AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾ ನಿನ್ನ ಬಿಡಲಾರೆ’: ಮದುವೆ ಆಗಿ ಎರಡನೇ ದಿನಕ್ಕೆ ದುರ್ಗಾಗೆ ಡಿವೋರ್ಸ್ ನೀಡಲು ಮುಂದಾದ ಶರತ್

'ನಾ ನಿನ್ನ ಬಿಡಲಾರೆ' ಧಾರಾವಾಹಿಯಲ್ಲಿ ದುರ್ಗಾ ಮತ್ತು ಶರತ್‌ರ ವಿವಾಹದ ನಂತರ ಅನಿರೀಕ್ಷಿತ ತಿರುವು ಸಂಭವಿಸಿದೆ. ಹಿತಾಳ ಅಸಮಾಧಾನದಿಂದಾಗಿ ಶರತ್ ವಿಚ್ಛೇದನಕ್ಕೆ ನಿರ್ಧರಿಸಿದ್ದಾನೆ. ಮಾಯಾಳ ಭವಿಷ್ಯವೂ ಅನಿಶ್ಚಿತವಾಗಿದೆ. ಈ ಘಟನೆಗಳು ಧಾರಾವಾಹಿಯ ಕಥಾವಸ್ತುವಿಗೆ ಹೊಸ ತಿರುವು ನೀಡಲಿವೆ ಮತ್ತು ವೀಕ್ಷಕರ ಕುತೂಹಲವನ್ನು ಹೆಚ್ಚಿಸಿವೆ.

‘ನಾ ನಿನ್ನ ಬಿಡಲಾರೆ’: ಮದುವೆ ಆಗಿ ಎರಡನೇ ದಿನಕ್ಕೆ ದುರ್ಗಾಗೆ ಡಿವೋರ್ಸ್ ನೀಡಲು ಮುಂದಾದ ಶರತ್
ನಾ ನಿನ್ನ ಬಿಡಲಾರೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 12, 2025 | 10:19 AM

Share

‘ನಾ ನಿನ್ನ ಬಿಡಲಾರೆ’ (Naa Ninna Bidalaare) ಧಾರಾವಾಹಿ ಈಗ ಪ್ರಮುಖ ಘಟ್ಟಕ್ಕೆ ತಲುಪಿದೆ. ಈ ಧಾರಾವಾಹಿಯಲ್ಲಿ ವಿವಾಹ ನಡೆದಿದೆ. ದುರ್ಗಾ ಹಾಗೂ ಶರತ್ ಮದುವೆ ಆಗಿದ್ದಾರೆ. ಆದರೆ, ಮದುವೆ ಆದ ಕೆಲವೇ ದಿನಕ್ಕೆ ವಿಚ್ಛೇದನ ನೀಡಲು ಶರತ್ ನಿರ್ಧರಿಸಿದ್ದಾನೆ. ಮಗಳು ಹಿತಾಗೆ ಈ ಮದುವೆ ಇಷ್ಟ ಇಲ್ಲ ಎಂಬ ಕಾರಣಕ್ಕೆ ಆತನು ಈ ನಿರ್ಧಾರ ಮಾಡಿದ್ದಾನೆ. ಆ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಮುಂದೆ ಧಾರಾವಾಹಿ ಯಾವ ರೀತಿಯ ತಿರುವು ಪಡೆದು ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಒಳ್ಳೆಯ ಟಿಆರ್​ಪಿಯೊಂದಿಗೆ ಸಾಗುತ್ತಿರುವುದು ಗೊತ್ತೇ ಇದೆ. ಈ ಧಾರಾವಾಹಿಯಲ್ಲಿ ಸಾಕಷ್ಟು ಮುಖ್ಯ ಘಟ್ಟ ಬಂದಿದೆ. ಶರತ್ ಹಾಗೂ ಮಾಯಾ ಮದುವೆ ನಡೆಯಬೇಕಿತ್ತು. ಆದರೆ, ಅಲ್ಲಾಗಿದ್ದೇ ಬೇರೆ. ಶರತ್ ತಾಯಿಯ ವಶೀಕರಣದಲ್ಲಿ ಇದ್ದ. ಆತನಿಗೆ ಹಸಮಣೆ ಮೇಲೆ ಕುಳಿತು ತಾಳಿ ಕಟ್ಟುವಂತೆ ಆದೇಶ ಇತ್ತು. ಅತ್ತ ದೇವತೆ ಅಜ್ಜಿ ವೇಷದಲ್ಲಿ ಬಂದು ಬಿರುಗಾಳಿ ಬೀಸುವಂತೆ ಮಾಡಿದ್ದಳು. ಹೀಗಾಗಿ, ಅಲ್ಲಿದ್ದ ಯಾರಿಗೂ ಮಿಸುಕಾಡಲೂ ಆಗಿಲ್ಲ.

ಇದನ್ನೂ ಓದಿ
Image
ಅಕ್ಷಯ್ ಹೇಗೆ ಅಷ್ಟು ಬೇಗ ಸಿನಿಮಾ ಮಾಡ್ತಾರೆ? ಅಜಯ್ ದೇವಗನ್ ಫನ್ನಿ ವಿವರಣೆ
Image
ಟಾಪ್​ನಲ್ಲಿ ಯಾರೂ ಊಹಿಸದ ಸೀರಿಯಲ್; ‘ಅಮೃತಧಾರೆ’ಗೆ ಎಷ್ಟನೇ ಸ್ಥಾನ?
Image
ಮದುವೆ ಬಳಿಕ ಕೆಲಸಕ್ಕೆ ಮರಳಿದ ಅನುಶ್ರೀ ಈ ವಿಚಾರದಲ್ಲಿ ತಪ್ಪು ಮಾಡಲಿಲ್ಲ
Image
ಹಠ ಮಾಡಿ ವಿಷ್ಣುವರ್ಧನ್ ಸಿನಿಮಾದಲ್ಲಿ ನಟಿಸಿದ್ದ ನಟ ಅಕ್ಷಯ್ ಕುಮಾರ್

ಇತ್ತ ದುರ್ಗಾ ಮೈ ಮೇಲೆ ಅಂಬಿಕಾ ಸೇರಿಕೊಂಡು ಹಸೆಮಣೆ ಏರಿದ್ದಳು. ಶರತ್ ತಾಳಿ ಕಟ್ಟಿದ್ದು ಅಂಬಿಕಾಗೆ ಆಗಿತ್ತು. ಈಗ ಶರತ್ ಹಾಗೂ ದುರ್ಗಾ ಮದುವೆ ಬಗ್ಗೆ ಹಿತಾ ಅಸಮಾಧಾನ ಹೊರ ಹಾಕಿದ್ದಾಳೆ. ಆಕೆಗೆ ಈ ಮದುವೆ ಸ್ವಲ್ಪವೂ ಇಷ್ಟ ಇಲ್ಲ. ಈ ಕಾರಣದಿಂದಲೇ ದುರ್ಗಾಗೆ ವಿಚ್ಛೇದನ ನೀಡಲು ಶರತ್ ನಿರ್ಧರಿಸಿದ್ದಾನೆ.

ಇದನ್ನೂ ಓದಿ: ಶರತ್-ದುರ್ಗಾ ಈಗ ಪತಿ-ಪತ್ನಿ; ಹೆಚ್ಚಿತು ಅಂಬಿಕಾ ಶಕ್ತಿ, ಮಾಳವಿಕಾ ಕನಸು ಭಗ್ನ

‘ಮದುವೆ ನಡೆಯಬಾರದಿತ್ತು ನಡೆದು ಹೋಗಿದೆ. ಹೀಗಾಗಿ, ನಾವಿಬ್ಬರೂ ಬೇರೆ ಆಗೋಣ’ ಎಂದು ಶರತ್ ಹೇಳಿದ್ದಾನೆ. ಅತ್ತ, ಮಾಯಾಗೆ ಮನೆ ಬಿಟ್ಟು ಹೋಗುವಂತೆ ಸೂಚಿಸಿದ್ದಾನೆ. ಈ ವಿಚ್ಛೇದನಕ್ಕೆ ಹಿತಾಳೆ ವಿರೋಧ ತೋರಿಸೋ ಸಾಧ್ಯತೆ ಇದೆ. ಶರತ್ ಹಾಗೂ ದುರ್ಗಾ ಬೇರೆ ಆದರೆ, ಮತ್ತೆ ಶರತ್ ಬಾಳಲ್ಲಿ ಮಾಯಾ ಬರಬಹುದು ಎಂಬ ಭಯ ಅವಳದ್ದು. ಮುಂದೆ ಧಾರಾವಾಹಿ ಕಥೆ ಯಾವ ರೀತಿಯಲ್ಲಿ ಸಾಗುತ್ತದೆ ಎಂಬ ಕುತೂಹಲ ವೀಕ್ಷಕರಲ್ಲಿ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ