AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್ ಅರ್ಧಕ್ಕೆ ತೊರೆದ ರಾಕೇಶ್ ಬಾಪಟ್​​-ಶಮಿತಾ ಶೆಟ್ಟಿ; ಏನಿದು ಸಮಾಚಾರ?

ರಾಕೇಶ್​ ಬಾಪಟ್​ ಹಾಗೂ ಶಮಿತಾ ಶೆಟ್ಟಿ ಬಿಗ್​ ಬಾಸ್​ ಒಟಿಟಿಯಲ್ಲಿ ತುಂಬಾನೇ ಕ್ಲೋಸ್​ ಆಗಿದ್ದರು. ಈ ಜೋಡಿ ಸಾಕಷ್ಟು ಜನರಿಗೆ ಇಷ್ಟವಾಗಿತ್ತು. ಇಬ್ಬರೂ ಒಂದೇ ವಯಸ್ಸಿನವರಾದ್ದರಿಂದ ಬೇಗ ಕನೆಕ್ಟ್​ ಆಗಿದ್ದರು.

ಬಿಗ್​ ಬಾಸ್ ಅರ್ಧಕ್ಕೆ ತೊರೆದ ರಾಕೇಶ್ ಬಾಪಟ್​​-ಶಮಿತಾ ಶೆಟ್ಟಿ; ಏನಿದು ಸಮಾಚಾರ?
ಶಮಿತಾ ಶೆಟ್ಟಿ ಹಾಗೂ ರಾಕೇಶ್ ಬಾಪಟ್
TV9 Web
| Edited By: |

Updated on: Nov 14, 2021 | 4:57 PM

Share

‘ಬಿಗ್​ ಬಾಸ್​ ಸೀಸನ್​ 15’ ಸಾಕಷ್ಟು ಕುತೂಹಲ ಸೃಷ್ಟಿಸುತ್ತಿದೆ. ರಾಕೇಶ್​ ಬಾಪಟ್​ ಹಾಗೂ ಶಮಿತಾ ಶೆಟ್ಟಿ ಬಿಗ್​ ಬಾಸ್​ ಮನೆ ಒಳಗೆ ಇದ್ದಿದ್ದರಿಂದ ಪ್ರೇಕ್ಷಕರಿಗೆ ಸಾಕಷ್ಟು ಮನರಂಜನೆ ಸಿಗುತ್ತಿತ್ತು. ಇಬ್ಬರೂ ಕ್ಲೋಸ್​ ಆಗಿರೋದು ಅಭಿಮಾನಿಗಳಿಗೆ ಖುಷಿ ನೀಡಿತ್ತು. ಆದರೆ, ಅನಾರೋಗ್ಯ ಕಾರಣದಿಂದ ರಾಕೇಶ್​ ಬಾಪಟ್​ ಬಿಗ್​ ಬಾಸ್​ನಿಂದ ಹೊರ ನಡೆದಿದ್ದರು. ಈಗ ಶಮಿತಾ ಶೆಟ್ಟಿ ಪಾಳಿ. ಅವರು ಕೂಡ ಈ ವಾರ ಬಿಗ್​ ಬಾಸ್​ನಿಂದ ಹೊರ ನಡೆದಿದ್ದಾರೆ ಎನ್ನಲಾಗುತ್ತಿದೆ. ಇದು ವೀಕ್ಷಕರಿಗೆ ಸಾಕಷ್ಟು ಬೇಸರ ಮೂಡಿಸಿದೆ.

ರಾಕೇಶ್​ ಬಾಪಟ್​ ಹಾಗೂ ಶಮಿತಾ ಶೆಟ್ಟಿ ಬಿಗ್​ ಬಾಸ್​ ಒಟಿಟಿಯಲ್ಲಿ ತುಂಬಾನೇ ಕ್ಲೋಸ್​ ಆಗಿದ್ದರು. ಈ ಜೋಡಿ ಸಾಕಷ್ಟು ಜನರಿಗೆ ಇಷ್ಟವಾಗಿತ್ತು. ಇಬ್ಬರೂ ಒಂದೇ ವಯಸ್ಸಿನವರಾದ್ದರಿಂದ ಬೇಗ ಕನೆಕ್ಟ್​ ಆಗಿದ್ದರು. ಇವರ ಆಪ್ತತೆ ಬಿಗ್​ ಬಾಸ್​ ಮನೆಗೆ ಮಾತ್ರ ಸೀಮಿತವಾಗಿರಲಿಲ್ಲ. ಬಿಗ್​ಬಾಸ್​ ಒಟಿಟಿಯಿಂದ ಹೊರ ಬಂದ ನಂತರವೂ ಇವರು ಕ್ಲೋಸ್​ ಆಗಿಯೇ ಇದ್ದರು. ಈ ಜೋಡಿ ಮತ್ತೆ ಬಿಗ್​ ಬಾಸ್​ 15ರಲ್ಲಿ ಒಂದಾಗಿತ್ತು. ಬಂದ ದಿನವೇ ಕಿಸ್​ ಮಾಡಿಕೊಂಡಿದ್ದರು. ಆದರೆ, ಈಗ ಇಬ್ಬರೂ ಅರ್ಧದಲ್ಲೇ ಹೊರ ಬರುವಂತಾಗಿದೆ.

ವೈದ್ಯಕೀಯ ಕಾರಣಗಳನ್ನು ನೀಡಿ ರಾಕೇಶ್​ ಅವರು ಅರ್ಧದಲ್ಲೇ ಮನೆಯಿಂದ ಹೊರ ಬಂದಿದ್ದರು.  ಈಗ ಕೆಲ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ ಶಮಿತಾ ಶೆಟ್ಟಿ ಆಸ್ಪತ್ರೆ ಸೇರಿದ್ದಾರೆ. ಅವರಿಗೆ ಅನಾರೋಗ್ಯ ಕಾಡಿದೆಯಂತೆ. ಟಾಸ್ಕ್​ ವೇಳೆ ಅವರಿಗೆ ತೊಂದರೆ ಉಂಟಾಗಿದೆ. ಈ ಕಾರಣಕ್ಕೆ ಅವರು ಹೊರಹೋಗಿದ್ದಾರೆ. ಮೂಲಗಳ ಪ್ರಕಾರ ಮುಂದಿನವಾರ ಅವರು ಕಮ್​​ಬ್ಯಾಕ್​ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಕೇಶ್​ ಕಿಡ್ನಿಯಲ್ಲಿ ಕಲ್ಲಿದೆ. ಈ ಕಾರಣಕ್ಕೆ ಅವರಿಗೆ ತೀವ್ರ ನೋವು ಕಾಣಿಸಿಕೊಂಡಿದೆ. ಅವರು ಮತ್ತೆ ಬಿಗ್​ ಬಾಸ್​ ಶೋಗೆ ಮರಳುತ್ತಾರೋ ಅಥವಾ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಾಗುತ್ತದೋ ಎನ್ನುವುದು ತಿಳಿದಿಲ್ಲ. ಒಂದೊಮ್ಮೆ ಅವರು ಆಪರೇಷನ್​ಗೆ ಒಳಗಾದರೆ ಅವರು ಮತ್ತೆ ದೊಡ್ಮನೆ ಸೇರುವುದು ಅನುಮಾನ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಶುರುವಾಯ್ತು ರಾಕೇಶ್​-ಶಮಿತಾ ರೊಮ್ಯಾನ್ಸ್​; ಮೊದಲ ದಿನವೇ ಕಿಸ್ಸಿಂಗ್​

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು