AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿನಾಲೆಗೂ ಮೊದಲೇ ಎಲಿಮಿನೇಟ್​ ಆದ ಶಮಂತ್​ ಬ್ರೋ ಗೌಡ

ಭಾನುವಾರ ಕೂಡ ಒಂದು ಎಲಿಮಿನೇಷನ್​ ನಡೆಯಲಿದೆ ಎಂದು ಸುದೀಪ್​ ಹೇಳಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ದಿವ್ಯಾ ಸುರೇಶ್​ ತಲೆಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿತ್ತು.

ಫಿನಾಲೆಗೂ ಮೊದಲೇ ಎಲಿಮಿನೇಟ್​ ಆದ ಶಮಂತ್​ ಬ್ರೋ ಗೌಡ
ಶಮಂತ್​ ಬ್ರೋ ಗೌಡ
TV9 Web
| Edited By: |

Updated on: Aug 01, 2021 | 9:40 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಫಿನಾಲೆಗೆ ಒಂದು ವಾರ ಮಾತ್ರ ಬಾಕಿ ಉಳಿದಿದೆ. ಅದಕ್ಕೂ ಮೊದಲು ಸದಸ್ಯರಿಗೆ ಎಲಿಮಿನೇಷನ್​ ಭೂತ ಎದುರಾಗಿದೆ. ಈ ವಾರ ಮನೆಯಿಂದ ಶಮಂತ್​ ಬ್ರೋ ಗೌಡ ಅವರು ಎಲಿಮಿನೇಟ್​ ಆಗಿದ್ದಾರೆ. ಲಕ್ಕಿ ಬಾಯ್​ ಎನಿಸಿಕೊಂಡಿದ್ದ ಅವರು, ಫಿನಾಲ್​ ವೀಕ್​ಗೆ ಲಗ್ಗೆ ಇಡುವಲ್ಲಿ ಎಡವಿದ್ದಾರೆ. ಈ ಮೂಲಕ ಮನೆಯ ಸ್ಪರ್ಧಿಗಳ ಸಂಖ್ಯೆ ಆರಕ್ಕೆ ಇಳಿಕೆ ಆಗಿದೆ.

ಫಿನಾಲೆ ಹಿಂದಿನ ವಾರ ಅಂದರೆ ಈ ವಾರ ಮನೆಯಲ್ಲಿ 9 ಸ್ಪರ್ಧಿಗಳು ಉಳಿದುಕೊಂಡಿದ್ದರು. ಸಾಮಾನ್ಯವಾಗಿ ವೀಕೆಂಡ್​ನಲ್ಲಿ ಎಲಿಮಿನೇಷನ್​ ನಡೆಯುತ್ತದೆ. ಆದರೆ, ಮಂಗಳವಾರ (ಜುಲೈ 27) ಚಕ್ರವರ್ತಿ ಚಂದ್ರಚೂಡ್​ ಎಲಿಮಿನೇಟ್​ ಆದರು. ಅಚ್ಚರಿ ಎಂಬಂತೆ, ಶನಿವಾರ (ಜುಲೈ 31) ಕೂಡ ಒಂದು ಎಲಿಮಿನೇಷನ್​ ನಡೆಯಿತು. ಈ ವೇಳೆ ಶುಭಾ ಪೂಂಜಾ ಮನೆಯಿಂದ ಹೊರ ನಡೆದರು. ಶುಭಾ ಪೂಂಜಾ ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ನಲ್ಲಿ ಅಷ್ಟಾಗಿ ಆ್ಯಕ್ಟಿವ್​ ಆಗಿರಲಿಲ್ಲ. ಇನ್ನು, ಉಳಿದ ಕಂಟೆಸ್ಟೆಂಟ್​ಗಳಿಗೆ ಹೋಲಿಸಿದರೆ, ಶುಭಾ ವೀಕ್​ ಆಗಿದ್ದರು. ಈ ಕಾರಣಕ್ಕೆ ಅವರು ಎಲಿಮಿನೇಟ್​ ಆಗಿದ್ದಾರೆ.

ಇನ್ನು, ಭಾನುವಾರ ಕೂಡ ಒಂದು ಎಲಿಮಿನೇಷನ್​ ನಡೆಯಲಿದೆ ಎಂದು ಸುದೀಪ್​ ಹೇಳಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ದಿವ್ಯಾ ಸುರೇಶ್​ ತಲೆಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿತ್ತು. ಈ ಪೈಕಿ ಶಮಂತ್​ ಅವರು ಇಂದು ಬಿಗ್​ ಬಾಸ್​ ಮನೆಯಿಂದ ಹೊರ ಹೋಗಿದ್ದಾರೆ.

ಶಮಂತ್​ ಮೊದಲ ಇನ್ನಿಂಗ್ಸ್​ನಲ್ಲೇ ಎಲಿಮಿನೇಟ್​ ಆಗಿದ್ದರು. ಆದರೆ, ಅದೃಷ್ಟ ರೀತಿಯಲ್ಲಿ ಅವರು ಬಚಾವ್​ ಆಗಿದ್ದರು. ಇದಾದ ನಂತರ ಅವರು ತಮ್ಮ ಕಲೆಯನ್ನು ಹೊರ ಹಾಕಿದರು. ಸಾಕಷ್ಟು ಹಾಡುಗಳನ್ನು ಅವರು ದೊಡ್ಮನೆಯಲ್ಲಿ ಬರೆದಿದ್ದಾರೆ. ಆದರೆ, ಈ ವಾರ ಅವರಿಗೆ ಅದೃಷ್ಟ ಕೈಕೊಟ್ಟಿದೆ.

ಇನ್ನು, ಮಂಗಳವಾರ (ಆಗಸ್ಟ್​ 3) ಮತ್ತೊಂದು ಎಲಿಮಿನೇಷನ್​ ನಡೆಯಲಿದೆ. ಅಲ್ಲಿಗೆ, ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳ ಸಂಖ್ಯೆ 5ಕ್ಕೆ ಇಳಿಕೆ ಆಗಲಿದೆ. ಫಿನಾಲೆಯಲ್ಲಿ ಇರುವವರು ಯಾರು ಅನ್ನೋದು ಸದ್ಯದ ಕುತೂಹಲ.

ಇದನ್ನೂ ಓದಿ: ಶಮಂತ್​ಗೆ ಬಿಗ್​ ಬಾಸ್​ ನೀಡಿದ್ರು ಸರ್​ಪ್ರೈಸ್​ ಗಿಫ್ಟ್​; ಭಾವುಕರಾದ ಬ್ರೋ ಗೌಡ

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ