AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ನಿಯಮ ಉಲ್ಲಂಘನೆ? ಇದೇ ಮೊದಲ ಬಾರಿಗೆ ಫೋನ್​ ಬಳಕೆ ಮಾಡಿದ ಶಮಂತ್​

Bigg Boss Kannada 8: ಬಿಗ್​ ಬಾಸ್​ ಮನೆಯಲ್ಲಿ ಸ್ಥಾಪನೆಯಾಗಿರುವ ಫೋನ್​ ಬೂತ್ ​ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಚರ್ಚೆ ಮಾಡಿದ್ದಾರೆ. ಶಮಂತ್​ ಬಿಗ್​ ಬಾಸ್​ ನಿಯಮ ಮೀರಿದ್ದಾರೆ ಎಂದು ಕೆಲವರು ನಗೆಚಟಾಕಿ ಹಾರಿಸಿದ್ದಾರೆ.

ಬಿಗ್​ ಬಾಸ್​ ನಿಯಮ ಉಲ್ಲಂಘನೆ? ಇದೇ ಮೊದಲ ಬಾರಿಗೆ ಫೋನ್​ ಬಳಕೆ ಮಾಡಿದ ಶಮಂತ್​
ಶಮಂತ್​ ಬ್ರೋ ಗೌಡ
TV9 Web
| Edited By: |

Updated on:Jul 27, 2021 | 10:48 AM

Share

ಬಿಗ್​ ಬಾಸ್​ ಸೇರಿದ ಮೇಲೆ ಹೊರ ಜಗತ್ತಿನ ಸಂಪರ್ಕ ಇರುವುದಿಲ್ಲ. ಅಲ್ಲಿ ಮೊಬೈಲ್​ ಬಳಕೆ ಮಾಡುವಂತಿಲ್ಲ. ಮನೆಯವರ ಸಂಪರ್ಕಕ್ಕೆ ಒಳಪಡುತ್ತೀರಿ ಎಂದರೂ ಅದು ಸಾಧ್ಯವಿಲ್ಲ. ಆದರೆ, ಇದೇ ಮೊದಲ ಬಾರಿಗೆ ಶಮಂತ್​ ಬಿಗ್​ ಬಾಸ್​ ಮನೆಯಲ್ಲಿ ಫೋನ್​ನಲ್ಲಿ ಮಾತನಾಡಿದ್ದಾರೆ. ಇದನ್ನು ನೋಡಿದ ಮನೆ ಮಂದಿ ಅಚ್ಚರಿಗೊಂಡಿದ್ದಾರೆ.

ಹಾಗಾದರೆ ಶಮಂತ್​ ಕದ್ದುಮುಚ್ಚಿ ಏನಾದರೂ ಮೊಬೈಲ್​ ಬಳಕೆ ಮಾಡಿದ್ರಾ? ಖಂಡಿತವಾಗಿಯೂ ಇಲ್ಲ. ಬಿಗ್​ ಬಾಸ್​ ಮನೆಯ ಗಾರ್ಡನ್​ ಏರಿಯಾದಲ್ಲಿ ಫೋನ್​ಬೂತ್​ ಒಂದನ್ನು ಸ್ಥಾಪನೆ ಮಾಡಲಾಗಿದೆ. ಸೋಮವಾರದ (ಜುಲೈ 26) ಮುಂಜಾನೆ ಎಲ್ಲಾ ಸ್ಪರ್ಧಿಗಳು ನಿದ್ರೆ ಮಾಡುತ್ತಾ ಇದ್ದರು. ಈ ವೇಳೆ ಫೋನ್​ ರಿಂಗ್​ ಆಗಿದೆ.

ಎಲ್ಲಾ ಸ್ಪರ್ಧಿಗಳು ಮನೆ ಹೊರಗೆ ಹೋಗಿ ನೋಡಿದ್ದಾರೆ. ಈ ವೇಳೆ ಅಲ್ಲಿ ಟೆಲಿಫೋನ್​ಬೂತ್​ ಇರೋದು ಕಂಡು ಬಂದಿದೆ. ಈ ಟೆಲಿಫೋನ್​ ಬೂತ್​ನಲ್ಲಿ ಮೊದಲು ಪ್ರಶಾಂತ್​ ಹೋಗಿ ಮಾತನಾಡಿದ್ದಾರೆ. ಆದರೆ, ಆಗಲೇ ಕಟ್​ ಆಗಿತ್ತು. ನಂತರ ಶಮಂತ್​ ಹೋದಾಗ ಅಲ್ಲಿಂದ ಒಂದು ಪುರುಷ ಧ್ವನಿ ಕೇಳಿಸಿತು.

‘ಬಿಗ್​ ಬಾಸ್​ನಲ್ಲಿ ಇದೇ ಮೊದಲ ಬಾರಿಗೆ ನೀವು ಫೋನ್​ನಲ್ಲಿ ಮಾತಾಡ್ತಾ ಇದೀರಾ. ಹೇಗನಿಸ್ತಿದೆ’ ಎಂದು ಫೋನ್​ನಲ್ಲಿ ಮಾತನಾಡಿದ ವ್ಯಕ್ತಿ ಕೇಳಿದರು. ಶಮಂತ್​ ಇದಕ್ಕೆ ಸಾಕಷ್ಟು ಖುಷಿಪಟ್ಟರು. ಅಲ್ಲದೆ, ನೀವು ಬಿಗ್​ ಬಾಸ್​ ಅಲ್ವಾ ಎಂದು ಪ್ರಶ್ನೆ ಮಾಡಿದರು. ಆದರೆ, ಆ ಕಡೆಯಿಂದ ಉತ್ತರ ಬಂದಿಲ್ಲ. ನಂತರ ಬೆಳಗ್ಗೆ ಶುಭಾ ಹೋಗಿ ಕರೆ ಸ್ವೀಕರಿಸಿದರು. ಈ ವೇಳೆ ‘ಯಾವುದೇ ಸಂದೇಶ ಬರೋದಾದ್ರೂ ಈ ಫೋನ್​ ಮೂಲಕವೇ ಬರಲಿದೆ’ ಎಂದರು ಬಿಗ್​ ಬಾಸ್.

ಬಿಗ್​ ಬಾಸ್​ ಮನೆಯಲ್ಲಿ ಸ್ಥಾಪನೆಯಾಗಿರುವ ಫೋನ್​ ಬೂತ್​ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಚರ್ಚೆ ಮಾಡಿದ್ದಾರೆ. ಶಮಂತ್​ ಬಿಗ್​ ಬಾಸ್​ ನಿಯಮ ಮೀರಿದ್ದಾರೆ ಎಂದು ಕೆಲವರು ನಗೆಚಟಾಕಿ ಹಾರಿಸಿದ್ದಾರೆ.

ಇದನ್ನೂ ಓದಿ:

‘ಆ ಕೈಸನ್ನೆ ತೋರಿಸಿದ್ದಕ್ಕೆ ಕ್ಷಮೆ ಕೇಳುತ್ತೇನೆ’; ಪ್ರಿಯಾಂಕಾ ತಿಮ್ಮೇಶ್​ ಬಳಿ ಶಿರಬಾಗಿ ಕ್ಷಮೆ ಕೇಳಿದ ಚಕ್ರವರ್ತಿ ಚಂದ್ರಚೂಡ್​

ಕುಟುಂಬದವರ ಸುದ್ದಿಗೆ ಬಂದ ಶಮಂತ್​ಗೆ ಸರಿಯಾಗೇ ತಿರುಗೇಟು ನೀಡಿದ ವೈಷ್ಣವಿ ಗೌಡ

Published On - 7:19 am, Tue, 27 July 21

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?