AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣ್-ತರುಣ್ ಸುಧೀರ್ ಗೆಳೆತನ ಎಂಥದ್ದು? ಯಾರೂ ಊಹಿಸಲೂ ಸಾಧ್ಯವಿಲ್ಲ

ಶರಣ್ ಮತ್ತು ತರುಣ್ ಸುಧೀರ್, ಜೀ ಕನ್ನಡದ ಎರಡು ರಿಯಾಲಿಟಿ ಶೋಗಳಲ್ಲಿ ಜಡ್ಜ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಆಪ್ತ ಗೆಳೆತನವನ್ನು ‘ಮಹಾ ಸಂಗಮ’ ಕಾರ್ಯಕ್ರಮದಲ್ಲಿ ಬಿಚ್ಚಿಟ್ಟಿದ್ದಾರೆ. ಶರಣ್ ತಮ್ಮ ಜೀವನದ ಪ್ರಮುಖ ನಿರ್ಧಾರಗಳಲ್ಲಿ ತರುಣ್ ಅವರ ಸಲಹೆಯನ್ನು ಪಡೆಯುತ್ತಾರೆ ಎಂದು ಹೇಳಿದ್ದಾರೆ. ಇಬ್ಬರೂ ತಮ್ಮ ದೀರ್ಘಕಾಲಿಕ ಗೆಳೆತನದ ಬಗ್ಗೆ ಮಾತನಾಡಿದ್ದಾರೆ.

ಶರಣ್-ತರುಣ್ ಸುಧೀರ್ ಗೆಳೆತನ ಎಂಥದ್ದು? ಯಾರೂ ಊಹಿಸಲೂ ಸಾಧ್ಯವಿಲ್ಲ
Tharun
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Sep 15, 2025 | 7:53 AM

Share

ಶರಣ್ ಹಾಗೂ ತರುಣ್ ಸುಧೀರ್ (Tharun Sudhir) ಒಳ್ಳೆಯ ಗೆಳೆಯರು ಎಂಬುದು ಇಂಡಸ್ಟ್ರಿಗೇ ಗೊತ್ತು. ಅಷ್ಟೇ ಏಕೆ ಅನೇಕ ಅಭಿಮಾನಿಗಳು ಕೂಡ ಇದನ್ನು ಬಲ್ಲರು. ಈಗ ಇಬ್ಬರೂ ಕಿರುತೆರೆಯಲ್ಲಿ ಮಿಂಚುತ್ತಿದ್ದಾರೆ. ‘ಮಹಾನಟಿ 2’ ಶೋಗೆ ತರುಣ್ ಸುಧೀರ್ ಜಡ್ಜ್ ಸ್ಥಾನದಲ್ಲಿ ಕುಳಿತಿದ್ದರೆ, ಶರಣ್ ಅವರು, ‘ನಾವು ನಮ್ಮವರು’ ಶೋಗೆ ಜಡ್ಜ್ ಸ್ಥಾನವನ್ನು ತುಂಬಿದ್ದಾರೆ. ಈ ಎರಡೂ ರಿಯಾಲಿಟಿ ಶೋಗಳು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿವೆ ಮತ್ತು ಇದರ ಮಹಾ ಸಂಗಮ ನಡೆದಿದೆ. ಈ ಶೋನಲ್ಲಿ ಅನುಶ್ರೀ ಅವರು ಇವರ ಗೆಳೆತನದ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಅವರು ಉತ್ತರಿಸಿದ್ದಾರೆ.

‘ನಾವು ನಮ್ಮವರು ಶೋಗೆ ನೀವು ಜಡ್ಜ್ ಎಂದು ಕರೆ ಬಂದಾಗ ಸೀನಿಯರ್ ಜಡ್ಜ್ ಆಗಿರೋ ನಿಮ್ಮ ಆಪ್ತ ಗೆಳೆಯ ತರುಣ್ ಏನೆಂದು ಟಿಪ್ಸ್ ಕೊಟ್ಟರು’ ಎಂದು ಮಹಾ ಸಂಗಮದಲ್ಲಿ ಅನುಶ್ರೀ ಅವರು ಕೇಳಿದರು. ಆಗ ಶರಣ್ ಉತ್ತರವನ್ನು ನೀಡಿದರು. ಈ ವೇಳೆ ತಮ್ಮ ಗೆಳೆತನ ಎಷ್ಟು ಆಳವಾಗಿದೆ ಎಂಬುದನ್ನು ಹೇಳಿಕೊಂಡರು.

ಇದನ್ನೂ ಓದಿ
Image
ರಿಯಾಲಿಟಿ ಶೋಗೆ ಬರಲ್ಲ, ಬರಲ್ಲ ಅಂತ ಬಂದೇ ಬಿಟ್ರು ನಟಿ ಸುಧಾರಾಣಿ
Image
ಆ ಒಂದು ಶಬ್ದ ಬಳಕೆ ಮಾಡಿದ್ದಕ್ಕೆ ಆಕ್ರೋಶ; ಕಪಿಲ್ ಶೋ ನಿಲ್ಲಿಸೋ ಎಚ್ಚರಿಕೆ
Image
‘ನೀವು ಊಹಿಸಿದಂತೆ ಕಥೆ ನಡೆಯಲ್ಲ’; ‘ಕರ್ಣ’ ಬಗ್ಗೆ ಕಿರಣ್ ರಾಜ್ ಹಿಂಟ್
Image
ಜೀ ಕನ್ನಡ ವೇದಿಕೆ ಮೇಲೆ ಅನುಶ್ರೀ ಮಡಿಲು ತುಂಬಿದ ತಾರಾ; ಮಗಳಂತೆ ಭಾವುಕ

‘ಶೋ ಒಪ್ಪಿಕೊಳ್ಳಿತ್ತೇನೆ ಎಂಬುದು ಅವನಿಗೆ ತಕ್ಕ ಮಟ್ಟಿಗೆ ಗೊತ್ತಿತ್ತು. ನನ್ನ ಜೀವನದಲ್ಲಿ ತೆಗೆದುಕೊಂಡ ದೊಡ್ಡ ನಿರ್ಧಾರಗಳನ್ನು ಒಪ್ಪಿಕೊಂಡಿದ್ದೇ ಇವನನ್ನು ಕೇಳಿ. ಸಿನಿಮಾ ಆಗಲಿ, ವೈಯಕ್ತಿ ಆಗಲಿ. ನನ್ನ ನಿರ್ಮಾಣ ಸಂಸ್ಥೆಗೆ ಹೆಸರು ಇಡುವುದರಿಂದ ಹಿಡಿದು, , ಮನೆಗೆ ಹೆಸರು ಇಡೋ ತನಕ ಎಲ್ಲವನ್ನೂ ಇವನೇ ಇಟ್ಟಿದ್ದು’ ಎಂದು ಅವರು ಹೇಳಿದರು.

ಶರಣ್ ಮಾತನಾಡಿದ ವಿಡಿಯೋ

View this post on Instagram

A post shared by Zee Kannada (@zeekannada)

‘ನನ್ನ ಜೀವನದಲ್ಲಿ ಇವನು ಸಿಗದೇ ಇದ್ದಿದ್ದರೆ ನಾನು ಅಪೂರ್ಣ ಆಗುತ್ತಿದ್ದೆ. ನನ್ನ ಪೂರ್ಣಗೊಳಿಸಿದವನು. ಆಪ್ತ ಗೆಳೆಯನ ಸ್ಟ್ರೆಂತ್​ಗಿಂತ ಆತನ ವೀಕ್​ನೆಸ್ ಗೊತ್ತಿರಬೇಕು. ನನ್ ವೀಕ್​ನೆಸ್ ಏನು ಎಂಬುದು ಆತನಿಗೆ ಗೊತ್ತು. ನಾನು ಶೋ ಮಾಡುತ್ತಿದ್ದೇನೆ ಎಂದಾಗ ನೈಟ್ ಓಕೆನಪ್ಪ ಎಂದು ಕೇಳಿದ’ ಎಂದು ಶರಣ್ ಅವರು ಹೇಳಿದರು.

ಇದನ್ನೂ ಓದಿ: ‘ನಾನು ನಿರ್ದೇಶಕನಾಗಲು ಅವನೇ ಕಾರಣ’; ಜೀವದ ಗೆಳೆಯನ ನೆನೆದ ತರುಣ್ ಸುಧೀರ್

ಶರಣ್, ತರುಣ್, ನೆನಪಿರಲಿ ಪ್ರೇಮ್ ಮೊದಲಾದವರು ಒಳ್ಳೆಯ ಗೆಳೆಯರು. ಸಿನಿಮಾ ರಂಗದಲ್ಲಿ ಹಲವು ವರ್ಷಗಳಿಂದ ಇರೋ ಇವರು ತಮ್ಮ ಗೆಳೆತನವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಶರಣ್ ಅವರು ಹಾಸ್ಯ ನಟನಾಗಿ ಗಮನ ಸೆಳೆದವರು. ಆ ಬಳಿಕ ಹೀರೋ ಆದರು. ತರುಣ್ ಅವರು ನಟನಾಗಿ ಚಿತ್ರರಂಗದಲ್ಲಿ ಮಿಂಚಿದವರು. ನಂತರ ನಿರ್ದೇಶಕನಾಗಿಯೂ ಗಮನ ಸೆಳೆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:51 am, Mon, 15 September 25

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ