AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ನಿಯಮ ಉಲ್ಲಂಘನೆ? ಇದೇ ಮೊದಲ ಬಾರಿಗೆ ಫೋನ್​ ಬಳಕೆ ಮಾಡಿದ ಶಮಂತ್​

Bigg Boss Kannada 8: ಬಿಗ್​ ಬಾಸ್​ ಮನೆಯಲ್ಲಿ ಸ್ಥಾಪನೆಯಾಗಿರುವ ಫೋನ್​ ಬೂತ್ ​ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಚರ್ಚೆ ಮಾಡಿದ್ದಾರೆ. ಶಮಂತ್​ ಬಿಗ್​ ಬಾಸ್​ ನಿಯಮ ಮೀರಿದ್ದಾರೆ ಎಂದು ಕೆಲವರು ನಗೆಚಟಾಕಿ ಹಾರಿಸಿದ್ದಾರೆ.

ಬಿಗ್​ ಬಾಸ್​ ನಿಯಮ ಉಲ್ಲಂಘನೆ? ಇದೇ ಮೊದಲ ಬಾರಿಗೆ ಫೋನ್​ ಬಳಕೆ ಮಾಡಿದ ಶಮಂತ್​
ಶಮಂತ್​ ಬ್ರೋ ಗೌಡ
TV9 Web
| Edited By: |

Updated on:Jul 27, 2021 | 10:48 AM

Share

ಬಿಗ್​ ಬಾಸ್​ ಸೇರಿದ ಮೇಲೆ ಹೊರ ಜಗತ್ತಿನ ಸಂಪರ್ಕ ಇರುವುದಿಲ್ಲ. ಅಲ್ಲಿ ಮೊಬೈಲ್​ ಬಳಕೆ ಮಾಡುವಂತಿಲ್ಲ. ಮನೆಯವರ ಸಂಪರ್ಕಕ್ಕೆ ಒಳಪಡುತ್ತೀರಿ ಎಂದರೂ ಅದು ಸಾಧ್ಯವಿಲ್ಲ. ಆದರೆ, ಇದೇ ಮೊದಲ ಬಾರಿಗೆ ಶಮಂತ್​ ಬಿಗ್​ ಬಾಸ್​ ಮನೆಯಲ್ಲಿ ಫೋನ್​ನಲ್ಲಿ ಮಾತನಾಡಿದ್ದಾರೆ. ಇದನ್ನು ನೋಡಿದ ಮನೆ ಮಂದಿ ಅಚ್ಚರಿಗೊಂಡಿದ್ದಾರೆ.

ಹಾಗಾದರೆ ಶಮಂತ್​ ಕದ್ದುಮುಚ್ಚಿ ಏನಾದರೂ ಮೊಬೈಲ್​ ಬಳಕೆ ಮಾಡಿದ್ರಾ? ಖಂಡಿತವಾಗಿಯೂ ಇಲ್ಲ. ಬಿಗ್​ ಬಾಸ್​ ಮನೆಯ ಗಾರ್ಡನ್​ ಏರಿಯಾದಲ್ಲಿ ಫೋನ್​ಬೂತ್​ ಒಂದನ್ನು ಸ್ಥಾಪನೆ ಮಾಡಲಾಗಿದೆ. ಸೋಮವಾರದ (ಜುಲೈ 26) ಮುಂಜಾನೆ ಎಲ್ಲಾ ಸ್ಪರ್ಧಿಗಳು ನಿದ್ರೆ ಮಾಡುತ್ತಾ ಇದ್ದರು. ಈ ವೇಳೆ ಫೋನ್​ ರಿಂಗ್​ ಆಗಿದೆ.

ಎಲ್ಲಾ ಸ್ಪರ್ಧಿಗಳು ಮನೆ ಹೊರಗೆ ಹೋಗಿ ನೋಡಿದ್ದಾರೆ. ಈ ವೇಳೆ ಅಲ್ಲಿ ಟೆಲಿಫೋನ್​ಬೂತ್​ ಇರೋದು ಕಂಡು ಬಂದಿದೆ. ಈ ಟೆಲಿಫೋನ್​ ಬೂತ್​ನಲ್ಲಿ ಮೊದಲು ಪ್ರಶಾಂತ್​ ಹೋಗಿ ಮಾತನಾಡಿದ್ದಾರೆ. ಆದರೆ, ಆಗಲೇ ಕಟ್​ ಆಗಿತ್ತು. ನಂತರ ಶಮಂತ್​ ಹೋದಾಗ ಅಲ್ಲಿಂದ ಒಂದು ಪುರುಷ ಧ್ವನಿ ಕೇಳಿಸಿತು.

‘ಬಿಗ್​ ಬಾಸ್​ನಲ್ಲಿ ಇದೇ ಮೊದಲ ಬಾರಿಗೆ ನೀವು ಫೋನ್​ನಲ್ಲಿ ಮಾತಾಡ್ತಾ ಇದೀರಾ. ಹೇಗನಿಸ್ತಿದೆ’ ಎಂದು ಫೋನ್​ನಲ್ಲಿ ಮಾತನಾಡಿದ ವ್ಯಕ್ತಿ ಕೇಳಿದರು. ಶಮಂತ್​ ಇದಕ್ಕೆ ಸಾಕಷ್ಟು ಖುಷಿಪಟ್ಟರು. ಅಲ್ಲದೆ, ನೀವು ಬಿಗ್​ ಬಾಸ್​ ಅಲ್ವಾ ಎಂದು ಪ್ರಶ್ನೆ ಮಾಡಿದರು. ಆದರೆ, ಆ ಕಡೆಯಿಂದ ಉತ್ತರ ಬಂದಿಲ್ಲ. ನಂತರ ಬೆಳಗ್ಗೆ ಶುಭಾ ಹೋಗಿ ಕರೆ ಸ್ವೀಕರಿಸಿದರು. ಈ ವೇಳೆ ‘ಯಾವುದೇ ಸಂದೇಶ ಬರೋದಾದ್ರೂ ಈ ಫೋನ್​ ಮೂಲಕವೇ ಬರಲಿದೆ’ ಎಂದರು ಬಿಗ್​ ಬಾಸ್.

ಬಿಗ್​ ಬಾಸ್​ ಮನೆಯಲ್ಲಿ ಸ್ಥಾಪನೆಯಾಗಿರುವ ಫೋನ್​ ಬೂತ್​ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಚರ್ಚೆ ಮಾಡಿದ್ದಾರೆ. ಶಮಂತ್​ ಬಿಗ್​ ಬಾಸ್​ ನಿಯಮ ಮೀರಿದ್ದಾರೆ ಎಂದು ಕೆಲವರು ನಗೆಚಟಾಕಿ ಹಾರಿಸಿದ್ದಾರೆ.

ಇದನ್ನೂ ಓದಿ:

‘ಆ ಕೈಸನ್ನೆ ತೋರಿಸಿದ್ದಕ್ಕೆ ಕ್ಷಮೆ ಕೇಳುತ್ತೇನೆ’; ಪ್ರಿಯಾಂಕಾ ತಿಮ್ಮೇಶ್​ ಬಳಿ ಶಿರಬಾಗಿ ಕ್ಷಮೆ ಕೇಳಿದ ಚಕ್ರವರ್ತಿ ಚಂದ್ರಚೂಡ್​

ಕುಟುಂಬದವರ ಸುದ್ದಿಗೆ ಬಂದ ಶಮಂತ್​ಗೆ ಸರಿಯಾಗೇ ತಿರುಗೇಟು ನೀಡಿದ ವೈಷ್ಣವಿ ಗೌಡ

Published On - 7:19 am, Tue, 27 July 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ