AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಾರ್ಥ್​ ಶುಕ್ಲಾ ಪ್ರಿಯತಮೆ ಶೆಹನಾಜ್ ಗಿಲ್​ ತಂದೆ ಮೇಲೆ ಗುಂಡಿನ ದಾಳಿ; ನಟಿಗೆ ಮತ್ತೊಂದು ಆಘಾತ

ಸಂತೋಖ್​ ಅವರು ಪಂಜಾಬ್​ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಬಿಜೆಪಿಗೆ ಸೇರ್ಪಡೆ ಆಗಿದ್ದರು. ಇದು ಕೆಲವರಿಗೆ ಇಷ್ಟವಿರಲಿಲ್ಲ ಎನ್ನಲಾಗಿದೆ. ಈ ದ್ವೇಷದ ಕಾರಣಕ್ಕೆ ಅವರ ಮೇಲೆ ಗುಂಡಿನ ದಾಳಿ ನಡೆದಿದೆ ಎಂಬ ಬಗ್ಗೆ ವರದಿ ಆಗಿದೆ.

ಸಿದ್ದಾರ್ಥ್​ ಶುಕ್ಲಾ ಪ್ರಿಯತಮೆ ಶೆಹನಾಜ್ ಗಿಲ್​ ತಂದೆ ಮೇಲೆ ಗುಂಡಿನ ದಾಳಿ; ನಟಿಗೆ ಮತ್ತೊಂದು ಆಘಾತ
ಸಿದ್ದಾರ್ಥ್​ ಶುಕ್ಲಾ
TV9 Web
| Edited By: |

Updated on:Dec 27, 2021 | 8:42 PM

Share

ಸಿದ್ದಾರ್ಥ್​ ಶುಕ್ಲಾ ಹಾಗೂ ಶೆಹನಾಜ್​ ಗಿಲ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ‘ಹಿಂದಿ ಬಿಗ್​ ಬಾಸ್​ 13’ರಲ್ಲಿ ಇಬ್ಬರೂ ಒಟ್ಟಾಗಿ ಸ್ಪರ್ಧಿಸಿದ್ದರು. ಆಗಲೇ ಇವರ ಮಧ್ಯೆ ಪ್ರೀತಿ ಮೊಳೆತಿತ್ತು. ಸಿದ್ದಾರ್ಥ್​ ಆ ಸೀಸನ್​ನಲ್ಲಿ ಗೆದ್ದಿದ್ದರು. ಇತ್ತೀಚೆಗೆ ಸಿದ್ದಾರ್ಥ್​ ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಸಾವು ಶೆಹನಾಜ್​ಗೆ ದೊಡ್ಡ ಆಘಾತ ತಂದಿತ್ತು. ಈ ನೋವಿನಿಂದ ಅವರಿಗೆ ಈಗಲೂ ಹೊರ ಬರೋಕೆ ಸಾಧ್ಯವಾಗಿಲ್ಲ. ಹಾಗಿರುವಾಗಲೇ ಶೆಹನಾಜ್​ಗೆ ಮತ್ತೊಂದು ಆಘಾತ ಆಗಿದೆ. ಅವರ ತಂದೆ ಸಂತೋಖ್​ ಸಿಂಗ್​ ಅಲಿಯಾಸ್​ ಸುಖ್​ ಮೇಲೆ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್​ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಂತೋಖ್​ ಅವರು ಪಂಜಾಬ್​ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಬಿಜೆಪಿಗೆ ಸೇರ್ಪಡೆ ಆಗಿದ್ದರು. ಇದು ಕೆಲವರಿಗೆ ಇಷ್ಟವಿರಲಿಲ್ಲ ಎನ್ನಲಾಗಿದೆ. ಈ ದ್ವೇಷದ ಕಾರಣಕ್ಕೆ ಅವರ ಮೇಲೆ ಗುಂಡಿನ ದಾಳಿ ನಡೆದಿದೆ ಎಂಬ ಬಗ್ಗೆ ವರದಿ ಆಗಿದೆ. ಆದರೆ, ಈ ಬಗ್ಗೆ ತನಿಖೆಯಿಂದ ಖಚಿತ ಮಾಹಿತಿ ಹೊರಬರಬೇಕಿದೆ. ಶನಿವಾರ (ಡಿಸೆಂಬರ್​ 25) ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಮೃತ್​ಸರದಿಂದ ಬಿಯಾಸ್​ಗೆ ಸಂತೋಖ್​ ಮರಳುತ್ತಿದ್ದರು. ಭದ್ರತಾ ಸಿಬ್ಬಂದಿಗೆ ವಾಶ್​ರೂಂಗೆ ತೆರಳಬೇಕಿತ್ತು. ಈ ಕಾರಣಕ್ಕೆ ಮಾರ್ಗ ಮಧ್ಯೆ ಡಾಬಾ ಒಂದರಲ್ಲಿ ಕಾರನ್ನು ನಿಲ್ಲಿಸಲಾಗಿತ್ತು. ಗನ್​ಮೆನ್​ ವಾಶ್​ರೂಂಗೆ ತೆರಳಿದ್ದಾಗ ಸಂತೋಖ್ ಕಾರಿನಲ್ಲಿ ಒಬ್ಬರೇ ಇದ್ದರು. ಈ ವೇಳೆ ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.

ಗುಂಡಿನ ಶಬ್ದ ಕೇಳುತ್ತಿದ್ದಂತೆ ಗನ್​ಮೆನ್​ ಓಡಿ ಬಂದಿದ್ದಾರೆ. ಆಗ ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಅದೃಷ್ಟವಶಾತ್​ ಸಂತೋಖ್​ಗೆ ಯಾವುದೇ ತೊಂದರೆ ಉಂಟಾಗಿಲ್ಲ. ಅವರು ಗನ್​ ಶಾಟ್​ ಕೇಳುತ್ತಿದ್ದಂತೆ ಕಾರಿನಲ್ಲಿ ಅಡಗಿಕೊಂಡಿದ್ದರು ಎನ್ನಲಾಗಿದೆ. ನಂತರ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಫೈರ್​ ಆದಂತಹ ಬುಲೆಟ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಸಂತೋಖ್ ಅವರ ಮೇಲೆ ದಾಳಿ ನಡೆದಿರುವ ವಿಚಾರ ಶೆಹನಾಜ್​ಗೆ ಶಾಕ್​ ನೀಡಿದೆ.

ಇದನ್ನೂ ಓದಿ: ಮಾತಾಡುತ್ತಿದೆಯಾ ಸಿದ್ದಾರ್ಥ್​ ಶುಕ್ಲಾ ಆತ್ಮ? ವೈರಲ್​ ಆಗುತ್ತಿದೆ ವಿಚಿತ್ರ ಧ್ವನಿ ಇರುವ ವಿಡಿಯೋ

ಬಿಗ್​ ಬಾಸ್​ ವೇದಿಕೆ ಮೇಲೆ ಸಿದ್ದಾರ್ಥ್​ ಶುಕ್ಲಾಗೆ ಬರ್ತ್​ಡೇ ವಿಶ್​ ತಿಳಿಸಿದ ಸಲ್ಮಾನ್​ ಖಾನ್​

Published On - 8:40 pm, Mon, 27 December 21

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್