AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳ ಆರೋಪ, ದೂರು ನೀಡಿದ ನಿರ್ಮಾಪಕ

Serial Producer KS Ramji: ‘ರಾಮಚಾರಿ’, ‘ಪುಟ್ಟಗೌರಿ ಮದುವೆ’, ‘ಗೀತಾ’, ‘ನಾಗಿಣಿ 2’ ಇನ್ನೂ ಹಲವು ಕನ್ನಡದ ಪ್ರಮುಖ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ಕೆಎಸ್ ರಾಮ್​ಜೀ ವಿರುದ್ಧ ಲೈಂಗಿಕ ಕಿರುಕುಳ ಆರೋಪಗಳನ್ನು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದಾರೆ. ಇದೀಗ ರಾಮ್​ ಜೀ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಲೈಂಗಿಕ ಕಿರುಕುಳ ಆರೋಪ, ದೂರು ನೀಡಿದ ನಿರ್ಮಾಪಕ
Ks Ramji
ಮಂಜುನಾಥ ಸಿ.
|

Updated on: Feb 02, 2025 | 8:42 AM

Share

ಕನ್ನಡ ಕಿರುತೆರೆಯ ನಿರ್ದೇಶಕ ಮತ್ತು ನಿರ್ಮಾಪಕ ಕೆಎಸ್ ರಾಮ್​ಜೀ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಪೋಸ್ಟ್​ಗಳು ಫೇಸ್​ಬುಕ್​ನಲ್ಲಿ ಹರಿದಾಡುತ್ತಿವೆ. ಇದೀಗ ನಿರ್ಮಾಪಕ ರಾಮ್​ಜೀ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ತಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ. ಯುವ ನಟಿಯೊಬ್ಬಾಕೆ ರಾಮ್​ಜೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇದೇ ನಟಿಯ ಕುಮ್ಮಕ್ಕಿನಿಂದ ಈಗ ಸಾಮಾಜಿಕ ಜಾಲತಾಣದಲ್ಲಿ ರಾಮ್​ಜೀ ವಿರುದ್ಧ ಪೋಸ್ಟ್​ಗಳು ಹರಿದಾಡುತ್ತಿವೆ.

ಸಾಮಾಜಿಕ ಜಾಲತಾಣದಲ್ಲಿ ‘ಎಕ್ಸ್​ಪೋಸಿಂಗ್ ಕೆಎಸ್ ರಾಮ್​ಜೀ’ ಹೆಸರಿನ ಪೇಜ್ ತೆರೆದು ರಾಮ್​ಜೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಗಳನ್ನು ಮಾಡಲಾಗುತ್ತಿದೆ. ಧಾರಾವಾಹಿಯಲ್ಲಿ ಅವಕಾಶ ನೀಡುವುದಾಗಿ ನಂಬಿಸಿ ಯುವತಿಗೆ ಮೋಸ ಮಾಡಿದ್ದಾರೆ. ಆ ಯುವತಿ ತನಗಾದ ಅನ್ಯಾಯದ ವಿರುದ್ಧ ಸಿಡಿದೆದ್ದಿದ್ದು, ಕೆಲವು ಸುದ್ದಿ ವಾಹಿನಿಗಳ ಕದ ತಟ್ಟಿದ್ದರು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ ಆದರೆ, ಕೆ ಎಸ್‌ ರಾಮ್‌ಜಿ ನ್ಯಾಯಾಲಯದ ಮೊರೆ ಹೋಗಿ ಕಾರ್ಯಕ್ರಮ ಪ್ರಸಾರ ಮಾಡದಂತೆ ತಡೆ ತಂದಿದ್ದಾರೆ’ ಎಂಬ ಪೋಸ್ಟ್​ಗಳನ್ನು ಫೇಸ್​ಬುಕ್ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ:‘ಆತನಿಂದ ಜೀವನ ನರಕವಾಯ್ತು’; ಧಾರಾವಾಹಿ ತೊರೆಯಲು ಕಾರಣ ತಿಳಿಸಿದ ನಯನಾ ನಾಗರಾಜ್

ತಮ್ಮ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ನಿರ್ಮಾಪಕ ಕೆಎಸ್ ರಾಮ್​ಜೀ ಪೊಲೀಸರಿಗೆ ದೂರು ನೀಡಿದ್ದಾರೆ. ಶೀಘ್ರವೇ ಆರೋಪಿಗಳನ್ನು ಬಂಧಿಸಬೇಕೆಂದು ರಾಮ್​ಜೀ ಮನವಿ ಮಾಡಿದ್ದಾರೆ. ‘ತಾವು ಯಾವ ಯುವತಿಗೂ ಲೈಂಗಿಕ ಕಿರುಕುಳ ನೀಡಿಲ್ಲ, ಯಾವುದೇ ಅಪರಾಧ ಮಾಡಿಲ್ಲ ಎಂದು ರಾಮ್​ಜೀ ಹೇಳಿದ್ದಾರೆ.

ಕೆಎಸ್ ರಾಮ್​ಜೀ ಜನಪ್ರಿಯ ಕನ್ನಡ ಧಾರಾವಾಹಿಗಳಾದ ‘ಪುಟ್ಟಗೌರಿ ಮದುವೆ’, ‘ಗೀತಾ’, ‘ನಾಗಿಣಿ 2’, ‘ರಾಮಾಚಾರಿ’ ಇನ್ನೂ ಹಲವು ಧಾರಾವಾಹಿಗಳನ್ನು ನಿರ್ಮಾಣ, ನಿರ್ದೇಶನಗಳನ್ನು ಸಹ ಮಾಡಿದ್ದಾರೆ. ಧಾರಾವಾಹಿಯಲ್ಲಿ ನಟಿಸಲು ಅವಕಾಶ ಕೇಳಿಕೊಂಡು ಬಂದ ಯುವತಿಯೊಬ್ಬಾಕೆ, ಅವಕಾಶ ಸಿಗದ ಕಾರಣ ರಾಮ್​ಜೀ ವಿರುದ್ಧ ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂಬ ಸುದ್ದಿಯೂ ಸಹ ಹರಿದಾಡುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ