AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾನುವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವ ಸ್ಪರ್ಧಿ ಇವರೇನಾ?

ಫಿನಾಲೆ ಹಿಂದಿನ ವಾರ ಅಂದರೆ ಈ ವಾರ ಮನೆಯಲ್ಲಿ 9 ಸ್ಪರ್ಧಿಗಳು ಉಳಿದುಕೊಂಡಿದ್ದರು. ಸಾಮಾನ್ಯವಾಗಿ ವೀಕೆಂಡ್​ನಲ್ಲಿ ಎಲಿಮಿನೇಷನ್​ ನಡೆಯುತ್ತದೆ. ಆದರೆ, ಮಂಗಳವಾರ (ಜುಲೈ 27) ಚಕ್ರವರ್ತಿ ಚಂದ್ರಚೂಡ್​ ಎಲಿಮಿನೇಟ್​ ಆದರು.

ಭಾನುವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವ ಸ್ಪರ್ಧಿ ಇವರೇನಾ?
ಬಿಗ್ ಬಾಸ್​ ಕನ್ನಡ ಸೀಸನ್​ 8
TV9 Web
| Edited By: |

Updated on: Aug 01, 2021 | 1:05 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಫಿನಾಲೆಗೆ ಒಂದು ವಾರ ಮಾತ್ರ ಬಾಕಿ ಉಳಿದಿದೆ. ಸದ್ಯ ಮನೆಯಲ್ಲಿ ಏಳು ಸ್ಪರ್ಧಿಗಳು ಮಾತ್ರ ಉಳಿದುಕೊಂಡಿದ್ದು, ಫಿನಾಲೆಗೂ ಮೊದಲೇ ಇಬ್ಬರು ಎಲಿಮಿನೇಟ್​ ಆಗುತ್ತಿದ್ದಾರೆ. ಹೀಗಾಗಿ, ಮನೆ ಮಂದಿಯಲ್ಲಿ ಟೆನ್ಶನ್​ ಹೆಚ್ಚಿದೆ. ಶನಿವಾರದ ಎಪಿಸೋಡ್​ನಲ್ಲಿ ಶುಭಾ ಪೂಂಜಾ ಎಲಿಮಿನೇಟ್​ ಆಗಿದ್ದಾರೆ. ಭಾನುವಾರ, ಮತ್ತೋರ್ವ ಸ್ಪರ್ಧಿ ಹೊರಹೋಗುತ್ತಿದ್ದಾರೆ.

ಫಿನಾಲೆ ಹಿಂದಿನ ವಾರ ಅಂದರೆ ಈ ವಾರ ಮನೆಯಲ್ಲಿ 9 ಸ್ಪರ್ಧಿಗಳು ಉಳಿದುಕೊಂಡಿದ್ದರು. ಸಾಮಾನ್ಯವಾಗಿ ವೀಕೆಂಡ್​ನಲ್ಲಿ ಎಲಿಮಿನೇಷನ್​ ನಡೆಯುತ್ತದೆ. ಆದರೆ, ಮಂಗಳವಾರ (ಜುಲೈ 27) ಚಕ್ರವರ್ತಿ ಚಂದ್ರಚೂಡ್​ ಎಲಿಮಿನೇಟ್​ ಆದರು. ಅಚ್ಚರಿ ಎಂಬಂತೆ, ಶನಿವಾರ (ಜುಲೈ 31) ಕೂಡ ಒಂದು ಎಲಿಮಿನೇಷನ್​ ನಡೆಯಿತು. ಈ ವೇಳೆ ಶುಭಾ ಪೂಂಜಾ ಮನೆಯಿಂದ ಹೊರ ನಡೆದರು. ಶುಭಾ ಪೂಂಜಾ ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ನಲ್ಲಿ ಅಷ್ಟಾಗಿ ಆ್ಯಕ್ಟಿವ್​ ಆಗಿರಲಿಲ್ಲ. ಇನ್ನು, ಉಳಿದ ಕಂಟೆಸ್ಟೆಂಟ್​ಗಳಿಗೆ ಹೋಲಿಸಿದರೆ, ಶುಭಾ ವೀಕ್​ ಆಗಿದ್ದರು. ಈ ಕಾರಣಕ್ಕೆ ಅವರು ಎಲಿಮಿನೇಟ್​ ಆಗಿದ್ದಾರೆ.

ಇನ್ನು, ಭಾನುವಾರ ಕೂಡ ಒಂದು ಎಲಿಮಿನೇಷನ್​ ನಡೆಯಲಿದೆ ಎಂದು ಸುದೀಪ್​ ಹೇಳಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ದಿವ್ಯಾ ಸುರೇಶ್​  ತಲೆಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ಈ ಪೈಕಿ ಶಮಂತ್​ ಅವರು ಇಂದು ಬಿಗ್​ ಬಾಸ್​ ಮನೆಯಿಂದ ಹೊರ ಹೋಗಿದ್ದಾರೆ ಎನ್ನಲಾಗಿದೆ.

ಶಮಂತ್​ ಮೊದಲ ಇನ್ನಿಂಗ್ಸ್​ನಲ್ಲೇ ಎಲಿಮಿನೇಟ್​ ಆಗಿದ್ದರು. ಆದರೆ, ಅದೃಷ್ಟ ರೀತಿಯಲ್ಲಿ ಅವರು ಬಚಾವ್​ ಆಗಿದ್ದರು. ಇದಾದ ನಂತರ ಅವರು ತಮ್ಮ ಕಲೆಯನ್ನು ಹೊರ ಹಾಕಿದರು. ಸಾಕಷ್ಟು ಹಾಡುಗಳನ್ನು ಅವರು ದೊಡ್ಮನೆಯಲ್ಲಿ ಬರೆದಿದ್ದಾರೆ. ಆದರೆ, ಈ ವಾರ ಅವರಿಗೆ ಅದೃಷ್ಟ ಕೈಕೊಟ್ಟಿದೆ ಎನ್ನಲಾಗುತ್ತಿದೆ. ಇಂದು ರಾತ್ರಿ (ಆಗಸ್ಟ್ 1) ಎಲಿಮಿನೇಷನ್ ಎಪಿಸೋಡ್​ ಪ್ರಸಾರವಾಗಲಿದೆ.

ಇನ್ನು, ಮಂಗಳವಾರ (ಆಗಸ್ಟ್​ 3) ಮತ್ತೊಂದು ಎಲಿಮಿನೇಷನ್​ ನಡೆಯಲಿದೆ. ಅಲ್ಲಿಗೆ, ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳ ಸಂಖ್ಯೆ 5ಕ್ಕೆ ಇಳಿಕೆ ಆಗಲಿದೆ. ಫಿನಾಲೆಯಲ್ಲಿ ಇರುವವರು ಯಾರು ಅನ್ನೋದು ಸದ್ಯದ ಕುತೂಹಲ.

ಇದನ್ನೂ ಓದಿ: ಹಳೆಯ ಫೋಟೋ ವೈರಲ್​ ಪ್ರಕರಣ; ಕೋರ್ಟ್​ ಮೊರೆ ಹೋದ ಬಿಗ್​ ಬಾಸ್​ ಸ್ಪರ್ಧಿ ದಿವ್ಯಾ ಉರುಡುಗ

ಬಿಗ್​ ಬಾಸ್​ ಎಲಿಮಿನೇಷನ್​ನಲ್ಲಿ ಟ್ವಿಸ್ಟ್​; ಶನಿವಾರವೇ ಹೊರ ಬಿದ್ದ ಶುಭಾ ಪೂಂಜಾ

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು