AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಮಂತ್​ಗೆ ಬಿಗ್​ ಬಾಸ್​ ನೀಡಿದ್ರು ಸರ್​ಪ್ರೈಸ್​ ಗಿಫ್ಟ್​; ಭಾವುಕರಾದ ಬ್ರೋ ಗೌಡ

ಅದೃಷ್ಟದ ಜತೆಗೆ ಶಮಂತ್​ ತಮ್ಮ ಸಾಮರ್ಥ್ಯ ಏನು ಎಂಬುದನ್ನು ತೋರಿಸಿದ್ದಾರೆ. ಸಾಕಷ್ಟು ಹಾಡುಗಳನ್ನು ಬರೆದು ಅವರು ಹಾಡಿದ್ದಾರೆ.

ಶಮಂತ್​ಗೆ ಬಿಗ್​ ಬಾಸ್​ ನೀಡಿದ್ರು ಸರ್​ಪ್ರೈಸ್​ ಗಿಫ್ಟ್​; ಭಾವುಕರಾದ ಬ್ರೋ ಗೌಡ
ಶಮಂತ್​ ಬ್ರೋ ಗೌಡ
TV9 Web
| Edited By: |

Updated on: Jul 30, 2021 | 7:28 AM

Share

‘ಬಿಗ್​ ಬಾಸ್​ ಸೀಸನ್​ 8’ ಮೊದಲ ಇನ್ನಿಂಗ್ಸ್​ನ ಎಲಿಮಿನೇಷನ್​ನಿಂದ ಅದೃಷ್ಟದ ರೀತಿಯಲ್ಲಿ ಪಾರಾಗಿದ್ದ ಶಮಂತ್​ ಬ್ರೋ ಗೌಡ ನಂತರ ಒಳ್ಳೆಯ ಮೈಲೇಜ್​ ಪಡೆದುಕೊಂಡರು. ಈಗ ಅವರು ಬಿಗ್​ ಬಾಸ್​ ಫಿನಾಲೆ ಹಂತ ತಲುಪಿದ್ದಾರೆ. ಫಿನಾಲೆಗೆ ಒಂದು ವಾರ ಮೊದಲು ಶಮಂತ್​ಗೆ ಸರ್​ಪ್ರೈಸ್​ ಸಿಕ್ಕಿದೆ. ಈ ಸರ್​ಪ್ರೈಸ್​ ನೋಡಿ ಶಮಂತ್​ ಭಾವುಕರಾದರು.

ಶಮಂತ್​ ಬ್ರೋ ಗೌಡ ಮನೆಯಲ್ಲಿ ಸತತ ಎರಡು ವಾರ ಕ್ಯಾಪ್ಟನ್​ ಆದರು. ಇದಕ್ಕೆ ಮನೆಯವರ ಬೆಂಬಲ ಕೂಡ ಇತ್ತು. ನಂತರ, ಶಮಂತ್​ಗೋಸ್ಕರ ಬೆಡ್​ ರೂಮ್​ ಬಿಟ್ಟುಕೊಡೋ ಸಮಯ ಬಂದಾಗ ಎಲ್ಲರೂ ಇದನ್ನು ಬೆಂಬಲಿಸಿ, ಲಿವಿಂಗ್​ ಏರಿಯಾದಲ್ಲಿ ಮಲಗಿದ್ದರು. ಇನ್ನು, ಅವರು ಬಿಗ್​ಬಾಸ್​ನಿಂದ ಎಲಿಮಿನೇಟ್​ ಆಗಿದ್ದರು. ಆದರೆ, ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದ ವೈಜಯಂತಿ ಅಡಿಗ ತಾವು ಬಿಗ್​ ಬಾಸ್​ ಮನೆಯಿಂದ ಹೊರ ಹೋಗುತ್ತೇವೆ ಎಂದು ಶಮಂತ್​ ಅವರನ್ನು ಸೇವ್​ ಮಾಡಿದ್ದರು. ಇದಾದ ನಂತರದಲ್ಲಿ ಶಮಂತ್​ ಲಕ್ಕಿ ಬಾಯ್​ ಎಂದೇ ಕರೆಯಲ್ಪಟ್ಟಿದ್ದರು.

ಅದೃಷ್ಟದ ಜತೆಗೆ ಶಮಂತ್​ ತಮ್ಮ ಸಾಮರ್ಥ್ಯ ಏನು ಎಂಬುದನ್ನು ತೋರಿಸಿದ್ದಾರೆ. ಸಾಕಷ್ಟು ಹಾಡುಗಳನ್ನು ಬರೆದು ಅವರು ಹಾಡಿದ್ದಾರೆ. ಶಮಂತ್​ ಬಿಗ್​ ಬಾಸ್​ ಮನೆ ಒಳಗೆ ಬರುವುದಕ್ಕೂ ಮೊದಲು ‘ಕಣ್ಣೊಳಗೆ..’ ವಿಡಿಯೋ ಸಾಂಗ್​ ನಿರ್ದೇಶನ ಮಾಡಿ ಹಾಡಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಜುಲೈ 29ರ ಎಪಿಸೋಡ್​ನಲ್ಲಿ ಬೆಳಗ್ಗೆಈ ಹಾಡು ಮೊಳಗಿದೆ. ಇದನ್ನು ಕೇಳಿ ಶಮಂತ್ ಸ್ವಲ್ಪ ಭಾವುಕರಾದಂತೆ ಕಂಡುಬಂತು.

ಆನಂದ್​ ಆಡಿಯೋ ಪಾಪ್ಯುಲರ್ ಯೂಟ್ಯೂಬ್​​ ಚಾನೆಲ್​ನಲ್ಲಿ ‘ಕಣ್ಣೊಳಗೆ..’ ಹಾಡು 2019ರಲ್ಲಿ ರಿಲೀಸ್​ ಆಗಿತ್ತು. ಈ ಹಾಡು ಇಲ್ಲಿವರೆಗೆ 10 ಲಕ್ಷ ವೀಕ್ಷಣೆ ಕಂಡಿದೆ. ಬಿಗ್​ ಬಾಸ್​ನಲ್ಲಿ ಶಮಂತ್​ ಈ ಹಾಡನ್ನು ಸಾಕಷ್ಟು ಬಾರಿ ಹಾಡಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ಶುಭಾ ಪೂಂಜಾ, ದಿವ್ಯಾ ಸುರೇಶ್​ ಹಾಗೂ ದಿವ್ಯಾ ಉರುಡುಗ ಇದ್ದಾರೆ. ಈ ಪೈಕಿ ದಿವ್ಯಾ ಉರುಡುಗ ಕ್ಯಾಪ್ಟನ್​ ಆಗಿ ನಾಮಿನೇಷನ್​ನಿಂದ ಬಚಾವ್​ ಆಗಿದ್ದಾರೆ. ಉಳಿದಂತೆ ಏಳು ಜನರು ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ ಮನೆಯಿಂದ ಶಮಂತ್​ ಬ್ರೋ ಗೌಡ ಎಲಿಮಿನೇಟ್? ಅನುಮಾನ ಹುಟ್ಟುಹಾಕಿದ ಆ ಒಂದು ಫೋಟೋ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್