AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳ ಆರೋಪ, ದೂರು ನೀಡಿದ ನಿರ್ಮಾಪಕ

Serial Producer KS Ramji: ‘ರಾಮಚಾರಿ’, ‘ಪುಟ್ಟಗೌರಿ ಮದುವೆ’, ‘ಗೀತಾ’, ‘ನಾಗಿಣಿ 2’ ಇನ್ನೂ ಹಲವು ಕನ್ನಡದ ಪ್ರಮುಖ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ಕೆಎಸ್ ರಾಮ್​ಜೀ ವಿರುದ್ಧ ಲೈಂಗಿಕ ಕಿರುಕುಳ ಆರೋಪಗಳನ್ನು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದಾರೆ. ಇದೀಗ ರಾಮ್​ ಜೀ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಲೈಂಗಿಕ ಕಿರುಕುಳ ಆರೋಪ, ದೂರು ನೀಡಿದ ನಿರ್ಮಾಪಕ
Ks Ramji
ಮಂಜುನಾಥ ಸಿ.
|

Updated on: Feb 02, 2025 | 8:42 AM

Share

ಕನ್ನಡ ಕಿರುತೆರೆಯ ನಿರ್ದೇಶಕ ಮತ್ತು ನಿರ್ಮಾಪಕ ಕೆಎಸ್ ರಾಮ್​ಜೀ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಪೋಸ್ಟ್​ಗಳು ಫೇಸ್​ಬುಕ್​ನಲ್ಲಿ ಹರಿದಾಡುತ್ತಿವೆ. ಇದೀಗ ನಿರ್ಮಾಪಕ ರಾಮ್​ಜೀ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ತಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ. ಯುವ ನಟಿಯೊಬ್ಬಾಕೆ ರಾಮ್​ಜೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇದೇ ನಟಿಯ ಕುಮ್ಮಕ್ಕಿನಿಂದ ಈಗ ಸಾಮಾಜಿಕ ಜಾಲತಾಣದಲ್ಲಿ ರಾಮ್​ಜೀ ವಿರುದ್ಧ ಪೋಸ್ಟ್​ಗಳು ಹರಿದಾಡುತ್ತಿವೆ.

ಸಾಮಾಜಿಕ ಜಾಲತಾಣದಲ್ಲಿ ‘ಎಕ್ಸ್​ಪೋಸಿಂಗ್ ಕೆಎಸ್ ರಾಮ್​ಜೀ’ ಹೆಸರಿನ ಪೇಜ್ ತೆರೆದು ರಾಮ್​ಜೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಗಳನ್ನು ಮಾಡಲಾಗುತ್ತಿದೆ. ಧಾರಾವಾಹಿಯಲ್ಲಿ ಅವಕಾಶ ನೀಡುವುದಾಗಿ ನಂಬಿಸಿ ಯುವತಿಗೆ ಮೋಸ ಮಾಡಿದ್ದಾರೆ. ಆ ಯುವತಿ ತನಗಾದ ಅನ್ಯಾಯದ ವಿರುದ್ಧ ಸಿಡಿದೆದ್ದಿದ್ದು, ಕೆಲವು ಸುದ್ದಿ ವಾಹಿನಿಗಳ ಕದ ತಟ್ಟಿದ್ದರು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ ಆದರೆ, ಕೆ ಎಸ್‌ ರಾಮ್‌ಜಿ ನ್ಯಾಯಾಲಯದ ಮೊರೆ ಹೋಗಿ ಕಾರ್ಯಕ್ರಮ ಪ್ರಸಾರ ಮಾಡದಂತೆ ತಡೆ ತಂದಿದ್ದಾರೆ’ ಎಂಬ ಪೋಸ್ಟ್​ಗಳನ್ನು ಫೇಸ್​ಬುಕ್ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ:‘ಆತನಿಂದ ಜೀವನ ನರಕವಾಯ್ತು’; ಧಾರಾವಾಹಿ ತೊರೆಯಲು ಕಾರಣ ತಿಳಿಸಿದ ನಯನಾ ನಾಗರಾಜ್

ತಮ್ಮ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ನಿರ್ಮಾಪಕ ಕೆಎಸ್ ರಾಮ್​ಜೀ ಪೊಲೀಸರಿಗೆ ದೂರು ನೀಡಿದ್ದಾರೆ. ಶೀಘ್ರವೇ ಆರೋಪಿಗಳನ್ನು ಬಂಧಿಸಬೇಕೆಂದು ರಾಮ್​ಜೀ ಮನವಿ ಮಾಡಿದ್ದಾರೆ. ‘ತಾವು ಯಾವ ಯುವತಿಗೂ ಲೈಂಗಿಕ ಕಿರುಕುಳ ನೀಡಿಲ್ಲ, ಯಾವುದೇ ಅಪರಾಧ ಮಾಡಿಲ್ಲ ಎಂದು ರಾಮ್​ಜೀ ಹೇಳಿದ್ದಾರೆ.

ಕೆಎಸ್ ರಾಮ್​ಜೀ ಜನಪ್ರಿಯ ಕನ್ನಡ ಧಾರಾವಾಹಿಗಳಾದ ‘ಪುಟ್ಟಗೌರಿ ಮದುವೆ’, ‘ಗೀತಾ’, ‘ನಾಗಿಣಿ 2’, ‘ರಾಮಾಚಾರಿ’ ಇನ್ನೂ ಹಲವು ಧಾರಾವಾಹಿಗಳನ್ನು ನಿರ್ಮಾಣ, ನಿರ್ದೇಶನಗಳನ್ನು ಸಹ ಮಾಡಿದ್ದಾರೆ. ಧಾರಾವಾಹಿಯಲ್ಲಿ ನಟಿಸಲು ಅವಕಾಶ ಕೇಳಿಕೊಂಡು ಬಂದ ಯುವತಿಯೊಬ್ಬಾಕೆ, ಅವಕಾಶ ಸಿಗದ ಕಾರಣ ರಾಮ್​ಜೀ ವಿರುದ್ಧ ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂಬ ಸುದ್ದಿಯೂ ಸಹ ಹರಿದಾಡುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ