ಬಿಗ್​ ಬಾಸ್​ ಮನೆಯಿಂದ ಶಮಂತ್​ ಬ್ರೋ ಗೌಡ ಎಲಿಮಿನೇಟ್? ಅನುಮಾನ ಹುಟ್ಟುಹಾಕಿದ ಆ ಒಂದು ಫೋಟೋ

Bigg Boss Kannada Season 8 Elimination: ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದ ವೈಜಯಂತಿ ಅಡಿಗ ತಾವು ಬಿಗ್​ ಬಾಸ್​ ಮನೆಯಿಂದ ಹೊರ ಹೋಗುತ್ತೇವೆ ಎಂದು ಶಮಂತ್​ ಅವರನ್ನು ಸೇವ್​ ಮಾಡಿದ್ದರು. ಇದಾದ ನಂತರದಲ್ಲಿ ಶಮಂತ್​ ಲಕ್ಕಿ ಬಾಯ್​ ಎಂದೇ ಕರೆಯಲ್ಪಟ್ಟಿದ್ದರು.

ಬಿಗ್​ ಬಾಸ್​ ಮನೆಯಿಂದ ಶಮಂತ್​ ಬ್ರೋ ಗೌಡ ಎಲಿಮಿನೇಟ್? ಅನುಮಾನ ಹುಟ್ಟುಹಾಕಿದ ಆ ಒಂದು ಫೋಟೋ
ಬಿಗ್​ ಬಾಸ್​ ಮನೆಯಿಂದ ಶಮಂತ್​ ಬ್ರೋ ಗೌಡ ಎಲಿಮಿನೇಟ್? ಅನುಮಾನ ಹುಟ್ಟುಹಾಕಿದ ಆ ಒಂದು ಫೋಟೋ
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 24, 2021 | 3:46 PM

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪ್ರವೇಶಿಸಿದ ಶಮಂತ್​ ಬ್ರೋ ಗೌಡಗೆ ಅದೃಷ್ಟ ಒಲಿದಿತ್ತು. ಎಲಿಮಿನೇಟ್​ ಆಗಿದ್ದರೂ ಅದೃಷ್ಟ ಬಲದಿಂದ ಬಚಾವ್​ ಆದರು. ಆದರೆ, ಈಗ ಅವರಿಗೆ ಅದೃಷ್ಟ ಕೈ ಕೊಟ್ಟಂತೆ ಕಾಣುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಫೋಟೋ ಒಂದು ಈ ರೀತಿಯ ಅನುಮಾನ ಹುಟ್ಟುಹಾಕಿದೆ.

ಶಮಂತ್​ ಬ್ರೋ ಗೌಡ ಮನೆಯಲ್ಲಿ ಸತತ ಎರಡು ವಾರ ಕ್ಯಾಪ್ಟನ್​ ಆದರು. ಇದಕ್ಕೆ ಮನೆಯವರ ಬೆಂಬಲ ಕೂಡ ಇತ್ತು. ನಂತರ, ಶಮಂತ್​ಗೋಸ್ಕರ ಬೆಡ್​ ರೂಮ್​ ಬಿಟ್ಟುಕೊಡೋ ಸಮಯ ಬಂದಾಗ ಎಲ್ಲರೂ ಇದನ್ನು ಬೆಂಬಲಿಸಿ, ಲಿವಿಂಗ್​ ಏರಿಯಾದಲ್ಲಿ ಮಲಗಿದ್ದರು. ಇನ್ನು, ಅವರು ಬಿಗ್​ಬಾಸ್​ನಿಂದ ಎಲಿಮಿನೇಟ್​ ಆಗಿದ್ದರು. ಆದರೆ, ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದ ವೈಜಯಂತಿ ಅಡಿಗ ತಾವು ಬಿಗ್​ ಬಾಸ್​ ಮನೆಯಿಂದ ಹೊರ ಹೋಗುತ್ತೇವೆ ಎಂದು ಶಮಂತ್​ ಅವರನ್ನು ಸೇವ್​ ಮಾಡಿದ್ದರು. ಇದಾದ ನಂತರದಲ್ಲಿ ಶಮಂತ್​ ಲಕ್ಕಿ ಬಾಯ್​ ಎಂದೇ ಕರೆಯಲ್ಪಟ್ಟಿದ್ದರು. ಅರ್ಧಕ್ಕೆ ನಿಂತಿದ್ದ ಬಿಗ್​ ಬಾಸ್​ ಆರಂಭಕ್ಕೂ ಶಮಂತ್​ ಅದೃಷ್ಟ ಕಾರಣ ಎಂದು ಟ್ರೋಲ್​ ಪೇಜ್​ಗಳು ಪೋಸ್ಟ್​ ಮಾಡಿದ್ದವು.

ಈ ವಾರ ಪ್ರಶಾಂತ್ ಸಂಬರಗಿ​, ಶುಭಾ ಪೂಂಜಾ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ದಿವ್ಯಾ ಉರುಡುಗ​ ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಈ ವಾರ ಡಬಲ್​ ಎಲಿಮಿನೇಷನ್​ ನಡೆಯಲಿದ್ದು, ಇಬ್ಬರು ಹೊರ ಹೋಗುತ್ತಾರೆ ಎನ್ನುವ ಮಾತು ಕೇಳಿ ಬಂದಿದೆ. ಒಂದೊಮ್ಮೆ ಡಬಲ್ ಎಲಿಮಿನೇಷನ್​ ಆದರೆ ಚಕ್ರವರ್ತಿ ಚಂದ್ರಚೂಡ್​, ಪ್ರಶಾಂತ್ ಸಂಬರಗಿ ಮತ್ತು ಶುಭಾ ಪೂಂಜಾ ಮೂವರಲ್ಲಿ ಇಬ್ಬರು ಔಟ್​ ಆಗಲಿದ್ದಾರೆ ಎಂಬುದು ಫ್ಯಾನ್ಸ್​ ಲೆಕ್ಕಾಚಾರವಾಗಿತ್ತು. ಆದರೆ, ಈ ಲೆಕ್ಕಾಚಾರ ತಲೆಕೆಳಗೆ ಆದಂತೆ ಕಾಣುತ್ತಿದೆ.

ಕಲರ್ಸ್​ ಕನ್ನಡ ವಾಹಿನಿ ಬ್ಯುಸಿನೆಸ್​ ಹೆಡ್ ಪರಮೇಶ್ವರ್​ ಗುಂಡ್ಕಲ್​ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ‘ಈ ವಾರದ ಎಪಿಸೋಡ್​​​ಗೆ ರೆಡಿ ಆಗುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ. ಎಲ್ಲಾ ಸ್ಪರ್ಧಿಗಳು ನಿಂತಿರುವ ಫೋಟೋ ಇದಾಗಿದ್ದು, ಶಮಂತ್​ ಮಿಸ್​ ಆಗಿದ್ದಾರೆ.

ಇದನ್ನು ನೋಡಿದ ಅನೇಕ ಸ್ಪರ್ಧಿಗಳು ಶಮಂತ್​ ಎಲ್ಲಿ ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ಶಮಂತ್​ ಅವರು ಎಲಿಮಿನೇಟ್​ ಆದರಾ ಎಂದು ಪ್ರಶ್ನೆ ಮಾಡಿದ್ದಾರೆ. ಈ ಎಲ್ಲಾ ಕುತೂಹಲಕ್ಕೆ ಇಂದು (ಜುಲೈ 24) ನಡೆಯುವ ಎಪಿಸೋಡ್​ನಲ್ಲಿ ಉತ್ತರ ಸಿಗಬೇಕಿದೆ.

ಇದನ್ನೂ ಓದಿ: ಈ ವಾರ ಡಬಲ್​ ಎಲಿಮಿನೇಷನ್? ಸೂಚನೆ ಕೊಟ್ಟ ಬಿಗ್​ ಬಾಸ್​; ಔಟ್​ ಆಗೋರು ಯಾರು?

‘ನೀವು ನನಗೆಷ್ಟು ದಿನದ ಫ್ರೆಂಡ್​?‘; ಶಮಂತ್​ ಬಗ್ಗೆ ಹಗುರವಾಗಿ ಮಾತನಾಡಿದ ಚಕ್ರವರ್ತಿಗೆ ಕ್ಲಾಸ್​

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ