ಡ್ರೋನ್ ಪ್ರತಾಪ್ ಹೆಸರಲ್ಲಿ ನಡೆಯುತ್ತಿದೆ ವಂಚನೆ; ಎಲ್ಲವನ್ನೂ ಬಿಚ್ಚಿಟ್ಟ ಸ್ಪರ್ಧಿ

ಡ್ರೋನ್ ಪ್ರತಾಪ್ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಆರಂಭದಲ್ಲಿ ಓಪನ್​ಅಪ್ ಆಗೋಕೆ ಅವರು ಕೆಲವು ಸಮಯ ತೆಗೆದುಕೊಂಡರು. ಈಗ ಅವರು ಎಲ್ಲರ ಜೊತೆಯೂ ಮಾತನಾಡುತ್ತಿದ್ದಾರೆ.

ಡ್ರೋನ್ ಪ್ರತಾಪ್ ಹೆಸರಲ್ಲಿ ನಡೆಯುತ್ತಿದೆ ವಂಚನೆ; ಎಲ್ಲವನ್ನೂ ಬಿಚ್ಚಿಟ್ಟ ಸ್ಪರ್ಧಿ
ಡ್ರೋನ್ ಪ್ರತಾಪ್
Follow us
|

Updated on:Nov 09, 2023 | 2:33 PM

ಬಿಗ್ ಬಾಸ್ ಮನೆ ಒಳಗೆ ಎಲ್ಲರೂ ಬೇರೆಯದೇ ಡ್ರೋನ್ ಪ್ರತಾಪ್ (Drone Prathap) ಅವರನ್ನು ನೋಡುತ್ತಿದ್ದಾರೆ. ಅವರ ನೋವುಗಳ ಬಗ್ಗೆ ಅವರು ಕೆಲವು ಬಾರಿ ಹೇಳಿಕೊಂಡಿದ್ದಾರೆ. ಮನೆಯವರ ಜೊತೆ ಮಾತು ಬಿಟ್ಟು ಅವರು ತುಂಬಾನೇ ವರ್ಷಗಳಾಗಿವೆ. ಇದರ ಜೊತೆ ಅವರು ಆಡುತ್ತಿರುವ ರೀತಿಯೂ ಎಲ್ಲರಿಗೂ ಇಷ್ಟವಾಗುತ್ತಿದೆ. ಈಗ ಡ್ರೋನ್ ಪ್ರತಾಪ್ ಅವರ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹೊಸ ಪೋಸ್ಟ್ ಒಂದನ್ನು ಮಾಡಲಾಗಿದೆ. ಅವರ ಹೆಸರಲ್ಲಿ ನಡೆಯುತ್ತಿರುವ ವಂಚನೆ ಬಗ್ಗೆ ಮಾಹಿತಿ ನೀಡಲಾಗಿದೆ.

ಬಿಗ್ ಬಾಸ್​ ಒಳಗೆ ಇರುವ ಸ್ಪರ್ಧಿಗಳ ಸೋಶಿಯಲ್ ಮೀಡಿಯಾ ಖಾತೆಯನ್ನು ಅವರ ಆಪ್ತರು ಅಥವಾ ಕುಟುಂಬದವರು ಬಳಕೆ ಮಾಡುತ್ತಾರೆ. ಅವರ ಖಾತೆಯಿಂದ ವೋಟ್ ಮಾಡುವಂತೆ ಕೋರಿಕೊಳ್ಳಲಾಗುತ್ತದೆ. ಪ್ರತಾಪ್ ಇನ್​ಸ್ಟಾಗ್ರಾಮ್ ಖಾತೆಯನ್ನು ಅವರ ಗೆಳೆಯರು ಬಳಕೆ ಮಾಡುತ್ತಿದ್ದಾರೆ. ಅವರ ಗಮನಕ್ಕೆ ಬಂದ ವಿಚಾರವನ್ನು ಪೋಸ್ಟ್ ಮಾಡಲಾಗಿದೆ.

‘ಸ್ನೇಹಿತರೇ ನಾವು ನಮ್ಮ ಖಾತೆಯಿಂದಾಗಲಿ ಹಾಗೂ ಅಧಿಕೃತ ಫ್ಯಾನ್​ ಪೇಜ್​ನಿಂದಾಲೀ ಯಾವುದೇ ರೀತಿಯ ಪೇಯ್ಡ್ ಪ್ರಮೋಷನ್ ಅಥವಾ ಪೇಯ್ಡ್ ಕೊಲಾಬರೇಷನ್ ಮಾಡುತ್ತಿಲ್ಲ. ಕೆಲವು ಫ್ಯಾನ್ ಪೇಜ್​ಗಳಲ್ಲಿ ಈ ರೀತಿಯ ನಡವಳಿಕೆ ಕಂಡು ಬಂದಿದೆ. ಕೆಲವರು ನಮಗೆ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ. ಇದರಿಂದ ನೀವುಗಳು ಮೋಸ ಹೋಗಬೇಡಿ. ಅದಕ್ಕೆ ನಾವು ಹೊಣೆಯಾಗಿರುವುದಿಲ್ಲ. ಅಂಥ ಖಾತೆಗಳನ್ನು ನೀವುಗಳು ರಿಪೋರ್ಟ್ ಮಾಡಬಹುದು’ ಎಂದು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಡ್ರೋನ್ ಪ್ರತಾಪ್ ಕೆಟ್ಟ ದೃಷ್ಠಿಯಿಂದ ನೋಡುತ್ತಾರೆಯೇ? ಬಿಗ್​ಬಾಸ್ ಮನೆ ಮಹಿಳೆಯರು ಹೇಳಿದ್ದೇನು?

View this post on Instagram

A post shared by Prathap N M (@droneprathap)

ಡ್ರೋನ್ ಪ್ರತಾಪ್ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಆರಂಭದಲ್ಲಿ ಓಪನ್​ಅಪ್ ಆಗೋಕೆ ಅವರು ಕೆಲವು ಸಮಯ ತೆಗೆದುಕೊಂಡರು. ಈಗ ಅವರು ಎಲ್ಲರ ಜೊತೆಯೂ ಮಾತನಾಡುತ್ತಿದ್ದಾರೆ. ಈ ವಾರ ಒಂದು ತಂಡದ ನಾಯಕನಾಗಿ ನಾಲ್ಕಕ್ಕೆ ನಾಲ್ಕು ಮ್ಯಾಚ್ ಗೆದ್ದಿದ್ದಾರೆ. ಬಿಗ್ ಬಾಸ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಣೆಗೆ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:12 pm, Thu, 9 November 23

ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ