AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿನಾಲೆಗೂ ಮೊದಲೇ ಎಲಿಮಿನೇಟ್​ ಆದ ಶಮಂತ್​ ಬ್ರೋ ಗೌಡ

ಭಾನುವಾರ ಕೂಡ ಒಂದು ಎಲಿಮಿನೇಷನ್​ ನಡೆಯಲಿದೆ ಎಂದು ಸುದೀಪ್​ ಹೇಳಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ದಿವ್ಯಾ ಸುರೇಶ್​ ತಲೆಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿತ್ತು.

ಫಿನಾಲೆಗೂ ಮೊದಲೇ ಎಲಿಮಿನೇಟ್​ ಆದ ಶಮಂತ್​ ಬ್ರೋ ಗೌಡ
ಶಮಂತ್​ ಬ್ರೋ ಗೌಡ
TV9 Web
| Edited By: |

Updated on: Aug 01, 2021 | 9:40 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಫಿನಾಲೆಗೆ ಒಂದು ವಾರ ಮಾತ್ರ ಬಾಕಿ ಉಳಿದಿದೆ. ಅದಕ್ಕೂ ಮೊದಲು ಸದಸ್ಯರಿಗೆ ಎಲಿಮಿನೇಷನ್​ ಭೂತ ಎದುರಾಗಿದೆ. ಈ ವಾರ ಮನೆಯಿಂದ ಶಮಂತ್​ ಬ್ರೋ ಗೌಡ ಅವರು ಎಲಿಮಿನೇಟ್​ ಆಗಿದ್ದಾರೆ. ಲಕ್ಕಿ ಬಾಯ್​ ಎನಿಸಿಕೊಂಡಿದ್ದ ಅವರು, ಫಿನಾಲ್​ ವೀಕ್​ಗೆ ಲಗ್ಗೆ ಇಡುವಲ್ಲಿ ಎಡವಿದ್ದಾರೆ. ಈ ಮೂಲಕ ಮನೆಯ ಸ್ಪರ್ಧಿಗಳ ಸಂಖ್ಯೆ ಆರಕ್ಕೆ ಇಳಿಕೆ ಆಗಿದೆ.

ಫಿನಾಲೆ ಹಿಂದಿನ ವಾರ ಅಂದರೆ ಈ ವಾರ ಮನೆಯಲ್ಲಿ 9 ಸ್ಪರ್ಧಿಗಳು ಉಳಿದುಕೊಂಡಿದ್ದರು. ಸಾಮಾನ್ಯವಾಗಿ ವೀಕೆಂಡ್​ನಲ್ಲಿ ಎಲಿಮಿನೇಷನ್​ ನಡೆಯುತ್ತದೆ. ಆದರೆ, ಮಂಗಳವಾರ (ಜುಲೈ 27) ಚಕ್ರವರ್ತಿ ಚಂದ್ರಚೂಡ್​ ಎಲಿಮಿನೇಟ್​ ಆದರು. ಅಚ್ಚರಿ ಎಂಬಂತೆ, ಶನಿವಾರ (ಜುಲೈ 31) ಕೂಡ ಒಂದು ಎಲಿಮಿನೇಷನ್​ ನಡೆಯಿತು. ಈ ವೇಳೆ ಶುಭಾ ಪೂಂಜಾ ಮನೆಯಿಂದ ಹೊರ ನಡೆದರು. ಶುಭಾ ಪೂಂಜಾ ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ನಲ್ಲಿ ಅಷ್ಟಾಗಿ ಆ್ಯಕ್ಟಿವ್​ ಆಗಿರಲಿಲ್ಲ. ಇನ್ನು, ಉಳಿದ ಕಂಟೆಸ್ಟೆಂಟ್​ಗಳಿಗೆ ಹೋಲಿಸಿದರೆ, ಶುಭಾ ವೀಕ್​ ಆಗಿದ್ದರು. ಈ ಕಾರಣಕ್ಕೆ ಅವರು ಎಲಿಮಿನೇಟ್​ ಆಗಿದ್ದಾರೆ.

ಇನ್ನು, ಭಾನುವಾರ ಕೂಡ ಒಂದು ಎಲಿಮಿನೇಷನ್​ ನಡೆಯಲಿದೆ ಎಂದು ಸುದೀಪ್​ ಹೇಳಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ದಿವ್ಯಾ ಸುರೇಶ್​ ತಲೆಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿತ್ತು. ಈ ಪೈಕಿ ಶಮಂತ್​ ಅವರು ಇಂದು ಬಿಗ್​ ಬಾಸ್​ ಮನೆಯಿಂದ ಹೊರ ಹೋಗಿದ್ದಾರೆ.

ಶಮಂತ್​ ಮೊದಲ ಇನ್ನಿಂಗ್ಸ್​ನಲ್ಲೇ ಎಲಿಮಿನೇಟ್​ ಆಗಿದ್ದರು. ಆದರೆ, ಅದೃಷ್ಟ ರೀತಿಯಲ್ಲಿ ಅವರು ಬಚಾವ್​ ಆಗಿದ್ದರು. ಇದಾದ ನಂತರ ಅವರು ತಮ್ಮ ಕಲೆಯನ್ನು ಹೊರ ಹಾಕಿದರು. ಸಾಕಷ್ಟು ಹಾಡುಗಳನ್ನು ಅವರು ದೊಡ್ಮನೆಯಲ್ಲಿ ಬರೆದಿದ್ದಾರೆ. ಆದರೆ, ಈ ವಾರ ಅವರಿಗೆ ಅದೃಷ್ಟ ಕೈಕೊಟ್ಟಿದೆ.

ಇನ್ನು, ಮಂಗಳವಾರ (ಆಗಸ್ಟ್​ 3) ಮತ್ತೊಂದು ಎಲಿಮಿನೇಷನ್​ ನಡೆಯಲಿದೆ. ಅಲ್ಲಿಗೆ, ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳ ಸಂಖ್ಯೆ 5ಕ್ಕೆ ಇಳಿಕೆ ಆಗಲಿದೆ. ಫಿನಾಲೆಯಲ್ಲಿ ಇರುವವರು ಯಾರು ಅನ್ನೋದು ಸದ್ಯದ ಕುತೂಹಲ.

ಇದನ್ನೂ ಓದಿ: ಶಮಂತ್​ಗೆ ಬಿಗ್​ ಬಾಸ್​ ನೀಡಿದ್ರು ಸರ್​ಪ್ರೈಸ್​ ಗಿಫ್ಟ್​; ಭಾವುಕರಾದ ಬ್ರೋ ಗೌಡ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?