AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ಜೊತೆ ಶಮಿತಾ ಶೆಟ್ಟಿ ತುಳು ಮಾತುಕತೆ; ಮಾತೃಭಾಷೆ ಅಭಿಮಾನಕ್ಕೆ ಜನರು ಫಿದಾ

ಎಷ್ಟೋ ವರ್ಷಗಳ ಹಿಂದೆಯೇ ಶಿಲ್ಪಾ ಶೆಟ್ಟಿ, ಶಮಿತಾ ಶೆಟ್ಟಿ ಮುಂಬೈ ಸೇರಿಕೊಂಡಿದ್ದರೂ ಕೂಡ ಅವರು ತುಳು ಮಾತನಾಡುವುದನ್ನು ಬಿಟ್ಟಿಲ್ಲ. ಈಗ ಶಮಿತಾ ಶೆಟ್ಟಿ ಅವರು ಬಿಗ್​ ಬಾಸ್​ನಲ್ಲಿ ಮಾತೃಭಾಷೆಯ ಅಭಿಮಾನ ಮೆರೆದಿದ್ದಾರೆ.

ಸಲ್ಮಾನ್​ ಖಾನ್​ ಜೊತೆ ಶಮಿತಾ ಶೆಟ್ಟಿ ತುಳು ಮಾತುಕತೆ; ಮಾತೃಭಾಷೆ ಅಭಿಮಾನಕ್ಕೆ ಜನರು ಫಿದಾ
ಶಮಿತಾ ಶೆಟ್ಟಿ, ಸಲ್ಮಾನ್​ ಖಾನ್​
Follow us
TV9 Web
| Updated By: ಮದನ್​ ಕುಮಾರ್​

Updated on: Oct 15, 2021 | 5:05 PM

ನಟಿ ಶಮಿತಾ ಶೆಟ್ಟಿ ಅವರು ಸಿನಿಮಾ ರಂಗದಲ್ಲಿ ಮಾಡಲಾಗದ ಸಾಧನೆಯನ್ನು ಬಿಗ್ ಬಾಸ್​ ಮೂಲಕ ಮಾಡುತ್ತಿದ್ದಾರೆ. ಭಾವ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ಪ್ರಕರಣದಲ್ಲಿ ಸಿಕ್ಕಿ ಬಿದ್ದ ಬಳಿಕ ಶಮಿತಾ ಅವರು ಬಿಗ್​ ಬಾಸ್​ ಓಟಿಟಿಗೆ ಕಾಲಿಡುವ ನಿರ್ಧಾರ ಮಾಡಿದ್ದರಿಂದ ತುಂಬ ಅನುಕೂಲ ಆಯಿತು. ಅದರಲ್ಲಿ ಒಳ್ಳೆಯ ಪರ್ಫಾರ್ಮೆನ್ಸ್​ ನೀಡಿದ ಅವರಿಗೆ ‘ಬಿಗ್​ ಬಾಸ್​ 15’ರಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿದೆ. ಸಲ್ಮಾನ್​ ಖಾನ್​ ನಿರೂಪಣೆ ಮಾಡುತ್ತಿರುವ ಈ ಶೋನಲ್ಲಿ ಅವರು ಗಮನ ಸೆಳೆಯುತ್ತಿದ್ದಾರೆ. ಇತ್ತೀಚೆಗೆ ತುಳು ಭಾಷೆಯಲ್ಲಿ ಮಾತನಾಡಿ ಸುದ್ದಿ ಆಗಿದ್ದಾರೆ.

ಶಿಲ್ಪಾ ಶೆಟ್ಟಿ ಕುಟುಂಬದವರು ಮೂಲತಃ ಮಂಗಳೂರಿನವರು. ಅವರ ಮಾತೃಭಾಷೆ ತುಳು. ಆದರೆ ಅವರು ವಾಸವಾಗಿರುವುದು ಮುಂಬೈನಲ್ಲಿ. ಎಷ್ಟೋ ವರ್ಷಗಳ ಹಿಂದೆಯೇ ಶಿಲ್ಪಾ, ಶಮಿತಾ ಮುಂಬೈ ಸೇರಿಕೊಂಡಿದ್ದರೂ ಕೂಡ ಅವರು ತುಳು ಮಾತನಾಡುವುದನ್ನು ಬಿಟ್ಟಿಲ್ಲ. ಅನೇಕ ವೇದಿಕೆಗಳಲ್ಲಿ ಶಿಲ್ಪಾ ತುಳು ಮಾತನಾಡಿದ್ದರು. ಈಗ ಶಮಿತಾ ಶೆಟ್ಟಿ ಕೂಡ ಬಿಗ್​ ಬಾಸ್​ನಲ್ಲಿ ಮಾತೃಭಾಷೆಯ ಅಭಿಮಾನ ಮೆರೆದಿದ್ದಾರೆ.

ಅಚ್ಚರಿ ಎಂದರೆ ಶಮಿತಾ ಶೆಟ್ಟಿ ತುಳು ಮಾತನಾಡಿರುವುದು ಸಲ್ಮಾನ್​ ಖಾನ್​ ಜೊತೆ. ಈ ವಿಡಿಯೋ ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ‘ಹೇಗಿದ್ದೀರಿ?’, ‘ಚೆನ್ನಾಗಿದ್ದೇನೆ’ ಎಂಬಿತ್ಯಾದಿ ಪದಗಳನ್ನು ತುಳುನಲ್ಲಿ ಹೇಗೆ ಹೇಳಬೇಕು ಎಂಬುದನ್ನು ಸಲ್ಮಾನ್​ ಖಾನ್​ಗೆ ಶಮಿತಾ ಕಲಿಸಿಕೊಟ್ಟಿದ್ದಾರೆ.

ಬಿಗ್​ ಬಾಸ್​ ಓಟಿಟಿ ಶೋನಲ್ಲಿ ಶಮಿತಾ ಮತ್ತು ರಾಕೇಶ್​ ಬಾಪಟ್​ ತುಂಬ ಕ್ಲೋಸ್​ ಆಗಿದ್ದರು. ಆ ಶೋನಿಂದ ಹೊರಬಂದ ಬಳಿಕವೂ ಅವರ ನಡುವಿನ ಆಪ್ತತೆ ಮುಂದುವರಿದಿತ್ತು. ಈಗ ‘ಬಿಗ್​ ಬಾಸ್​ 15’ಕ್ಕೆ ಶಮಿತಾ ಮಾತ್ರ ಎಂಟ್ರಿ ನೀಡಿದ್ದು, ರಾಕೇಶ್​ ಬಾಪಟ್​ಗೆ ಈ ಅವಕಾಶ ಸಿಕ್ಕಿಲ್ಲ.

ಇತ್ತೀಚೆಗೆ ಬಿಗ್​ ಬಾಸ್​ ಮನೆಯಲ್ಲಿ ಮಾರಾಮಾರಿ ನಡೆದಿತ್ತು. ಬಿಗ್​ ಬಾಸ್ ಶೋನಲ್ಲಿ ನಡೆದ ಫೈಟ್​ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಎಲ್ಲರೂ ಮುಖಮೂತಿ ನೋಡದೆ ಹೊಡೆದುಕೊಂಡಿದ್ದಾರೆ. ಹೆಣ್ಣು ಮಕ್ಕಳಿಗೂ ಹೊಡೆತಗಳು ಬಿದ್ದಿವೆ. ಇದನ್ನು ನೋಡಿ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಇದು ಅತಿಯಾಯಿತು ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:

ಶಾರುಖ್​ ಪುತ್ರನ ಅರೆಸ್ಟ್​ ಬೆನ್ನಲ್ಲೇ ಓಡೋಡಿ ಬಂದ ಸಲ್ಮಾನ್​ ಖಾನ್​; ‘ಮನ್ನತ್​’ನಲ್ಲಿ ನಡೆದಿದ್ದು ಏನು?

ಬಿಗ್​ ಬಾಸ್​​​ನಲ್ಲಿ ರಾಜ್​ ಕುಂದ್ರಾ ಬಗ್ಗೆ ಜೋಕ್​ ಮಾಡಿದ ಸಲ್ಮಾನ್​; ಮುಜುಗರಕ್ಕೊಳಗಾದ ಶಮಿತಾ ಶೆಟ್ಟಿ

ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ