AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಂದು ಜೊತೆ ಜೊತೆಯಲಿ ನಾಯಕಿ ಕ್ಷಮೆ ಕೇಳಿದ್ದರು’; ಹಳೆಯ ಘಟನೆ ನೆನೆದ ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್

ಕೊವಿಡ್ ಸಂದರ್ಭದಲ್ಲಿ ಮೇಘಾ ಶೆಟ್ಟಿ ಅವರು ಧಾರಾವಾಹಿಯಿಂದ ಹೊರ ನಡೆಯಲಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದರು.

‘ಅಂದು ಜೊತೆ ಜೊತೆಯಲಿ ನಾಯಕಿ ಕ್ಷಮೆ ಕೇಳಿದ್ದರು’; ಹಳೆಯ ಘಟನೆ ನೆನೆದ ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್
TV9 Web
| Edited By: |

Updated on:Aug 20, 2022 | 3:03 PM

Share

ಜೀ ಕನ್ನಡದಲ್ಲಿ (Zee Kannada) ಪ್ರಸಾರ ಆಗುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಧಾರಾವಾಹಿಯ ನಾಯಕ ಅನಿರುದ್ಧ ಹಾಗೂ ಧಾರಾವಾಹಿಯ ತಂತ್ರಜ್ಞರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ. ಎರಡು ವರ್ಷಗಳ ಕಾಲ ಅವರನ್ನು ಧಾರಾವಾಹಿಯಿಂದ ಹೊರಗಿಡುವ ನಿರ್ಧಾರಕ್ಕೆ ಬರಲಾಗಿದೆ. ಈ ಬಗ್ಗೆ ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ಅವರು ಮಾತನಾಡಿದ್ದಾರೆ. ಅಷ್ಟೇ ಅಲ್ಲದೆ, ಧಾರಾವಾಹಿಯ ಕಥಾ ನಾಯಕಿ ಮೇಘಾ ಶೆಟ್ಟಿ (Megha Shetty) ಬಗ್ಗೆ ಮಾತನಾಡಿದ್ದಾರೆ.

ಕೊವಿಡ್ ಸಂದರ್ಭದಲ್ಲಿ ಮೇಘಾ ಶೆಟ್ಟಿ ಅವರು ಧಾರಾವಾಹಿಯಿಂದ ಹೊರ ನಡೆಯಲಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದರು. ‘ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಟಿಸುತ್ತಿಲ್ಲ ಎನ್ನುವ ಸುದ್ದಿ ನಾಲ್ಕೈದು ದಿನಗಳಿಂದ ಹರಿದಾಡಿತ್ತು. ಕುಟುಂಬ ಎಂದಾಗ ಗೊಂದಲ ಸಹಜ. ಈಗ ಗೊಂದಲ ಬಗೆಹರಿದಿದೆ. ಧಾರಾವಾಹಿ ಮುಗಿಯುವ ತನಕ ಅನು ಸಿರಿಮನೆ ಪಾತ್ರವನ್ನು ನಾನೇ ಮಾಡುತ್ತೇನೆ’ ಎಂದು ಮೇಘಾ ಶೆಟ್ಟಿ ಅಂದು ಭರವಸೆ ನೀಡಿದ್ದರು. ಅಂದು ಏನಾಗಿತ್ತು ಎಂಬ ವಿಚಾರದ ಬಗ್ಗೆ ಭಾಸ್ಕರ್ ಈಗ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
Aniruddha Press Meet: ಭಿನ್ನಾಭಿಪ್ರಾಯಗಳು ಮನೆಯಲ್ಲಿ ಇದ್ದೇ ಇರುತ್ತೆ, ನನಗೆ ಯಾವುದೇ ದುರಹಂಕಾರ ಇಲ್ಲ: ನಟ ಅನಿರುದ್ಧ
Image
Aniruddha Jatkar: ಜೊತೆ ಜೊತೆಯಲಿ​ ತಂಡದಿಂದ ಅನಿರುದ್ಧ್ ಬ್ಯಾನ್: ನಿಷೇಧಕ್ಕೆ ಅವಕಾಶವಿಲ್ಲ ಎಂದ ಟೆಲಿವಿಷನ್ ಅಸೋಸಿಯೇಷನ್
Image
Megha Shetty:ವೀಕ್ಷಕರ ಬಳಿ ಕ್ಷಮೆ ಕೇಳಿದ ‘ಜೊತೆ ಜೊತೆಯಲಿ’ ನಟಿ ಮೇಘಾ ಶೆಟ್ಟಿ

‘ಕೊವಿಡ್ ಸಂದರ್ಭದಲ್ಲಿ ಶೂಟಿಂಗ್​ಗಾಗಿ ಎಲ್ಲಾ ಧಾರಾವಾಹಿ ಟೀಂ ಹೈದರಾಬಾದ್​ಗೆ ತೆರಳಿತ್ತು. ಆ ಸಂದರ್ಭದಲ್ಲಿ ಆರೂರು ಜಗದೀಶ್ ಅವರು ಕಣ್ಣೀರು ಹಾಕಿದ್ದರು. ಎಲ್ಲಾ ತಂಡದವರು ಸುಗಮವಾಗಿ ಶೂಟಿಂಗ್ ಮಾಡುತ್ತಿದ್ದರು. ಆದರೆ, ಈ ಟೀಂನಿಂದ ಮಾತ್ರ ದೂರು ಬರುತ್ತಿತ್ತು. ಕಥಾನಾಯಕಿಯನ್ನು ಸೀರಿಯಲ್​​ನಿಂದ ತೆಗೆಯಬೇಕು ಎಂದು ನಾವು ಎಲ್ಲರೂ ಸೇರಿ ನಿರ್ಧರಿಸಿದ್ದೆವು. ಅವರಿಗೂ ಆ ಮಾತನ್ನು ಹೇಳಿದ್ದೆವು. ಆದರೆ, ತಪ್ಪಿನ ಅರಿವಾಗಿ ಅವರು ಕ್ಷಮೆ ಕೇಳಿದ್ದರು’ ಎಂದಿದ್ದಾರೆ ಭಾಸ್ಕರ್.

ಇದನ್ನೂ ಓದಿ: ‘ಜೊತೆ ಜೊತೆಯಲಿ’ ಧಾರಾವಾಹಿಯ ಗೆಲುವಿನ ಸೂತ್ರವೇನು? ನಟಿ ಮೇಘಾ ಶೆಟ್ಟಿ ವಿವರಿಸಿದ್ದು ಹೀಗೆ

ಸದ್ಯ, ಅನಿರುದ್ಧ್ ಅವರನ್ನು ಎರಡು ವರ್ಷಗಳ ಕಾಲ ಕಿರುತೆರೆ ಲೋಕದಿಂದ ಹೊರಗಿಡುವ ನಿರ್ಧಾರಕ್ಕೆ ಬರಲಾಗಿದೆ. ಮುಂದಿನ ದಿನಗಳಲ್ಲಿ ಅನಿರುದ್ಧ್​​ಗೂ ಹಾಗೂ ಧಾರಾವಾಹಿ ತಂಡಕ್ಕೂ ರಾಜಿ ಆಗಲಿದೆಯೇ ಎಂಬುದು ಸದ್ಯದ ಕುತೂಹಲ. ಮತ್ತೆ ನಟಿಸಲು ಸಿದ್ಧರಿರುವುದಾಗಿ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಒಂದೊಮ್ಮೆ ಅನಿರುದ್ಧ ಹೊರಗುಳಿದಿದ್ದೇ ಆದಲ್ಲಿ ಬೇರೆ ಕಲಾವಿದರನ್ನು ಇಟ್ಟುಕೊಂಡು ‘ಜೊತೆ ಜೊತೆಯಲಿ’ ಮುನ್ನಡೆಸಲಾಗುತ್ತದೆಯೇ ಎಂಬುದನ್ನೂ ಕಾದು ನೋಡಬೇಕಿದೆ.

Published On - 2:37 pm, Sat, 20 August 22

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ