ಸಿದ್ದಾರ್ಥ್ ಶುಕ್ಲಾ ಹಾಗೂ ಶೆಹನಾಜ್ ಗಿಲ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ‘ಹಿಂದಿ ಬಿಗ್ ಬಾಸ್ 13’ರಲ್ಲಿ ಇಬ್ಬರೂ ಒಟ್ಟಾಗಿ ಸ್ಪರ್ಧಿಸಿದ್ದರು. ಆಗಲೇ ಇವರ ಮಧ್ಯೆ ಪ್ರೀತಿ ಮೊಳೆತಿತ್ತು. ಸಿದ್ದಾರ್ಥ್ ಆ ಸೀಸನ್ನಲ್ಲಿ ಗೆದ್ದಿದ್ದರು. ಇತ್ತೀಚೆಗೆ ಸಿದ್ದಾರ್ಥ್ ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಸಾವು ಶೆಹನಾಜ್ಗೆ ದೊಡ್ಡ ಆಘಾತ ತಂದಿತ್ತು. ಈ ನೋವಿನಿಂದ ಅವರಿಗೆ ಈಗಲೂ ಹೊರ ಬರೋಕೆ ಸಾಧ್ಯವಾಗಿಲ್ಲ. ಹಾಗಿರುವಾಗಲೇ ಶೆಹನಾಜ್ಗೆ ಮತ್ತೊಂದು ಆಘಾತ ಆಗಿದೆ. ಅವರ ತಂದೆ ಸಂತೋಖ್ ಸಿಂಗ್ ಅಲಿಯಾಸ್ ಸುಖ್ ಮೇಲೆ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಂತೋಖ್ ಅವರು ಪಂಜಾಬ್ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಬಿಜೆಪಿಗೆ ಸೇರ್ಪಡೆ ಆಗಿದ್ದರು. ಇದು ಕೆಲವರಿಗೆ ಇಷ್ಟವಿರಲಿಲ್ಲ ಎನ್ನಲಾಗಿದೆ. ಈ ದ್ವೇಷದ ಕಾರಣಕ್ಕೆ ಅವರ ಮೇಲೆ ಗುಂಡಿನ ದಾಳಿ ನಡೆದಿದೆ ಎಂಬ ಬಗ್ಗೆ ವರದಿ ಆಗಿದೆ. ಆದರೆ, ಈ ಬಗ್ಗೆ ತನಿಖೆಯಿಂದ ಖಚಿತ ಮಾಹಿತಿ ಹೊರಬರಬೇಕಿದೆ. ಶನಿವಾರ (ಡಿಸೆಂಬರ್ 25) ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಮೃತ್ಸರದಿಂದ ಬಿಯಾಸ್ಗೆ ಸಂತೋಖ್ ಮರಳುತ್ತಿದ್ದರು. ಭದ್ರತಾ ಸಿಬ್ಬಂದಿಗೆ ವಾಶ್ರೂಂಗೆ ತೆರಳಬೇಕಿತ್ತು. ಈ ಕಾರಣಕ್ಕೆ ಮಾರ್ಗ ಮಧ್ಯೆ ಡಾಬಾ ಒಂದರಲ್ಲಿ ಕಾರನ್ನು ನಿಲ್ಲಿಸಲಾಗಿತ್ತು. ಗನ್ಮೆನ್ ವಾಶ್ರೂಂಗೆ ತೆರಳಿದ್ದಾಗ ಸಂತೋಖ್ ಕಾರಿನಲ್ಲಿ ಒಬ್ಬರೇ ಇದ್ದರು. ಈ ವೇಳೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.
ಗುಂಡಿನ ಶಬ್ದ ಕೇಳುತ್ತಿದ್ದಂತೆ ಗನ್ಮೆನ್ ಓಡಿ ಬಂದಿದ್ದಾರೆ. ಆಗ ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಅದೃಷ್ಟವಶಾತ್ ಸಂತೋಖ್ಗೆ ಯಾವುದೇ ತೊಂದರೆ ಉಂಟಾಗಿಲ್ಲ. ಅವರು ಗನ್ ಶಾಟ್ ಕೇಳುತ್ತಿದ್ದಂತೆ ಕಾರಿನಲ್ಲಿ ಅಡಗಿಕೊಂಡಿದ್ದರು ಎನ್ನಲಾಗಿದೆ. ನಂತರ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಫೈರ್ ಆದಂತಹ ಬುಲೆಟ್ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಸಂತೋಖ್ ಅವರ ಮೇಲೆ ದಾಳಿ ನಡೆದಿರುವ ವಿಚಾರ ಶೆಹನಾಜ್ಗೆ ಶಾಕ್ ನೀಡಿದೆ.
ಇದನ್ನೂ ಓದಿ: ಮಾತಾಡುತ್ತಿದೆಯಾ ಸಿದ್ದಾರ್ಥ್ ಶುಕ್ಲಾ ಆತ್ಮ? ವೈರಲ್ ಆಗುತ್ತಿದೆ ವಿಚಿತ್ರ ಧ್ವನಿ ಇರುವ ವಿಡಿಯೋ
ಬಿಗ್ ಬಾಸ್ ವೇದಿಕೆ ಮೇಲೆ ಸಿದ್ದಾರ್ಥ್ ಶುಕ್ಲಾಗೆ ಬರ್ತ್ಡೇ ವಿಶ್ ತಿಳಿಸಿದ ಸಲ್ಮಾನ್ ಖಾನ್