AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್ ಅರ್ಧಕ್ಕೆ ತೊರೆದ ರಾಕೇಶ್ ಬಾಪಟ್​​-ಶಮಿತಾ ಶೆಟ್ಟಿ; ಏನಿದು ಸಮಾಚಾರ?

ರಾಕೇಶ್​ ಬಾಪಟ್​ ಹಾಗೂ ಶಮಿತಾ ಶೆಟ್ಟಿ ಬಿಗ್​ ಬಾಸ್​ ಒಟಿಟಿಯಲ್ಲಿ ತುಂಬಾನೇ ಕ್ಲೋಸ್​ ಆಗಿದ್ದರು. ಈ ಜೋಡಿ ಸಾಕಷ್ಟು ಜನರಿಗೆ ಇಷ್ಟವಾಗಿತ್ತು. ಇಬ್ಬರೂ ಒಂದೇ ವಯಸ್ಸಿನವರಾದ್ದರಿಂದ ಬೇಗ ಕನೆಕ್ಟ್​ ಆಗಿದ್ದರು.

ಬಿಗ್​ ಬಾಸ್ ಅರ್ಧಕ್ಕೆ ತೊರೆದ ರಾಕೇಶ್ ಬಾಪಟ್​​-ಶಮಿತಾ ಶೆಟ್ಟಿ; ಏನಿದು ಸಮಾಚಾರ?
ಶಮಿತಾ ಶೆಟ್ಟಿ ಹಾಗೂ ರಾಕೇಶ್ ಬಾಪಟ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 14, 2021 | 4:57 PM

‘ಬಿಗ್​ ಬಾಸ್​ ಸೀಸನ್​ 15’ ಸಾಕಷ್ಟು ಕುತೂಹಲ ಸೃಷ್ಟಿಸುತ್ತಿದೆ. ರಾಕೇಶ್​ ಬಾಪಟ್​ ಹಾಗೂ ಶಮಿತಾ ಶೆಟ್ಟಿ ಬಿಗ್​ ಬಾಸ್​ ಮನೆ ಒಳಗೆ ಇದ್ದಿದ್ದರಿಂದ ಪ್ರೇಕ್ಷಕರಿಗೆ ಸಾಕಷ್ಟು ಮನರಂಜನೆ ಸಿಗುತ್ತಿತ್ತು. ಇಬ್ಬರೂ ಕ್ಲೋಸ್​ ಆಗಿರೋದು ಅಭಿಮಾನಿಗಳಿಗೆ ಖುಷಿ ನೀಡಿತ್ತು. ಆದರೆ, ಅನಾರೋಗ್ಯ ಕಾರಣದಿಂದ ರಾಕೇಶ್​ ಬಾಪಟ್​ ಬಿಗ್​ ಬಾಸ್​ನಿಂದ ಹೊರ ನಡೆದಿದ್ದರು. ಈಗ ಶಮಿತಾ ಶೆಟ್ಟಿ ಪಾಳಿ. ಅವರು ಕೂಡ ಈ ವಾರ ಬಿಗ್​ ಬಾಸ್​ನಿಂದ ಹೊರ ನಡೆದಿದ್ದಾರೆ ಎನ್ನಲಾಗುತ್ತಿದೆ. ಇದು ವೀಕ್ಷಕರಿಗೆ ಸಾಕಷ್ಟು ಬೇಸರ ಮೂಡಿಸಿದೆ.

ರಾಕೇಶ್​ ಬಾಪಟ್​ ಹಾಗೂ ಶಮಿತಾ ಶೆಟ್ಟಿ ಬಿಗ್​ ಬಾಸ್​ ಒಟಿಟಿಯಲ್ಲಿ ತುಂಬಾನೇ ಕ್ಲೋಸ್​ ಆಗಿದ್ದರು. ಈ ಜೋಡಿ ಸಾಕಷ್ಟು ಜನರಿಗೆ ಇಷ್ಟವಾಗಿತ್ತು. ಇಬ್ಬರೂ ಒಂದೇ ವಯಸ್ಸಿನವರಾದ್ದರಿಂದ ಬೇಗ ಕನೆಕ್ಟ್​ ಆಗಿದ್ದರು. ಇವರ ಆಪ್ತತೆ ಬಿಗ್​ ಬಾಸ್​ ಮನೆಗೆ ಮಾತ್ರ ಸೀಮಿತವಾಗಿರಲಿಲ್ಲ. ಬಿಗ್​ಬಾಸ್​ ಒಟಿಟಿಯಿಂದ ಹೊರ ಬಂದ ನಂತರವೂ ಇವರು ಕ್ಲೋಸ್​ ಆಗಿಯೇ ಇದ್ದರು. ಈ ಜೋಡಿ ಮತ್ತೆ ಬಿಗ್​ ಬಾಸ್​ 15ರಲ್ಲಿ ಒಂದಾಗಿತ್ತು. ಬಂದ ದಿನವೇ ಕಿಸ್​ ಮಾಡಿಕೊಂಡಿದ್ದರು. ಆದರೆ, ಈಗ ಇಬ್ಬರೂ ಅರ್ಧದಲ್ಲೇ ಹೊರ ಬರುವಂತಾಗಿದೆ.

ವೈದ್ಯಕೀಯ ಕಾರಣಗಳನ್ನು ನೀಡಿ ರಾಕೇಶ್​ ಅವರು ಅರ್ಧದಲ್ಲೇ ಮನೆಯಿಂದ ಹೊರ ಬಂದಿದ್ದರು.  ಈಗ ಕೆಲ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ ಶಮಿತಾ ಶೆಟ್ಟಿ ಆಸ್ಪತ್ರೆ ಸೇರಿದ್ದಾರೆ. ಅವರಿಗೆ ಅನಾರೋಗ್ಯ ಕಾಡಿದೆಯಂತೆ. ಟಾಸ್ಕ್​ ವೇಳೆ ಅವರಿಗೆ ತೊಂದರೆ ಉಂಟಾಗಿದೆ. ಈ ಕಾರಣಕ್ಕೆ ಅವರು ಹೊರಹೋಗಿದ್ದಾರೆ. ಮೂಲಗಳ ಪ್ರಕಾರ ಮುಂದಿನವಾರ ಅವರು ಕಮ್​​ಬ್ಯಾಕ್​ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಕೇಶ್​ ಕಿಡ್ನಿಯಲ್ಲಿ ಕಲ್ಲಿದೆ. ಈ ಕಾರಣಕ್ಕೆ ಅವರಿಗೆ ತೀವ್ರ ನೋವು ಕಾಣಿಸಿಕೊಂಡಿದೆ. ಅವರು ಮತ್ತೆ ಬಿಗ್​ ಬಾಸ್​ ಶೋಗೆ ಮರಳುತ್ತಾರೋ ಅಥವಾ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಾಗುತ್ತದೋ ಎನ್ನುವುದು ತಿಳಿದಿಲ್ಲ. ಒಂದೊಮ್ಮೆ ಅವರು ಆಪರೇಷನ್​ಗೆ ಒಳಗಾದರೆ ಅವರು ಮತ್ತೆ ದೊಡ್ಮನೆ ಸೇರುವುದು ಅನುಮಾನ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಶುರುವಾಯ್ತು ರಾಕೇಶ್​-ಶಮಿತಾ ರೊಮ್ಯಾನ್ಸ್​; ಮೊದಲ ದಿನವೇ ಕಿಸ್ಸಿಂಗ್​

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು