AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳ ಆರೋಪ, ದೂರು ನೀಡಿದ ನಿರ್ಮಾಪಕ

Serial Producer KS Ramji: ‘ರಾಮಚಾರಿ’, ‘ಪುಟ್ಟಗೌರಿ ಮದುವೆ’, ‘ಗೀತಾ’, ‘ನಾಗಿಣಿ 2’ ಇನ್ನೂ ಹಲವು ಕನ್ನಡದ ಪ್ರಮುಖ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ಕೆಎಸ್ ರಾಮ್​ಜೀ ವಿರುದ್ಧ ಲೈಂಗಿಕ ಕಿರುಕುಳ ಆರೋಪಗಳನ್ನು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದಾರೆ. ಇದೀಗ ರಾಮ್​ ಜೀ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಲೈಂಗಿಕ ಕಿರುಕುಳ ಆರೋಪ, ದೂರು ನೀಡಿದ ನಿರ್ಮಾಪಕ
Ks Ramji
ಮಂಜುನಾಥ ಸಿ.
|

Updated on: Feb 02, 2025 | 8:42 AM

Share

ಕನ್ನಡ ಕಿರುತೆರೆಯ ನಿರ್ದೇಶಕ ಮತ್ತು ನಿರ್ಮಾಪಕ ಕೆಎಸ್ ರಾಮ್​ಜೀ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಪೋಸ್ಟ್​ಗಳು ಫೇಸ್​ಬುಕ್​ನಲ್ಲಿ ಹರಿದಾಡುತ್ತಿವೆ. ಇದೀಗ ನಿರ್ಮಾಪಕ ರಾಮ್​ಜೀ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ತಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ. ಯುವ ನಟಿಯೊಬ್ಬಾಕೆ ರಾಮ್​ಜೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇದೇ ನಟಿಯ ಕುಮ್ಮಕ್ಕಿನಿಂದ ಈಗ ಸಾಮಾಜಿಕ ಜಾಲತಾಣದಲ್ಲಿ ರಾಮ್​ಜೀ ವಿರುದ್ಧ ಪೋಸ್ಟ್​ಗಳು ಹರಿದಾಡುತ್ತಿವೆ.

ಸಾಮಾಜಿಕ ಜಾಲತಾಣದಲ್ಲಿ ‘ಎಕ್ಸ್​ಪೋಸಿಂಗ್ ಕೆಎಸ್ ರಾಮ್​ಜೀ’ ಹೆಸರಿನ ಪೇಜ್ ತೆರೆದು ರಾಮ್​ಜೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಗಳನ್ನು ಮಾಡಲಾಗುತ್ತಿದೆ. ಧಾರಾವಾಹಿಯಲ್ಲಿ ಅವಕಾಶ ನೀಡುವುದಾಗಿ ನಂಬಿಸಿ ಯುವತಿಗೆ ಮೋಸ ಮಾಡಿದ್ದಾರೆ. ಆ ಯುವತಿ ತನಗಾದ ಅನ್ಯಾಯದ ವಿರುದ್ಧ ಸಿಡಿದೆದ್ದಿದ್ದು, ಕೆಲವು ಸುದ್ದಿ ವಾಹಿನಿಗಳ ಕದ ತಟ್ಟಿದ್ದರು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ ಆದರೆ, ಕೆ ಎಸ್‌ ರಾಮ್‌ಜಿ ನ್ಯಾಯಾಲಯದ ಮೊರೆ ಹೋಗಿ ಕಾರ್ಯಕ್ರಮ ಪ್ರಸಾರ ಮಾಡದಂತೆ ತಡೆ ತಂದಿದ್ದಾರೆ’ ಎಂಬ ಪೋಸ್ಟ್​ಗಳನ್ನು ಫೇಸ್​ಬುಕ್ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ:‘ಆತನಿಂದ ಜೀವನ ನರಕವಾಯ್ತು’; ಧಾರಾವಾಹಿ ತೊರೆಯಲು ಕಾರಣ ತಿಳಿಸಿದ ನಯನಾ ನಾಗರಾಜ್

ತಮ್ಮ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ನಿರ್ಮಾಪಕ ಕೆಎಸ್ ರಾಮ್​ಜೀ ಪೊಲೀಸರಿಗೆ ದೂರು ನೀಡಿದ್ದಾರೆ. ಶೀಘ್ರವೇ ಆರೋಪಿಗಳನ್ನು ಬಂಧಿಸಬೇಕೆಂದು ರಾಮ್​ಜೀ ಮನವಿ ಮಾಡಿದ್ದಾರೆ. ‘ತಾವು ಯಾವ ಯುವತಿಗೂ ಲೈಂಗಿಕ ಕಿರುಕುಳ ನೀಡಿಲ್ಲ, ಯಾವುದೇ ಅಪರಾಧ ಮಾಡಿಲ್ಲ ಎಂದು ರಾಮ್​ಜೀ ಹೇಳಿದ್ದಾರೆ.

ಕೆಎಸ್ ರಾಮ್​ಜೀ ಜನಪ್ರಿಯ ಕನ್ನಡ ಧಾರಾವಾಹಿಗಳಾದ ‘ಪುಟ್ಟಗೌರಿ ಮದುವೆ’, ‘ಗೀತಾ’, ‘ನಾಗಿಣಿ 2’, ‘ರಾಮಾಚಾರಿ’ ಇನ್ನೂ ಹಲವು ಧಾರಾವಾಹಿಗಳನ್ನು ನಿರ್ಮಾಣ, ನಿರ್ದೇಶನಗಳನ್ನು ಸಹ ಮಾಡಿದ್ದಾರೆ. ಧಾರಾವಾಹಿಯಲ್ಲಿ ನಟಿಸಲು ಅವಕಾಶ ಕೇಳಿಕೊಂಡು ಬಂದ ಯುವತಿಯೊಬ್ಬಾಕೆ, ಅವಕಾಶ ಸಿಗದ ಕಾರಣ ರಾಮ್​ಜೀ ವಿರುದ್ಧ ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂಬ ಸುದ್ದಿಯೂ ಸಹ ಹರಿದಾಡುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?