AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ನಟಿಯ ಜತೆಗಿನ ಪ್ರೀತಿಯನ್ನು ಅಧಿಕೃತ ಮಾಡಿದ ಹೀರೋ; ಮೊದಲೇ ಗೊತ್ತಿತ್ತು ಎಂದ ಫ್ಯಾನ್ಸ್​

ಆರ್ಯನ್​ ಅವವರು ಇತ್ತೀಚೆಗೆ ಮ್ಯಾಚಿಂಗ್​ ರಿಂಗ್​ನ ಫೋಟೋವನ್ನು ಪೋಸ್ಟ್ ಮಾಡಿದ್ದರು. ಇದು ಶಬಾನಾ ಮತ್ತು ಆರ್ಯನ್​ ನಡುವೆ ಪ್ರೀತಿ ಮೊಳೆತಿದೆ ಎನ್ನುವ ಸುದ್ದಿಗೆ ಪುಷ್ಠಿ ನೀಡಿತ್ತು.

ಕಿರುತೆರೆ ನಟಿಯ ಜತೆಗಿನ ಪ್ರೀತಿಯನ್ನು ಅಧಿಕೃತ ಮಾಡಿದ ಹೀರೋ; ಮೊದಲೇ ಗೊತ್ತಿತ್ತು ಎಂದ ಫ್ಯಾನ್ಸ್​
ಶಬಾನಾ-ಆರ್ಯನ್
TV9 Web
| Edited By: |

Updated on:Sep 29, 2021 | 5:31 PM

Share

ಚಿತ್ರರಂಗದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಾ ಇರುವಾಗ ನಟ-ನಟಿಯರ ಮಧ್ಯೆ ಪ್ರೀತಿ ಮೊಳೆತು ಮದುವೆ ಆದ ಉದಾಹರಣೆ ಸಾಕಷ್ಟಿದೆ. ಯಶ್ ಮತ್ತು ರಾಧಿಕಾ ಪಂಡಿತ್​ ಸೇರಿ ಸಾಕಷ್ಟು  ಮಂದಿ ಒಂದೇ ಸಿನಿಮಾದಲ್ಲಿ ಕೆಲಸ ಮಾಡಿ ಮದುವೆ ಆಗಿದ್ದಾರೆ. ಈಗ ಈ ಸಾಲಿಗೆ ಹೊಸದೊಂದು ಸೇರ್ಪಡೆ ಆಗುತ್ತಿದೆ. ತಮಿಳು ಕಿರುತೆರೆ ನಟಿ ಶಬಾನಾ ಶಜಹಾನ್​ ಜತೆ ಪ್ರೀತಿಯಲ್ಲಿರುವ ವಿಚಾರವನ್ನು ನಟ ಆರ್ಯನ್​ ಅಧಿಕೃತ ಮಾಡಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಸಾಕಷ್ಟು ಕುತೂಹಲ ಮೂಡಿಸಿದೆ.

ಆರ್ಯನ್​ ಅವರು ಇತ್ತೀಚೆಗೆ ಮ್ಯಾಚಿಂಗ್​ ರಿಂಗ್​ನ ಫೋಟೋವನ್ನು ಪೋಸ್ಟ್ ಮಾಡಿದ್ದರು. ಇದು ಶಬಾನಾ ಮತ್ತು ಆರ್ಯನ್​ ನಡುವೆ ಪ್ರೀತಿ ಮೊಳೆತಿದೆ ಎನ್ನುವ ಸುದ್ದಿಗೆ ಪುಷ್ಠಿ ನೀಡಿತ್ತು.  ಆದರೆ, ಇಬ್ಬರೂ ಈ ವಿಚಾರದಲ್ಲಿ ಮೌನ ವಹಿಸಿದ್ದರು. ಈಗ ಆರ್ಯನ್​ ತಮ್ಮ ಸಂಬಂಧವನ್ನು ಅಧಿಕೃತ ಮಾಡಿದ್ದಾರೆ.

ಶಬಾನಾ ಜತೆ ನಿಂತಿರುವ ಫೋಟೋವನ್ನು ಆರ್ಯನ್​ ಪೋಸ್ಟ್ ಮಾಡಿದ್ದಾರೆ. ಆ ಫೋಟೋಗೆ ‘ದೇವರು ನೀಡಿದ ಅತಿದೊಡ್ಡ ಗಿಫ್ಟ್’​ ಎನ್ನುವ ಕ್ಯಾಪ್ಶನ್​ ನೀಡಿದ್ದಾರೆ. ಈ ಮೂಲಕ ಎಲ್ಲಾ ವದಂತಿಗೆ ಬ್ರೇಕ್​ ಕೊಟ್ಟು ತಮ್ಮ ಸಂಬಂಧವನ್ನು ಅಧಿಕೃತ ಮಾಡಿದ್ದಾರೆ. ಈ ಫೋಟೋದಲ್ಲಿ ಶಬಾನಾ ಬಿಳಿ ಬಣ್ಣದ ಡ್ರೆಸ್​ನಲ್ಲಿ ಕಾಣಿಸಿಕೊಂಡರೆ, ಆರ್ಯನ್​ ಕುರ್ತಾದಲ್ಲಿ ಮಿಂಚಿದ್ದಾರೆ.

View this post on Instagram

A post shared by Aryan (@aryan_offl)

ಮದುವೆ ವಿಚಾರ ಅಧಿಕೃತ ಮಾಡಿದ ಬೆನ್ನಲ್ಲೇ ಸಾಕಷ್ಟು ವರದಿಗಳು ಈ ಬಗ್ಗೆ ಹರಿದಾಡಿವೆ. ಮೂಲಗಳ ಪ್ರಕಾರ ಇಬ್ಬರೂ ಶೀಘ್ರವೇ ಮದುವೆ ಆಗಲಿದ್ದಾರೆ ಎನ್ನಲಾಗಿದೆ. ಅದಕ್ಕಾಗಿಯೇ ಇಬ್ಬರೂ ತಮ್ಮ ಸಂಬಂಧವನ್ನು ಅಧಿಕೃತ ಮಾಡಿದ್ದಾರೆ ಎಂದು ಕೆಲ ವರದಿಗಳು ತಿಳಿಸಿವೆ.

ಈ ವರ್ಷ ಮೇ ತಿಂಗಳಿಂದಲೇ ಇವರಿಬ್ಬರ ಪ್ರೀತಿ ವಿಚಾರದ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಮಹಿಳಾ ಅಭಿಮಾನಿಯೊಬ್ಬರು ಆರ್ಯನ್​​ಗೆ ಸೋಶಿಯಲ್​ ಮೀಡಿಯಾ ಕಮೆಂಟ್​ ಬಾಕ್ಸ್​ನಲ್ಲಿ ಪ್ರಪೋಸ್​ ಮಾಡಿದ್ದರು. ಈ ಕಮೆಂಟ್​ಗೆ ಅವರು ಶಬಾನಾ ಅವರನ್ನು ಟ್ಯಾಗ್​ ಮಾಡುವ ಮೂಲಕ ಸಾಕಷ್ಟು ಸುದ್ದಿಯಾಗಿದ್ದರು.

ಶಬಾನಾ 2016ರಲ್ಲಿ ಧಾರಾವಾಹಿ ಲೋಕಕ್ಕೆ ಕಾಲಿಟ್ಟರು. ಆರಂಭದಲ್ಲಿ ಮಲಯಾಳಂ ಧಾರಾವಾಹಿಯಲ್ಲಿ ನಟಿಸುತ್ತಿದ್ದ ಅವರು ನಂತರ ತಮಿಳು ಕಿರುತೆರೆ ಲೋಕಕ್ಕೆ ಕಾಲಿಟ್ಟರು. ಅವರು ನಟಿಸುತ್ತಿರುವ ಸೆಂಬರುಥಿ ಧಾರಾವಾಹಿ 1000 ಎಪಿಸೋಡ್​ ಮುಗಿಸಿ ಮುನ್ನುಗ್ಗುತ್ತಿದೆ.

ಇದನ್ನೂ ಓದಿ: ವಿವಾದಾತ್ಮಕ ಫೋಟೋಶೂಟ್​ ಮಾಡಿಸಿ ಬಂಧನಕ್ಕೆ ಒಳಗಾದ ಕಿರುತೆರೆ ನಟಿ

ಖ್ಯಾತ ಕಿರುತೆರೆ ನಟಿ ವಿರುದ್ಧ ಅಭಿಮಾನಿಯಿಂದಲೇ ಕಿರುಕುಳ ಆರೋಪ

Published On - 5:03 pm, Wed, 29 September 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!