AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೋನ್ ಪ್ರತಾಪ್ ಹೆಸರಲ್ಲಿ ನಡೆಯುತ್ತಿದೆ ವಂಚನೆ; ಎಲ್ಲವನ್ನೂ ಬಿಚ್ಚಿಟ್ಟ ಸ್ಪರ್ಧಿ

ಡ್ರೋನ್ ಪ್ರತಾಪ್ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಆರಂಭದಲ್ಲಿ ಓಪನ್​ಅಪ್ ಆಗೋಕೆ ಅವರು ಕೆಲವು ಸಮಯ ತೆಗೆದುಕೊಂಡರು. ಈಗ ಅವರು ಎಲ್ಲರ ಜೊತೆಯೂ ಮಾತನಾಡುತ್ತಿದ್ದಾರೆ.

ಡ್ರೋನ್ ಪ್ರತಾಪ್ ಹೆಸರಲ್ಲಿ ನಡೆಯುತ್ತಿದೆ ವಂಚನೆ; ಎಲ್ಲವನ್ನೂ ಬಿಚ್ಚಿಟ್ಟ ಸ್ಪರ್ಧಿ
ಡ್ರೋನ್ ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on:Nov 09, 2023 | 2:33 PM

Share

ಬಿಗ್ ಬಾಸ್ ಮನೆ ಒಳಗೆ ಎಲ್ಲರೂ ಬೇರೆಯದೇ ಡ್ರೋನ್ ಪ್ರತಾಪ್ (Drone Prathap) ಅವರನ್ನು ನೋಡುತ್ತಿದ್ದಾರೆ. ಅವರ ನೋವುಗಳ ಬಗ್ಗೆ ಅವರು ಕೆಲವು ಬಾರಿ ಹೇಳಿಕೊಂಡಿದ್ದಾರೆ. ಮನೆಯವರ ಜೊತೆ ಮಾತು ಬಿಟ್ಟು ಅವರು ತುಂಬಾನೇ ವರ್ಷಗಳಾಗಿವೆ. ಇದರ ಜೊತೆ ಅವರು ಆಡುತ್ತಿರುವ ರೀತಿಯೂ ಎಲ್ಲರಿಗೂ ಇಷ್ಟವಾಗುತ್ತಿದೆ. ಈಗ ಡ್ರೋನ್ ಪ್ರತಾಪ್ ಅವರ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹೊಸ ಪೋಸ್ಟ್ ಒಂದನ್ನು ಮಾಡಲಾಗಿದೆ. ಅವರ ಹೆಸರಲ್ಲಿ ನಡೆಯುತ್ತಿರುವ ವಂಚನೆ ಬಗ್ಗೆ ಮಾಹಿತಿ ನೀಡಲಾಗಿದೆ.

ಬಿಗ್ ಬಾಸ್​ ಒಳಗೆ ಇರುವ ಸ್ಪರ್ಧಿಗಳ ಸೋಶಿಯಲ್ ಮೀಡಿಯಾ ಖಾತೆಯನ್ನು ಅವರ ಆಪ್ತರು ಅಥವಾ ಕುಟುಂಬದವರು ಬಳಕೆ ಮಾಡುತ್ತಾರೆ. ಅವರ ಖಾತೆಯಿಂದ ವೋಟ್ ಮಾಡುವಂತೆ ಕೋರಿಕೊಳ್ಳಲಾಗುತ್ತದೆ. ಪ್ರತಾಪ್ ಇನ್​ಸ್ಟಾಗ್ರಾಮ್ ಖಾತೆಯನ್ನು ಅವರ ಗೆಳೆಯರು ಬಳಕೆ ಮಾಡುತ್ತಿದ್ದಾರೆ. ಅವರ ಗಮನಕ್ಕೆ ಬಂದ ವಿಚಾರವನ್ನು ಪೋಸ್ಟ್ ಮಾಡಲಾಗಿದೆ.

‘ಸ್ನೇಹಿತರೇ ನಾವು ನಮ್ಮ ಖಾತೆಯಿಂದಾಗಲಿ ಹಾಗೂ ಅಧಿಕೃತ ಫ್ಯಾನ್​ ಪೇಜ್​ನಿಂದಾಲೀ ಯಾವುದೇ ರೀತಿಯ ಪೇಯ್ಡ್ ಪ್ರಮೋಷನ್ ಅಥವಾ ಪೇಯ್ಡ್ ಕೊಲಾಬರೇಷನ್ ಮಾಡುತ್ತಿಲ್ಲ. ಕೆಲವು ಫ್ಯಾನ್ ಪೇಜ್​ಗಳಲ್ಲಿ ಈ ರೀತಿಯ ನಡವಳಿಕೆ ಕಂಡು ಬಂದಿದೆ. ಕೆಲವರು ನಮಗೆ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ. ಇದರಿಂದ ನೀವುಗಳು ಮೋಸ ಹೋಗಬೇಡಿ. ಅದಕ್ಕೆ ನಾವು ಹೊಣೆಯಾಗಿರುವುದಿಲ್ಲ. ಅಂಥ ಖಾತೆಗಳನ್ನು ನೀವುಗಳು ರಿಪೋರ್ಟ್ ಮಾಡಬಹುದು’ ಎಂದು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಡ್ರೋನ್ ಪ್ರತಾಪ್ ಕೆಟ್ಟ ದೃಷ್ಠಿಯಿಂದ ನೋಡುತ್ತಾರೆಯೇ? ಬಿಗ್​ಬಾಸ್ ಮನೆ ಮಹಿಳೆಯರು ಹೇಳಿದ್ದೇನು?

View this post on Instagram

A post shared by Prathap N M (@droneprathap)

ಡ್ರೋನ್ ಪ್ರತಾಪ್ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಆರಂಭದಲ್ಲಿ ಓಪನ್​ಅಪ್ ಆಗೋಕೆ ಅವರು ಕೆಲವು ಸಮಯ ತೆಗೆದುಕೊಂಡರು. ಈಗ ಅವರು ಎಲ್ಲರ ಜೊತೆಯೂ ಮಾತನಾಡುತ್ತಿದ್ದಾರೆ. ಈ ವಾರ ಒಂದು ತಂಡದ ನಾಯಕನಾಗಿ ನಾಲ್ಕಕ್ಕೆ ನಾಲ್ಕು ಮ್ಯಾಚ್ ಗೆದ್ದಿದ್ದಾರೆ. ಬಿಗ್ ಬಾಸ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಣೆಗೆ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:12 pm, Thu, 9 November 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ