AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಮಿತಾ ಶೆಟ್ಟಿ ಬಿಗ್​ ಬಾಸ್​ ಆಟ ಇನ್ನೂ ನಿಂತಿಲ್ಲ; ದೊಡ್ಮನೆಯಲ್ಲಿ ಮತ್ತೆ ಸೌಂಡು ಮಾಡಲಿರುವ ಶಿಲ್ಪಾ ತಂಗಿ

ಶಮಿತಾ ಶೆಟ್ಟಿ ಅವರನ್ನು ಬಿಗ್​ ಬಾಸ್​ ಹೊಸ ಸೀಸನ್​ಗೆ ಆಯ್ಕೆ ಮಾಡಿಕೊಂಡರೆ ಒಂದಷ್ಟು ಟಿಆರ್​ಪಿ ಖಂಡಿತವಾಗಿ ಬರಲಿದೆ ಎಂದು ಆಯೋಜಕರು ಪ್ಲ್ಯಾನ್​ ಮಾಡಿಕೊಂಡಂತಿದೆ. ರಾಕೇಶ್​ ಬಾಪಟ್​ಗೆ ಈ ಬಾರಿ ಅವಕಾಶ ಇದೆಯೋ ಇಲ್ಲವೋ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಶಮಿತಾ ಶೆಟ್ಟಿ ಬಿಗ್​ ಬಾಸ್​ ಆಟ ಇನ್ನೂ ನಿಂತಿಲ್ಲ; ದೊಡ್ಮನೆಯಲ್ಲಿ ಮತ್ತೆ ಸೌಂಡು ಮಾಡಲಿರುವ ಶಿಲ್ಪಾ ತಂಗಿ
ಶಮಿತಾ ಶೆಟ್ಟಿ, ಶಿಲ್ಪಾ ಶೆಟ್ಟಿ
TV9 Web
| Edited By: |

Updated on: Sep 24, 2021 | 1:19 PM

Share

ಇತ್ತೀಚೆಗಷ್ಟೇ ಬಿಗ್​ ಬಾಸ್​ ಓಟಿಟಿ ಕಾರ್ಯಕ್ರಮ ಅಂತ್ಯವಾಯಿತು. ನಟಿ ದಿವ್ಯಾ ಅಗರ್​ವಾಲ್ ಅವರು ಈ ಶೋನ ಮೊದಲ ಸೀಸನ್​ ವಿನ್ನರ್​ ಆಗಿ ಟ್ರೋಫಿ ಪಡೆದು ಸಂಭ್ರಮಿಸಿದರು. ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಕೂಡ ಈ ಕಾರ್ಯಕ್ರಮದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ್ದರು. ರಾಕೇಶ್​ ಬಾಪಟ್​ ಜೊತೆಗಿನ ಅವರ ಪ್ರೀತಿ-ಪ್ರೇಮ-ಪ್ರಯಣದ ಸಂಗತಿಗಳು ಎಲ್ಲರ ಗಮನ ಸೆಳೆದಿದ್ದವು. ಇಷ್ಟಕ್ಕೇ ಮುಗಿಯಿತು ಎಂದುಕೊಳ್ಳುವಂತಿಲ್ಲ. ಶಮಿತಾ ಶೆಟ್ಟಿ ಮತ್ತೆ ಆಟ ಮುಂದುವರಿಸಲಿದ್ದಾರೆ. ಅಂದರೆ ಸಲ್ಮಾನ್​ ಖಾನ್​ ನಡೆಸಿಕೊಡುವ ಹೊಸ ಬಿಗ್​ ಬಾಸ್​ ಸೀಸನ್​ನಲ್ಲಿ ಶಮಿತಾ ಶೆಟ್ಟಿ ಮತ್ತೆ ಭಾಗವಹಿಸಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಬಿಗ್​ ಬಾಸ್​ ಓಟಿಟಿ ಕಾರ್ಯಕ್ರಮದಲ್ಲಿ ಟ್ರೋಫಿ ಗೆಲ್ಲುವ ಅವಕಾಶವನ್ನು ಬಿಟ್ಟುಕೊಟ್ಟ ಪ್ರತೀಕ್ ಸೆಹಜ್ಪಾಲ್​ ಅವರು ನೇರವಾಗಿ ‘ಬಿಗ್​ ಬಾಸ್​ 15’ ಪ್ರವೇಶಿಸುವ ಚಾನ್ಸ್​ ಪಡೆದುಕೊಂಡರು. ಆ ಮೂಲಕ ಅವರ ಎಂಟ್ರಿ ಖಚಿತವಾಯಿತು. ಈಗ ಬಿಗ್​ ಬಾಸ್​ನ ಸುದ್ದಿಗೋಷ್ಠಿ ನಡೆದಿದ್ದು, ಅದರಲ್ಲಿ ಕೆಲವು ವಿಚಾರಗಳು ಬಹಿರಂಗ ಆಗಿವೆ. ಶಮಿತಾ ಶೆಟ್ಟಿ, ನಿಶಾಂತ್​ ಭಟ್​, ಉಮರ್​ ರಿಯಾಜ್​ ಮುಂತಾದವರು ‘ಬಿಗ್​ ಬಾಸ್​ 15’​ರಲ್ಲಿ ಸ್ಪರ್ಧಿಸುತ್ತಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಬಿಗ್​ ಬಾಸ್​ ಓಟಿಟಿಯಲ್ಲಿ ಶಮಿತಾ ಶೆಟ್ಟಿ ಸೆಕೆಂಡ್​ ರನ್ನರ್​ ಅಪ್​ ಆಗಿ ಹೊರಹೊಮ್ಮಿದರು. ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನವೂ ಅವರು ವೀಕ್ಷಕರ ಗಮನ ಸೆಳೆಯೋಕೆ ಒಂದಿಲ್ಲೊಂದು ಡ್ರಾಮಾ ಮಾಡುತ್ತಲೇ ಇದ್ದರು. ಅವರನ್ನು ಬಿಗ್​ ಬಾಸ್​ ಹೊಸ ಸೀಸನ್​ಗೆ ಆಯ್ಕೆ ಮಾಡಿಕೊಂಡರೆ ಒಂದಷ್ಟು ಟಿಆರ್​ಪಿ ಖಂಡಿತವಾಗಿ ಬರಲಿದೆ ಎಂದು ಆಯೋಜಕರು ಪ್ಲ್ಯಾನ್​ ಮಾಡಿಕೊಂಡಂತಿದೆ. ಹಾಗಾಗಿ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ. ಶಮಿತಾ ಜೊತೆ ಅತಿ ಹೆಚ್ಚು ಆಪ್ತವಾಗಿದ್ದ ರಾಕೇಶ್​ ಬಾಪಟ್​ಗೆ ಈ ಬಾರಿ ಅವಕಾಶ ಇದೆಯೋ ಇಲ್ಲವೋ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಅ.2ರಂದು ‘ಹಿಂದಿ ಬಿಗ್​ ಬಾಸ್​ ಸೀಸನ್​ 15’ ಆರಂಭ ಆಗಲಿದೆ. ಅಂತಿಮವಾಗಿ ಯಾರೆಲ್ಲ ಈ ಶೋನಲ್ಲಿ ಭಾಗವಹಿಸುವ ಚಾನ್ಸ್​ ಪಡೆದಿದ್ದಾರೆ ಎಂಬುದು ಅಂದು ಖಚಿತ ಆಗಲಿದೆ. ಈ ಬಾರಿ ಒಂದಷ್ಟು ಹೊಸ ಅಂಶಗಳನ್ನು ಪರಿಚಯಿಸಲು ಆಯೋಜಕರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಬಿಗ್​ ಬಾಸ್​ ಮೇಲೆ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ:

‘ಅನುಭವ ಪಡೆಯೋಕೆ ಬಂದಿದೀನಿ’; ಶಮಿತಾ ಶೆಟ್ಟಿ ಎದುರು ಸತ್ಯ ಒಪ್ಪಿಕೊಂಡ ರಾಕೇಶ್​ ಬಾಪಟ್​

ಅಳುಮುಖ ಹೊತ್ತುಕೊಂಡು ಮನೆಗೆ ಬಂದ ರಾಜ್​ ಕುಂದ್ರಾ: ಶಿಲ್ಪಾ ಶೆಟ್ಟಿ ಪತಿಗೆ ಸದ್ಯಕ್ಕೆ ರಿಲೀಫ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ