AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳ ಆರೋಪ, ದೂರು ನೀಡಿದ ನಿರ್ಮಾಪಕ

Serial Producer KS Ramji: ‘ರಾಮಚಾರಿ’, ‘ಪುಟ್ಟಗೌರಿ ಮದುವೆ’, ‘ಗೀತಾ’, ‘ನಾಗಿಣಿ 2’ ಇನ್ನೂ ಹಲವು ಕನ್ನಡದ ಪ್ರಮುಖ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ಕೆಎಸ್ ರಾಮ್​ಜೀ ವಿರುದ್ಧ ಲೈಂಗಿಕ ಕಿರುಕುಳ ಆರೋಪಗಳನ್ನು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದಾರೆ. ಇದೀಗ ರಾಮ್​ ಜೀ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಲೈಂಗಿಕ ಕಿರುಕುಳ ಆರೋಪ, ದೂರು ನೀಡಿದ ನಿರ್ಮಾಪಕ
Ks Ramji
ಮಂಜುನಾಥ ಸಿ.
|

Updated on: Feb 02, 2025 | 8:42 AM

Share

ಕನ್ನಡ ಕಿರುತೆರೆಯ ನಿರ್ದೇಶಕ ಮತ್ತು ನಿರ್ಮಾಪಕ ಕೆಎಸ್ ರಾಮ್​ಜೀ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಪೋಸ್ಟ್​ಗಳು ಫೇಸ್​ಬುಕ್​ನಲ್ಲಿ ಹರಿದಾಡುತ್ತಿವೆ. ಇದೀಗ ನಿರ್ಮಾಪಕ ರಾಮ್​ಜೀ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ತಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ. ಯುವ ನಟಿಯೊಬ್ಬಾಕೆ ರಾಮ್​ಜೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇದೇ ನಟಿಯ ಕುಮ್ಮಕ್ಕಿನಿಂದ ಈಗ ಸಾಮಾಜಿಕ ಜಾಲತಾಣದಲ್ಲಿ ರಾಮ್​ಜೀ ವಿರುದ್ಧ ಪೋಸ್ಟ್​ಗಳು ಹರಿದಾಡುತ್ತಿವೆ.

ಸಾಮಾಜಿಕ ಜಾಲತಾಣದಲ್ಲಿ ‘ಎಕ್ಸ್​ಪೋಸಿಂಗ್ ಕೆಎಸ್ ರಾಮ್​ಜೀ’ ಹೆಸರಿನ ಪೇಜ್ ತೆರೆದು ರಾಮ್​ಜೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಗಳನ್ನು ಮಾಡಲಾಗುತ್ತಿದೆ. ಧಾರಾವಾಹಿಯಲ್ಲಿ ಅವಕಾಶ ನೀಡುವುದಾಗಿ ನಂಬಿಸಿ ಯುವತಿಗೆ ಮೋಸ ಮಾಡಿದ್ದಾರೆ. ಆ ಯುವತಿ ತನಗಾದ ಅನ್ಯಾಯದ ವಿರುದ್ಧ ಸಿಡಿದೆದ್ದಿದ್ದು, ಕೆಲವು ಸುದ್ದಿ ವಾಹಿನಿಗಳ ಕದ ತಟ್ಟಿದ್ದರು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ ಆದರೆ, ಕೆ ಎಸ್‌ ರಾಮ್‌ಜಿ ನ್ಯಾಯಾಲಯದ ಮೊರೆ ಹೋಗಿ ಕಾರ್ಯಕ್ರಮ ಪ್ರಸಾರ ಮಾಡದಂತೆ ತಡೆ ತಂದಿದ್ದಾರೆ’ ಎಂಬ ಪೋಸ್ಟ್​ಗಳನ್ನು ಫೇಸ್​ಬುಕ್ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ:‘ಆತನಿಂದ ಜೀವನ ನರಕವಾಯ್ತು’; ಧಾರಾವಾಹಿ ತೊರೆಯಲು ಕಾರಣ ತಿಳಿಸಿದ ನಯನಾ ನಾಗರಾಜ್

ತಮ್ಮ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ನಿರ್ಮಾಪಕ ಕೆಎಸ್ ರಾಮ್​ಜೀ ಪೊಲೀಸರಿಗೆ ದೂರು ನೀಡಿದ್ದಾರೆ. ಶೀಘ್ರವೇ ಆರೋಪಿಗಳನ್ನು ಬಂಧಿಸಬೇಕೆಂದು ರಾಮ್​ಜೀ ಮನವಿ ಮಾಡಿದ್ದಾರೆ. ‘ತಾವು ಯಾವ ಯುವತಿಗೂ ಲೈಂಗಿಕ ಕಿರುಕುಳ ನೀಡಿಲ್ಲ, ಯಾವುದೇ ಅಪರಾಧ ಮಾಡಿಲ್ಲ ಎಂದು ರಾಮ್​ಜೀ ಹೇಳಿದ್ದಾರೆ.

ಕೆಎಸ್ ರಾಮ್​ಜೀ ಜನಪ್ರಿಯ ಕನ್ನಡ ಧಾರಾವಾಹಿಗಳಾದ ‘ಪುಟ್ಟಗೌರಿ ಮದುವೆ’, ‘ಗೀತಾ’, ‘ನಾಗಿಣಿ 2’, ‘ರಾಮಾಚಾರಿ’ ಇನ್ನೂ ಹಲವು ಧಾರಾವಾಹಿಗಳನ್ನು ನಿರ್ಮಾಣ, ನಿರ್ದೇಶನಗಳನ್ನು ಸಹ ಮಾಡಿದ್ದಾರೆ. ಧಾರಾವಾಹಿಯಲ್ಲಿ ನಟಿಸಲು ಅವಕಾಶ ಕೇಳಿಕೊಂಡು ಬಂದ ಯುವತಿಯೊಬ್ಬಾಕೆ, ಅವಕಾಶ ಸಿಗದ ಕಾರಣ ರಾಮ್​ಜೀ ವಿರುದ್ಧ ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂಬ ಸುದ್ದಿಯೂ ಸಹ ಹರಿದಾಡುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ