AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿನಾಲೆಗೂ ಮೊದಲೇ ಎಲಿಮಿನೇಟ್​ ಆದ ಶಮಂತ್​ ಬ್ರೋ ಗೌಡ

ಭಾನುವಾರ ಕೂಡ ಒಂದು ಎಲಿಮಿನೇಷನ್​ ನಡೆಯಲಿದೆ ಎಂದು ಸುದೀಪ್​ ಹೇಳಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ದಿವ್ಯಾ ಸುರೇಶ್​ ತಲೆಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿತ್ತು.

ಫಿನಾಲೆಗೂ ಮೊದಲೇ ಎಲಿಮಿನೇಟ್​ ಆದ ಶಮಂತ್​ ಬ್ರೋ ಗೌಡ
ಶಮಂತ್​ ಬ್ರೋ ಗೌಡ
TV9 Web
| Edited By: |

Updated on: Aug 01, 2021 | 9:40 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಫಿನಾಲೆಗೆ ಒಂದು ವಾರ ಮಾತ್ರ ಬಾಕಿ ಉಳಿದಿದೆ. ಅದಕ್ಕೂ ಮೊದಲು ಸದಸ್ಯರಿಗೆ ಎಲಿಮಿನೇಷನ್​ ಭೂತ ಎದುರಾಗಿದೆ. ಈ ವಾರ ಮನೆಯಿಂದ ಶಮಂತ್​ ಬ್ರೋ ಗೌಡ ಅವರು ಎಲಿಮಿನೇಟ್​ ಆಗಿದ್ದಾರೆ. ಲಕ್ಕಿ ಬಾಯ್​ ಎನಿಸಿಕೊಂಡಿದ್ದ ಅವರು, ಫಿನಾಲ್​ ವೀಕ್​ಗೆ ಲಗ್ಗೆ ಇಡುವಲ್ಲಿ ಎಡವಿದ್ದಾರೆ. ಈ ಮೂಲಕ ಮನೆಯ ಸ್ಪರ್ಧಿಗಳ ಸಂಖ್ಯೆ ಆರಕ್ಕೆ ಇಳಿಕೆ ಆಗಿದೆ.

ಫಿನಾಲೆ ಹಿಂದಿನ ವಾರ ಅಂದರೆ ಈ ವಾರ ಮನೆಯಲ್ಲಿ 9 ಸ್ಪರ್ಧಿಗಳು ಉಳಿದುಕೊಂಡಿದ್ದರು. ಸಾಮಾನ್ಯವಾಗಿ ವೀಕೆಂಡ್​ನಲ್ಲಿ ಎಲಿಮಿನೇಷನ್​ ನಡೆಯುತ್ತದೆ. ಆದರೆ, ಮಂಗಳವಾರ (ಜುಲೈ 27) ಚಕ್ರವರ್ತಿ ಚಂದ್ರಚೂಡ್​ ಎಲಿಮಿನೇಟ್​ ಆದರು. ಅಚ್ಚರಿ ಎಂಬಂತೆ, ಶನಿವಾರ (ಜುಲೈ 31) ಕೂಡ ಒಂದು ಎಲಿಮಿನೇಷನ್​ ನಡೆಯಿತು. ಈ ವೇಳೆ ಶುಭಾ ಪೂಂಜಾ ಮನೆಯಿಂದ ಹೊರ ನಡೆದರು. ಶುಭಾ ಪೂಂಜಾ ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ನಲ್ಲಿ ಅಷ್ಟಾಗಿ ಆ್ಯಕ್ಟಿವ್​ ಆಗಿರಲಿಲ್ಲ. ಇನ್ನು, ಉಳಿದ ಕಂಟೆಸ್ಟೆಂಟ್​ಗಳಿಗೆ ಹೋಲಿಸಿದರೆ, ಶುಭಾ ವೀಕ್​ ಆಗಿದ್ದರು. ಈ ಕಾರಣಕ್ಕೆ ಅವರು ಎಲಿಮಿನೇಟ್​ ಆಗಿದ್ದಾರೆ.

ಇನ್ನು, ಭಾನುವಾರ ಕೂಡ ಒಂದು ಎಲಿಮಿನೇಷನ್​ ನಡೆಯಲಿದೆ ಎಂದು ಸುದೀಪ್​ ಹೇಳಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ದಿವ್ಯಾ ಸುರೇಶ್​ ತಲೆಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿತ್ತು. ಈ ಪೈಕಿ ಶಮಂತ್​ ಅವರು ಇಂದು ಬಿಗ್​ ಬಾಸ್​ ಮನೆಯಿಂದ ಹೊರ ಹೋಗಿದ್ದಾರೆ.

ಶಮಂತ್​ ಮೊದಲ ಇನ್ನಿಂಗ್ಸ್​ನಲ್ಲೇ ಎಲಿಮಿನೇಟ್​ ಆಗಿದ್ದರು. ಆದರೆ, ಅದೃಷ್ಟ ರೀತಿಯಲ್ಲಿ ಅವರು ಬಚಾವ್​ ಆಗಿದ್ದರು. ಇದಾದ ನಂತರ ಅವರು ತಮ್ಮ ಕಲೆಯನ್ನು ಹೊರ ಹಾಕಿದರು. ಸಾಕಷ್ಟು ಹಾಡುಗಳನ್ನು ಅವರು ದೊಡ್ಮನೆಯಲ್ಲಿ ಬರೆದಿದ್ದಾರೆ. ಆದರೆ, ಈ ವಾರ ಅವರಿಗೆ ಅದೃಷ್ಟ ಕೈಕೊಟ್ಟಿದೆ.

ಇನ್ನು, ಮಂಗಳವಾರ (ಆಗಸ್ಟ್​ 3) ಮತ್ತೊಂದು ಎಲಿಮಿನೇಷನ್​ ನಡೆಯಲಿದೆ. ಅಲ್ಲಿಗೆ, ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳ ಸಂಖ್ಯೆ 5ಕ್ಕೆ ಇಳಿಕೆ ಆಗಲಿದೆ. ಫಿನಾಲೆಯಲ್ಲಿ ಇರುವವರು ಯಾರು ಅನ್ನೋದು ಸದ್ಯದ ಕುತೂಹಲ.

ಇದನ್ನೂ ಓದಿ: ಶಮಂತ್​ಗೆ ಬಿಗ್​ ಬಾಸ್​ ನೀಡಿದ್ರು ಸರ್​ಪ್ರೈಸ್​ ಗಿಫ್ಟ್​; ಭಾವುಕರಾದ ಬ್ರೋ ಗೌಡ

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್