AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾನುವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವ ಸ್ಪರ್ಧಿ ಇವರೇನಾ?

ಫಿನಾಲೆ ಹಿಂದಿನ ವಾರ ಅಂದರೆ ಈ ವಾರ ಮನೆಯಲ್ಲಿ 9 ಸ್ಪರ್ಧಿಗಳು ಉಳಿದುಕೊಂಡಿದ್ದರು. ಸಾಮಾನ್ಯವಾಗಿ ವೀಕೆಂಡ್​ನಲ್ಲಿ ಎಲಿಮಿನೇಷನ್​ ನಡೆಯುತ್ತದೆ. ಆದರೆ, ಮಂಗಳವಾರ (ಜುಲೈ 27) ಚಕ್ರವರ್ತಿ ಚಂದ್ರಚೂಡ್​ ಎಲಿಮಿನೇಟ್​ ಆದರು.

ಭಾನುವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವ ಸ್ಪರ್ಧಿ ಇವರೇನಾ?
ಬಿಗ್ ಬಾಸ್​ ಕನ್ನಡ ಸೀಸನ್​ 8
TV9 Web
| Edited By: |

Updated on: Aug 01, 2021 | 1:05 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಫಿನಾಲೆಗೆ ಒಂದು ವಾರ ಮಾತ್ರ ಬಾಕಿ ಉಳಿದಿದೆ. ಸದ್ಯ ಮನೆಯಲ್ಲಿ ಏಳು ಸ್ಪರ್ಧಿಗಳು ಮಾತ್ರ ಉಳಿದುಕೊಂಡಿದ್ದು, ಫಿನಾಲೆಗೂ ಮೊದಲೇ ಇಬ್ಬರು ಎಲಿಮಿನೇಟ್​ ಆಗುತ್ತಿದ್ದಾರೆ. ಹೀಗಾಗಿ, ಮನೆ ಮಂದಿಯಲ್ಲಿ ಟೆನ್ಶನ್​ ಹೆಚ್ಚಿದೆ. ಶನಿವಾರದ ಎಪಿಸೋಡ್​ನಲ್ಲಿ ಶುಭಾ ಪೂಂಜಾ ಎಲಿಮಿನೇಟ್​ ಆಗಿದ್ದಾರೆ. ಭಾನುವಾರ, ಮತ್ತೋರ್ವ ಸ್ಪರ್ಧಿ ಹೊರಹೋಗುತ್ತಿದ್ದಾರೆ.

ಫಿನಾಲೆ ಹಿಂದಿನ ವಾರ ಅಂದರೆ ಈ ವಾರ ಮನೆಯಲ್ಲಿ 9 ಸ್ಪರ್ಧಿಗಳು ಉಳಿದುಕೊಂಡಿದ್ದರು. ಸಾಮಾನ್ಯವಾಗಿ ವೀಕೆಂಡ್​ನಲ್ಲಿ ಎಲಿಮಿನೇಷನ್​ ನಡೆಯುತ್ತದೆ. ಆದರೆ, ಮಂಗಳವಾರ (ಜುಲೈ 27) ಚಕ್ರವರ್ತಿ ಚಂದ್ರಚೂಡ್​ ಎಲಿಮಿನೇಟ್​ ಆದರು. ಅಚ್ಚರಿ ಎಂಬಂತೆ, ಶನಿವಾರ (ಜುಲೈ 31) ಕೂಡ ಒಂದು ಎಲಿಮಿನೇಷನ್​ ನಡೆಯಿತು. ಈ ವೇಳೆ ಶುಭಾ ಪೂಂಜಾ ಮನೆಯಿಂದ ಹೊರ ನಡೆದರು. ಶುಭಾ ಪೂಂಜಾ ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ನಲ್ಲಿ ಅಷ್ಟಾಗಿ ಆ್ಯಕ್ಟಿವ್​ ಆಗಿರಲಿಲ್ಲ. ಇನ್ನು, ಉಳಿದ ಕಂಟೆಸ್ಟೆಂಟ್​ಗಳಿಗೆ ಹೋಲಿಸಿದರೆ, ಶುಭಾ ವೀಕ್​ ಆಗಿದ್ದರು. ಈ ಕಾರಣಕ್ಕೆ ಅವರು ಎಲಿಮಿನೇಟ್​ ಆಗಿದ್ದಾರೆ.

ಇನ್ನು, ಭಾನುವಾರ ಕೂಡ ಒಂದು ಎಲಿಮಿನೇಷನ್​ ನಡೆಯಲಿದೆ ಎಂದು ಸುದೀಪ್​ ಹೇಳಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ದಿವ್ಯಾ ಸುರೇಶ್​  ತಲೆಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ಈ ಪೈಕಿ ಶಮಂತ್​ ಅವರು ಇಂದು ಬಿಗ್​ ಬಾಸ್​ ಮನೆಯಿಂದ ಹೊರ ಹೋಗಿದ್ದಾರೆ ಎನ್ನಲಾಗಿದೆ.

ಶಮಂತ್​ ಮೊದಲ ಇನ್ನಿಂಗ್ಸ್​ನಲ್ಲೇ ಎಲಿಮಿನೇಟ್​ ಆಗಿದ್ದರು. ಆದರೆ, ಅದೃಷ್ಟ ರೀತಿಯಲ್ಲಿ ಅವರು ಬಚಾವ್​ ಆಗಿದ್ದರು. ಇದಾದ ನಂತರ ಅವರು ತಮ್ಮ ಕಲೆಯನ್ನು ಹೊರ ಹಾಕಿದರು. ಸಾಕಷ್ಟು ಹಾಡುಗಳನ್ನು ಅವರು ದೊಡ್ಮನೆಯಲ್ಲಿ ಬರೆದಿದ್ದಾರೆ. ಆದರೆ, ಈ ವಾರ ಅವರಿಗೆ ಅದೃಷ್ಟ ಕೈಕೊಟ್ಟಿದೆ ಎನ್ನಲಾಗುತ್ತಿದೆ. ಇಂದು ರಾತ್ರಿ (ಆಗಸ್ಟ್ 1) ಎಲಿಮಿನೇಷನ್ ಎಪಿಸೋಡ್​ ಪ್ರಸಾರವಾಗಲಿದೆ.

ಇನ್ನು, ಮಂಗಳವಾರ (ಆಗಸ್ಟ್​ 3) ಮತ್ತೊಂದು ಎಲಿಮಿನೇಷನ್​ ನಡೆಯಲಿದೆ. ಅಲ್ಲಿಗೆ, ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳ ಸಂಖ್ಯೆ 5ಕ್ಕೆ ಇಳಿಕೆ ಆಗಲಿದೆ. ಫಿನಾಲೆಯಲ್ಲಿ ಇರುವವರು ಯಾರು ಅನ್ನೋದು ಸದ್ಯದ ಕುತೂಹಲ.

ಇದನ್ನೂ ಓದಿ: ಹಳೆಯ ಫೋಟೋ ವೈರಲ್​ ಪ್ರಕರಣ; ಕೋರ್ಟ್​ ಮೊರೆ ಹೋದ ಬಿಗ್​ ಬಾಸ್​ ಸ್ಪರ್ಧಿ ದಿವ್ಯಾ ಉರುಡುಗ

ಬಿಗ್​ ಬಾಸ್​ ಎಲಿಮಿನೇಷನ್​ನಲ್ಲಿ ಟ್ವಿಸ್ಟ್​; ಶನಿವಾರವೇ ಹೊರ ಬಿದ್ದ ಶುಭಾ ಪೂಂಜಾ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ