AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಮಂತ್​ಗೆ ಬಿಗ್​ ಬಾಸ್​ ನೀಡಿದ್ರು ಸರ್​ಪ್ರೈಸ್​ ಗಿಫ್ಟ್​; ಭಾವುಕರಾದ ಬ್ರೋ ಗೌಡ

ಅದೃಷ್ಟದ ಜತೆಗೆ ಶಮಂತ್​ ತಮ್ಮ ಸಾಮರ್ಥ್ಯ ಏನು ಎಂಬುದನ್ನು ತೋರಿಸಿದ್ದಾರೆ. ಸಾಕಷ್ಟು ಹಾಡುಗಳನ್ನು ಬರೆದು ಅವರು ಹಾಡಿದ್ದಾರೆ.

ಶಮಂತ್​ಗೆ ಬಿಗ್​ ಬಾಸ್​ ನೀಡಿದ್ರು ಸರ್​ಪ್ರೈಸ್​ ಗಿಫ್ಟ್​; ಭಾವುಕರಾದ ಬ್ರೋ ಗೌಡ
ಶಮಂತ್​ ಬ್ರೋ ಗೌಡ
TV9 Web
| Edited By: |

Updated on: Jul 30, 2021 | 7:28 AM

Share

‘ಬಿಗ್​ ಬಾಸ್​ ಸೀಸನ್​ 8’ ಮೊದಲ ಇನ್ನಿಂಗ್ಸ್​ನ ಎಲಿಮಿನೇಷನ್​ನಿಂದ ಅದೃಷ್ಟದ ರೀತಿಯಲ್ಲಿ ಪಾರಾಗಿದ್ದ ಶಮಂತ್​ ಬ್ರೋ ಗೌಡ ನಂತರ ಒಳ್ಳೆಯ ಮೈಲೇಜ್​ ಪಡೆದುಕೊಂಡರು. ಈಗ ಅವರು ಬಿಗ್​ ಬಾಸ್​ ಫಿನಾಲೆ ಹಂತ ತಲುಪಿದ್ದಾರೆ. ಫಿನಾಲೆಗೆ ಒಂದು ವಾರ ಮೊದಲು ಶಮಂತ್​ಗೆ ಸರ್​ಪ್ರೈಸ್​ ಸಿಕ್ಕಿದೆ. ಈ ಸರ್​ಪ್ರೈಸ್​ ನೋಡಿ ಶಮಂತ್​ ಭಾವುಕರಾದರು.

ಶಮಂತ್​ ಬ್ರೋ ಗೌಡ ಮನೆಯಲ್ಲಿ ಸತತ ಎರಡು ವಾರ ಕ್ಯಾಪ್ಟನ್​ ಆದರು. ಇದಕ್ಕೆ ಮನೆಯವರ ಬೆಂಬಲ ಕೂಡ ಇತ್ತು. ನಂತರ, ಶಮಂತ್​ಗೋಸ್ಕರ ಬೆಡ್​ ರೂಮ್​ ಬಿಟ್ಟುಕೊಡೋ ಸಮಯ ಬಂದಾಗ ಎಲ್ಲರೂ ಇದನ್ನು ಬೆಂಬಲಿಸಿ, ಲಿವಿಂಗ್​ ಏರಿಯಾದಲ್ಲಿ ಮಲಗಿದ್ದರು. ಇನ್ನು, ಅವರು ಬಿಗ್​ಬಾಸ್​ನಿಂದ ಎಲಿಮಿನೇಟ್​ ಆಗಿದ್ದರು. ಆದರೆ, ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದ ವೈಜಯಂತಿ ಅಡಿಗ ತಾವು ಬಿಗ್​ ಬಾಸ್​ ಮನೆಯಿಂದ ಹೊರ ಹೋಗುತ್ತೇವೆ ಎಂದು ಶಮಂತ್​ ಅವರನ್ನು ಸೇವ್​ ಮಾಡಿದ್ದರು. ಇದಾದ ನಂತರದಲ್ಲಿ ಶಮಂತ್​ ಲಕ್ಕಿ ಬಾಯ್​ ಎಂದೇ ಕರೆಯಲ್ಪಟ್ಟಿದ್ದರು.

ಅದೃಷ್ಟದ ಜತೆಗೆ ಶಮಂತ್​ ತಮ್ಮ ಸಾಮರ್ಥ್ಯ ಏನು ಎಂಬುದನ್ನು ತೋರಿಸಿದ್ದಾರೆ. ಸಾಕಷ್ಟು ಹಾಡುಗಳನ್ನು ಬರೆದು ಅವರು ಹಾಡಿದ್ದಾರೆ. ಶಮಂತ್​ ಬಿಗ್​ ಬಾಸ್​ ಮನೆ ಒಳಗೆ ಬರುವುದಕ್ಕೂ ಮೊದಲು ‘ಕಣ್ಣೊಳಗೆ..’ ವಿಡಿಯೋ ಸಾಂಗ್​ ನಿರ್ದೇಶನ ಮಾಡಿ ಹಾಡಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಜುಲೈ 29ರ ಎಪಿಸೋಡ್​ನಲ್ಲಿ ಬೆಳಗ್ಗೆಈ ಹಾಡು ಮೊಳಗಿದೆ. ಇದನ್ನು ಕೇಳಿ ಶಮಂತ್ ಸ್ವಲ್ಪ ಭಾವುಕರಾದಂತೆ ಕಂಡುಬಂತು.

ಆನಂದ್​ ಆಡಿಯೋ ಪಾಪ್ಯುಲರ್ ಯೂಟ್ಯೂಬ್​​ ಚಾನೆಲ್​ನಲ್ಲಿ ‘ಕಣ್ಣೊಳಗೆ..’ ಹಾಡು 2019ರಲ್ಲಿ ರಿಲೀಸ್​ ಆಗಿತ್ತು. ಈ ಹಾಡು ಇಲ್ಲಿವರೆಗೆ 10 ಲಕ್ಷ ವೀಕ್ಷಣೆ ಕಂಡಿದೆ. ಬಿಗ್​ ಬಾಸ್​ನಲ್ಲಿ ಶಮಂತ್​ ಈ ಹಾಡನ್ನು ಸಾಕಷ್ಟು ಬಾರಿ ಹಾಡಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ಶುಭಾ ಪೂಂಜಾ, ದಿವ್ಯಾ ಸುರೇಶ್​ ಹಾಗೂ ದಿವ್ಯಾ ಉರುಡುಗ ಇದ್ದಾರೆ. ಈ ಪೈಕಿ ದಿವ್ಯಾ ಉರುಡುಗ ಕ್ಯಾಪ್ಟನ್​ ಆಗಿ ನಾಮಿನೇಷನ್​ನಿಂದ ಬಚಾವ್​ ಆಗಿದ್ದಾರೆ. ಉಳಿದಂತೆ ಏಳು ಜನರು ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ ಮನೆಯಿಂದ ಶಮಂತ್​ ಬ್ರೋ ಗೌಡ ಎಲಿಮಿನೇಟ್? ಅನುಮಾನ ಹುಟ್ಟುಹಾಕಿದ ಆ ಒಂದು ಫೋಟೋ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್