AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್ ಅರ್ಧಕ್ಕೆ ತೊರೆದ ರಾಕೇಶ್ ಬಾಪಟ್​​-ಶಮಿತಾ ಶೆಟ್ಟಿ; ಏನಿದು ಸಮಾಚಾರ?

ರಾಕೇಶ್​ ಬಾಪಟ್​ ಹಾಗೂ ಶಮಿತಾ ಶೆಟ್ಟಿ ಬಿಗ್​ ಬಾಸ್​ ಒಟಿಟಿಯಲ್ಲಿ ತುಂಬಾನೇ ಕ್ಲೋಸ್​ ಆಗಿದ್ದರು. ಈ ಜೋಡಿ ಸಾಕಷ್ಟು ಜನರಿಗೆ ಇಷ್ಟವಾಗಿತ್ತು. ಇಬ್ಬರೂ ಒಂದೇ ವಯಸ್ಸಿನವರಾದ್ದರಿಂದ ಬೇಗ ಕನೆಕ್ಟ್​ ಆಗಿದ್ದರು.

ಬಿಗ್​ ಬಾಸ್ ಅರ್ಧಕ್ಕೆ ತೊರೆದ ರಾಕೇಶ್ ಬಾಪಟ್​​-ಶಮಿತಾ ಶೆಟ್ಟಿ; ಏನಿದು ಸಮಾಚಾರ?
ಶಮಿತಾ ಶೆಟ್ಟಿ ಹಾಗೂ ರಾಕೇಶ್ ಬಾಪಟ್
TV9 Web
| Edited By: |

Updated on: Nov 14, 2021 | 4:57 PM

Share

‘ಬಿಗ್​ ಬಾಸ್​ ಸೀಸನ್​ 15’ ಸಾಕಷ್ಟು ಕುತೂಹಲ ಸೃಷ್ಟಿಸುತ್ತಿದೆ. ರಾಕೇಶ್​ ಬಾಪಟ್​ ಹಾಗೂ ಶಮಿತಾ ಶೆಟ್ಟಿ ಬಿಗ್​ ಬಾಸ್​ ಮನೆ ಒಳಗೆ ಇದ್ದಿದ್ದರಿಂದ ಪ್ರೇಕ್ಷಕರಿಗೆ ಸಾಕಷ್ಟು ಮನರಂಜನೆ ಸಿಗುತ್ತಿತ್ತು. ಇಬ್ಬರೂ ಕ್ಲೋಸ್​ ಆಗಿರೋದು ಅಭಿಮಾನಿಗಳಿಗೆ ಖುಷಿ ನೀಡಿತ್ತು. ಆದರೆ, ಅನಾರೋಗ್ಯ ಕಾರಣದಿಂದ ರಾಕೇಶ್​ ಬಾಪಟ್​ ಬಿಗ್​ ಬಾಸ್​ನಿಂದ ಹೊರ ನಡೆದಿದ್ದರು. ಈಗ ಶಮಿತಾ ಶೆಟ್ಟಿ ಪಾಳಿ. ಅವರು ಕೂಡ ಈ ವಾರ ಬಿಗ್​ ಬಾಸ್​ನಿಂದ ಹೊರ ನಡೆದಿದ್ದಾರೆ ಎನ್ನಲಾಗುತ್ತಿದೆ. ಇದು ವೀಕ್ಷಕರಿಗೆ ಸಾಕಷ್ಟು ಬೇಸರ ಮೂಡಿಸಿದೆ.

ರಾಕೇಶ್​ ಬಾಪಟ್​ ಹಾಗೂ ಶಮಿತಾ ಶೆಟ್ಟಿ ಬಿಗ್​ ಬಾಸ್​ ಒಟಿಟಿಯಲ್ಲಿ ತುಂಬಾನೇ ಕ್ಲೋಸ್​ ಆಗಿದ್ದರು. ಈ ಜೋಡಿ ಸಾಕಷ್ಟು ಜನರಿಗೆ ಇಷ್ಟವಾಗಿತ್ತು. ಇಬ್ಬರೂ ಒಂದೇ ವಯಸ್ಸಿನವರಾದ್ದರಿಂದ ಬೇಗ ಕನೆಕ್ಟ್​ ಆಗಿದ್ದರು. ಇವರ ಆಪ್ತತೆ ಬಿಗ್​ ಬಾಸ್​ ಮನೆಗೆ ಮಾತ್ರ ಸೀಮಿತವಾಗಿರಲಿಲ್ಲ. ಬಿಗ್​ಬಾಸ್​ ಒಟಿಟಿಯಿಂದ ಹೊರ ಬಂದ ನಂತರವೂ ಇವರು ಕ್ಲೋಸ್​ ಆಗಿಯೇ ಇದ್ದರು. ಈ ಜೋಡಿ ಮತ್ತೆ ಬಿಗ್​ ಬಾಸ್​ 15ರಲ್ಲಿ ಒಂದಾಗಿತ್ತು. ಬಂದ ದಿನವೇ ಕಿಸ್​ ಮಾಡಿಕೊಂಡಿದ್ದರು. ಆದರೆ, ಈಗ ಇಬ್ಬರೂ ಅರ್ಧದಲ್ಲೇ ಹೊರ ಬರುವಂತಾಗಿದೆ.

ವೈದ್ಯಕೀಯ ಕಾರಣಗಳನ್ನು ನೀಡಿ ರಾಕೇಶ್​ ಅವರು ಅರ್ಧದಲ್ಲೇ ಮನೆಯಿಂದ ಹೊರ ಬಂದಿದ್ದರು.  ಈಗ ಕೆಲ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ ಶಮಿತಾ ಶೆಟ್ಟಿ ಆಸ್ಪತ್ರೆ ಸೇರಿದ್ದಾರೆ. ಅವರಿಗೆ ಅನಾರೋಗ್ಯ ಕಾಡಿದೆಯಂತೆ. ಟಾಸ್ಕ್​ ವೇಳೆ ಅವರಿಗೆ ತೊಂದರೆ ಉಂಟಾಗಿದೆ. ಈ ಕಾರಣಕ್ಕೆ ಅವರು ಹೊರಹೋಗಿದ್ದಾರೆ. ಮೂಲಗಳ ಪ್ರಕಾರ ಮುಂದಿನವಾರ ಅವರು ಕಮ್​​ಬ್ಯಾಕ್​ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಕೇಶ್​ ಕಿಡ್ನಿಯಲ್ಲಿ ಕಲ್ಲಿದೆ. ಈ ಕಾರಣಕ್ಕೆ ಅವರಿಗೆ ತೀವ್ರ ನೋವು ಕಾಣಿಸಿಕೊಂಡಿದೆ. ಅವರು ಮತ್ತೆ ಬಿಗ್​ ಬಾಸ್​ ಶೋಗೆ ಮರಳುತ್ತಾರೋ ಅಥವಾ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಾಗುತ್ತದೋ ಎನ್ನುವುದು ತಿಳಿದಿಲ್ಲ. ಒಂದೊಮ್ಮೆ ಅವರು ಆಪರೇಷನ್​ಗೆ ಒಳಗಾದರೆ ಅವರು ಮತ್ತೆ ದೊಡ್ಮನೆ ಸೇರುವುದು ಅನುಮಾನ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಶುರುವಾಯ್ತು ರಾಕೇಶ್​-ಶಮಿತಾ ರೊಮ್ಯಾನ್ಸ್​; ಮೊದಲ ದಿನವೇ ಕಿಸ್ಸಿಂಗ್​

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ