AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆ ಮೇಲೆ ಲವ್​ ಪ್ರಪೋಸ್​ ಮಾಡಿದ ಶಮಂತ್ ಬ್ರೋ ಗೌಡ; ಎದುರಿನಿಂದ ಬಂತು ನೋ ಅನ್ನೋ ಉತ್ತರ

ಈ ಬಾರಿಯ ಗಣೇಶೋತ್ಸವಕ್ಕೆ ‘ಬಿಗ್​ ಗಣೇಶೋತ್ಸವ’ ಕಾರ್ಯಕ್ರಮದ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ ಬಿಗ್​ ಬಾಸ್​ ಸ್ಪರ್ಧಿಗಳು. ಬಿಗ್​ ಬಾಸ್​ 8ರ ಸ್ಪರ್ಧಿಗಳನ್ನು ಕರೆಸಲಾಗಿದ್ದು, ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ.

ವೇದಿಕೆ ಮೇಲೆ ಲವ್​ ಪ್ರಪೋಸ್​ ಮಾಡಿದ ಶಮಂತ್ ಬ್ರೋ ಗೌಡ; ಎದುರಿನಿಂದ ಬಂತು ನೋ ಅನ್ನೋ ಉತ್ತರ
ವೇದಿಕೆ ಮೇಲೆ ಲವ್​ ಪ್ರಪೋಸ್​ ಮಾಡಿದ ಶಮಂತ್ ಬ್ರೋ ಗೌಡ
TV9 Web
| Edited By: |

Updated on: Sep 10, 2021 | 7:30 AM

Share

ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿಗಳು ಮಾಧ್ಯಮ ಹಾಗೂ ಸೋಶಿಯಲ್​ ಮೀಡಿಯಾದಲ್ಲಿ ಮಿಂಚುತ್ತಿದ್ದಾರೆ. ಬಿಗ್​ ಬಾಸ್​ ಪಯಣದಿಂದ ಇವರಿಗೆ ಸೋಶಿಯಲ್​ ಮೀಡಿಯಾ ಹಿಂಬಾಲಕರ ಸಂಖ್ಯೆ ಹೆಚ್ಚಿದೆ. ಹೀಗಾಗಿ, ಲೈವ್​ ಬರುವ ಮೂಲಕ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡುತ್ತಿದ್ದಾರೆ. ಇದರ ಜತೆಗೆ, ಕಲರ್ಸ್​ ಕನ್ನಡ ವಾಹಿನಿ ಆಯೋಜಿಸಿದ ಅನೇಕ ಕಾರ್ಯಕ್ರಮಗಳಲ್ಲಿ ಈ ಸ್ಪರ್ಧಿಗಳು ಪಾಲ್ಗೊಳ್ಳುತ್ತಿದ್ದಾರೆ. ಈಗ ಶಮಂತ್ ಬ್ರೋ ಗೌಡ ಅವರು ವೇದಿಕೆ ಮೇಲೆ ಒಬ್ಬರಿಗೆ ಪ್ರಪೋಸ್​ ಮಾಡಿದ್ದಾರೆ.

ಶಮಂತ್​ ಅವರು ಸೀಸನ್​ 8ರಲ್ಲಿ ಸಾಕಷ್ಟು ಹೈಲೈಟ್​ ಆಗಿದ್ದರು. ಅದೃಷ್ಟದ ಬಲದಿಂದ ಉಳಿದುಕೊಂಡಿದ್ದ ಅವರು ನಂತರ ಎಲ್ಲರ ಗಮನ ಸೆಳೆಯೋಕೆ ಯಶಸ್ವಿ ಆದರು. ಈ ಮಧ್ಯೆ ಕಣ್ಮಣಿ ಮೇಲೆ ಶಮಂತ್​ಗೆ ಪ್ರೀತಿ ಮೂಡಿತ್ತು. ಕಣ್ಮಣಿ ಎಂದರೆ ಮನೆಯ ಕ್ಯಾಮೆರಾಗಳು. ಕಣ್ಮಣಿ ಹೆಸರಲ್ಲಿ ಮಹಿಳೆ ಒಬ್ಬರಿಂದ ಮಾತನಾಡಿಸಲಾಗಿತ್ತು. ಕಿಚ್ಚ ಸುದೀಪ್​ ಬಿಗ್​ ಬಾಸ್​ ಶೋ ನಡೆಸಿಕೊಡಲು ಸಾಧ್ಯವಾಗದೆ ಇದ್ದಾಗ ಸ್ಪರ್ಧಿಗಳ ಜತೆ ಸಂವಾದ ನಡೆಸಿದ್ದು ಇದೇ ಕಣ್ಮಣಿ. ಆ ಧ್ವನಿ ಬಗ್ಗೆ ಶಮಂತ್​ ಸಾಕಷ್ಟು ಒಲವು ಹೊಂದಿದ್ದರು. ಅಲ್ಲದೆ, ಕಣ್ಮಣಿ ಬಗ್ಗೆ ವಿಶೇಷ ಸಾಲುಗಳನ್ನು ಕೂಡ ಅವರು ಬರೆದಿದ್ದರು. ಈಗ ಅವರು ಜಿಮ್ಮಿ ಜಲಜಾಗೆ ಪ್ರಪೋಸ್ ಮಾಡಿದ್ದಾರೆ.

ಈ ಬಾರಿಯ ಗಣೇಶೋತ್ಸವಕ್ಕೆ ‘ಬಿಗ್​ ಗಣೇಶೋತ್ಸವ’ ಕಾರ್ಯಕ್ರಮದ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ ಬಿಗ್​ ಬಾಸ್​ ಸ್ಪರ್ಧಿಗಳು. ಬಿಗ್​ ಬಾಸ್​ 8ರ ಸ್ಪರ್ಧಿಗಳನ್ನು ಕರೆಸಲಾಗಿದ್ದು, ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಈ ವೇಳೆ ಶಮಂತ್​ ಹಾಗೂ ಪ್ರಶಾಂತ್​ ಅವರನ್ನು ವೇದಿಕೆ ಮೇಲೆ ಕರೆಸಲಾಯಿತು. ನಿರೂಪಕಿಯಾಗಿದ್ದ ಅನುಪಮಾ ಗೌಡ ಅವರು, ಕ್ಯಾಮೆರಾಗೆ ಪ್ರಪೋಸ್​ ಮಾಡುವಂತೆ ಹೇಳಿದರು. ಶಮಂತ್ ಪ್ರಪೋಸ್​ಅನ್ನು ಕ್ಯಾಮೆರಾ ಒಪ್ಪಿಕೊಂಡಿಲ್ಲ. ಆದರೆ, ಪ್ರಶಾಂತ್​ ಪ್ರಪೋಸ್​ ಮಾಡುತ್ತಿದ್ದಂತೆ ಕ್ಯಾಮೆರಾ ಒಪ್ಪಿಕೊಂಡಿದೆ.

‘ಹಳೇ ಪ್ಲೇಯರ್ ಪ್ರಶಾಂತ್ ಲವ್ ಪ್ರೊಪೋಸ್‍ಗೆ ಒಪ್ಪಿಕೊಂಡ ಜಿಮ್ಮಿ ಜಲಜಾ’ ಎನ್ನುವ ಕ್ಯಾಪ್ಶನ್​ನೊಂದಿಗೆ ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದೆ. ಶುಕ್ರವಾರ (ಸೆಪ್ಟೆಂಬರ್​ 10) ಈ ಕಾರ್ಯಕ್ರಮ ಪ್ರಸಾರವಾಗಲಿದೆ.

ಇದನ್ನೂ ಓದಿ:ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ ಮಂಜು-ದಿವ್ಯಾ ಫೋಟೋ; ಬಿಗ್​ ಬಾಸ್​ ಬಳಿಕ ಏನಿದು ಕಹಾನಿ? 

‘ಬಿಗ್​ ಬಾಸ್​ ಸೀಸನ್​ 8’ ಮರುಸೃಷ್ಟಿ; ಇದನ್ನು ನೋಡಿದ್ರೆ ನೀವು ನಗೋದು ಗ್ಯಾರಂಟಿ

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!