ಶಮಂತ್​ಗೆ ಬಿಗ್​ ಬಾಸ್​ ನೀಡಿದ್ರು ಸರ್​ಪ್ರೈಸ್​ ಗಿಫ್ಟ್​; ಭಾವುಕರಾದ ಬ್ರೋ ಗೌಡ

ಅದೃಷ್ಟದ ಜತೆಗೆ ಶಮಂತ್​ ತಮ್ಮ ಸಾಮರ್ಥ್ಯ ಏನು ಎಂಬುದನ್ನು ತೋರಿಸಿದ್ದಾರೆ. ಸಾಕಷ್ಟು ಹಾಡುಗಳನ್ನು ಬರೆದು ಅವರು ಹಾಡಿದ್ದಾರೆ.

ಶಮಂತ್​ಗೆ ಬಿಗ್​ ಬಾಸ್​ ನೀಡಿದ್ರು ಸರ್​ಪ್ರೈಸ್​ ಗಿಫ್ಟ್​; ಭಾವುಕರಾದ ಬ್ರೋ ಗೌಡ
ಶಮಂತ್​ ಬ್ರೋ ಗೌಡ
Follow us
| Updated By: ಮದನ್​ ಕುಮಾರ್​

Updated on: Jul 30, 2021 | 7:28 AM

‘ಬಿಗ್​ ಬಾಸ್​ ಸೀಸನ್​ 8’ ಮೊದಲ ಇನ್ನಿಂಗ್ಸ್​ನ ಎಲಿಮಿನೇಷನ್​ನಿಂದ ಅದೃಷ್ಟದ ರೀತಿಯಲ್ಲಿ ಪಾರಾಗಿದ್ದ ಶಮಂತ್​ ಬ್ರೋ ಗೌಡ ನಂತರ ಒಳ್ಳೆಯ ಮೈಲೇಜ್​ ಪಡೆದುಕೊಂಡರು. ಈಗ ಅವರು ಬಿಗ್​ ಬಾಸ್​ ಫಿನಾಲೆ ಹಂತ ತಲುಪಿದ್ದಾರೆ. ಫಿನಾಲೆಗೆ ಒಂದು ವಾರ ಮೊದಲು ಶಮಂತ್​ಗೆ ಸರ್​ಪ್ರೈಸ್​ ಸಿಕ್ಕಿದೆ. ಈ ಸರ್​ಪ್ರೈಸ್​ ನೋಡಿ ಶಮಂತ್​ ಭಾವುಕರಾದರು.

ಶಮಂತ್​ ಬ್ರೋ ಗೌಡ ಮನೆಯಲ್ಲಿ ಸತತ ಎರಡು ವಾರ ಕ್ಯಾಪ್ಟನ್​ ಆದರು. ಇದಕ್ಕೆ ಮನೆಯವರ ಬೆಂಬಲ ಕೂಡ ಇತ್ತು. ನಂತರ, ಶಮಂತ್​ಗೋಸ್ಕರ ಬೆಡ್​ ರೂಮ್​ ಬಿಟ್ಟುಕೊಡೋ ಸಮಯ ಬಂದಾಗ ಎಲ್ಲರೂ ಇದನ್ನು ಬೆಂಬಲಿಸಿ, ಲಿವಿಂಗ್​ ಏರಿಯಾದಲ್ಲಿ ಮಲಗಿದ್ದರು. ಇನ್ನು, ಅವರು ಬಿಗ್​ಬಾಸ್​ನಿಂದ ಎಲಿಮಿನೇಟ್​ ಆಗಿದ್ದರು. ಆದರೆ, ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದ ವೈಜಯಂತಿ ಅಡಿಗ ತಾವು ಬಿಗ್​ ಬಾಸ್​ ಮನೆಯಿಂದ ಹೊರ ಹೋಗುತ್ತೇವೆ ಎಂದು ಶಮಂತ್​ ಅವರನ್ನು ಸೇವ್​ ಮಾಡಿದ್ದರು. ಇದಾದ ನಂತರದಲ್ಲಿ ಶಮಂತ್​ ಲಕ್ಕಿ ಬಾಯ್​ ಎಂದೇ ಕರೆಯಲ್ಪಟ್ಟಿದ್ದರು.

ಅದೃಷ್ಟದ ಜತೆಗೆ ಶಮಂತ್​ ತಮ್ಮ ಸಾಮರ್ಥ್ಯ ಏನು ಎಂಬುದನ್ನು ತೋರಿಸಿದ್ದಾರೆ. ಸಾಕಷ್ಟು ಹಾಡುಗಳನ್ನು ಬರೆದು ಅವರು ಹಾಡಿದ್ದಾರೆ. ಶಮಂತ್​ ಬಿಗ್​ ಬಾಸ್​ ಮನೆ ಒಳಗೆ ಬರುವುದಕ್ಕೂ ಮೊದಲು ‘ಕಣ್ಣೊಳಗೆ..’ ವಿಡಿಯೋ ಸಾಂಗ್​ ನಿರ್ದೇಶನ ಮಾಡಿ ಹಾಡಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಜುಲೈ 29ರ ಎಪಿಸೋಡ್​ನಲ್ಲಿ ಬೆಳಗ್ಗೆಈ ಹಾಡು ಮೊಳಗಿದೆ. ಇದನ್ನು ಕೇಳಿ ಶಮಂತ್ ಸ್ವಲ್ಪ ಭಾವುಕರಾದಂತೆ ಕಂಡುಬಂತು.

ಆನಂದ್​ ಆಡಿಯೋ ಪಾಪ್ಯುಲರ್ ಯೂಟ್ಯೂಬ್​​ ಚಾನೆಲ್​ನಲ್ಲಿ ‘ಕಣ್ಣೊಳಗೆ..’ ಹಾಡು 2019ರಲ್ಲಿ ರಿಲೀಸ್​ ಆಗಿತ್ತು. ಈ ಹಾಡು ಇಲ್ಲಿವರೆಗೆ 10 ಲಕ್ಷ ವೀಕ್ಷಣೆ ಕಂಡಿದೆ. ಬಿಗ್​ ಬಾಸ್​ನಲ್ಲಿ ಶಮಂತ್​ ಈ ಹಾಡನ್ನು ಸಾಕಷ್ಟು ಬಾರಿ ಹಾಡಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ಶುಭಾ ಪೂಂಜಾ, ದಿವ್ಯಾ ಸುರೇಶ್​ ಹಾಗೂ ದಿವ್ಯಾ ಉರುಡುಗ ಇದ್ದಾರೆ. ಈ ಪೈಕಿ ದಿವ್ಯಾ ಉರುಡುಗ ಕ್ಯಾಪ್ಟನ್​ ಆಗಿ ನಾಮಿನೇಷನ್​ನಿಂದ ಬಚಾವ್​ ಆಗಿದ್ದಾರೆ. ಉಳಿದಂತೆ ಏಳು ಜನರು ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ ಮನೆಯಿಂದ ಶಮಂತ್​ ಬ್ರೋ ಗೌಡ ಎಲಿಮಿನೇಟ್? ಅನುಮಾನ ಹುಟ್ಟುಹಾಕಿದ ಆ ಒಂದು ಫೋಟೋ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!