನಗೆ ಸೆಕ್ಸ್​ ಮುಖ್ಯ ಎಂದು ಹೇಳಿದ್ದ ಸಮಂತಾ; ವಿಡಿಯೋ ವೈರಲ್​

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ