Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಾರ್ಥ್​ ಶುಕ್ಲಾ ಪ್ರಿಯತಮೆ ಶೆಹನಾಜ್ ಗಿಲ್​ ತಂದೆ ಮೇಲೆ ಗುಂಡಿನ ದಾಳಿ; ನಟಿಗೆ ಮತ್ತೊಂದು ಆಘಾತ

ಸಂತೋಖ್​ ಅವರು ಪಂಜಾಬ್​ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಬಿಜೆಪಿಗೆ ಸೇರ್ಪಡೆ ಆಗಿದ್ದರು. ಇದು ಕೆಲವರಿಗೆ ಇಷ್ಟವಿರಲಿಲ್ಲ ಎನ್ನಲಾಗಿದೆ. ಈ ದ್ವೇಷದ ಕಾರಣಕ್ಕೆ ಅವರ ಮೇಲೆ ಗುಂಡಿನ ದಾಳಿ ನಡೆದಿದೆ ಎಂಬ ಬಗ್ಗೆ ವರದಿ ಆಗಿದೆ.

ಸಿದ್ದಾರ್ಥ್​ ಶುಕ್ಲಾ ಪ್ರಿಯತಮೆ ಶೆಹನಾಜ್ ಗಿಲ್​ ತಂದೆ ಮೇಲೆ ಗುಂಡಿನ ದಾಳಿ; ನಟಿಗೆ ಮತ್ತೊಂದು ಆಘಾತ
ಸಿದ್ದಾರ್ಥ್​ ಶುಕ್ಲಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 27, 2021 | 8:42 PM

ಸಿದ್ದಾರ್ಥ್​ ಶುಕ್ಲಾ ಹಾಗೂ ಶೆಹನಾಜ್​ ಗಿಲ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ‘ಹಿಂದಿ ಬಿಗ್​ ಬಾಸ್​ 13’ರಲ್ಲಿ ಇಬ್ಬರೂ ಒಟ್ಟಾಗಿ ಸ್ಪರ್ಧಿಸಿದ್ದರು. ಆಗಲೇ ಇವರ ಮಧ್ಯೆ ಪ್ರೀತಿ ಮೊಳೆತಿತ್ತು. ಸಿದ್ದಾರ್ಥ್​ ಆ ಸೀಸನ್​ನಲ್ಲಿ ಗೆದ್ದಿದ್ದರು. ಇತ್ತೀಚೆಗೆ ಸಿದ್ದಾರ್ಥ್​ ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಸಾವು ಶೆಹನಾಜ್​ಗೆ ದೊಡ್ಡ ಆಘಾತ ತಂದಿತ್ತು. ಈ ನೋವಿನಿಂದ ಅವರಿಗೆ ಈಗಲೂ ಹೊರ ಬರೋಕೆ ಸಾಧ್ಯವಾಗಿಲ್ಲ. ಹಾಗಿರುವಾಗಲೇ ಶೆಹನಾಜ್​ಗೆ ಮತ್ತೊಂದು ಆಘಾತ ಆಗಿದೆ. ಅವರ ತಂದೆ ಸಂತೋಖ್​ ಸಿಂಗ್​ ಅಲಿಯಾಸ್​ ಸುಖ್​ ಮೇಲೆ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್​ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಂತೋಖ್​ ಅವರು ಪಂಜಾಬ್​ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಬಿಜೆಪಿಗೆ ಸೇರ್ಪಡೆ ಆಗಿದ್ದರು. ಇದು ಕೆಲವರಿಗೆ ಇಷ್ಟವಿರಲಿಲ್ಲ ಎನ್ನಲಾಗಿದೆ. ಈ ದ್ವೇಷದ ಕಾರಣಕ್ಕೆ ಅವರ ಮೇಲೆ ಗುಂಡಿನ ದಾಳಿ ನಡೆದಿದೆ ಎಂಬ ಬಗ್ಗೆ ವರದಿ ಆಗಿದೆ. ಆದರೆ, ಈ ಬಗ್ಗೆ ತನಿಖೆಯಿಂದ ಖಚಿತ ಮಾಹಿತಿ ಹೊರಬರಬೇಕಿದೆ. ಶನಿವಾರ (ಡಿಸೆಂಬರ್​ 25) ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಮೃತ್​ಸರದಿಂದ ಬಿಯಾಸ್​ಗೆ ಸಂತೋಖ್​ ಮರಳುತ್ತಿದ್ದರು. ಭದ್ರತಾ ಸಿಬ್ಬಂದಿಗೆ ವಾಶ್​ರೂಂಗೆ ತೆರಳಬೇಕಿತ್ತು. ಈ ಕಾರಣಕ್ಕೆ ಮಾರ್ಗ ಮಧ್ಯೆ ಡಾಬಾ ಒಂದರಲ್ಲಿ ಕಾರನ್ನು ನಿಲ್ಲಿಸಲಾಗಿತ್ತು. ಗನ್​ಮೆನ್​ ವಾಶ್​ರೂಂಗೆ ತೆರಳಿದ್ದಾಗ ಸಂತೋಖ್ ಕಾರಿನಲ್ಲಿ ಒಬ್ಬರೇ ಇದ್ದರು. ಈ ವೇಳೆ ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.

ಗುಂಡಿನ ಶಬ್ದ ಕೇಳುತ್ತಿದ್ದಂತೆ ಗನ್​ಮೆನ್​ ಓಡಿ ಬಂದಿದ್ದಾರೆ. ಆಗ ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಅದೃಷ್ಟವಶಾತ್​ ಸಂತೋಖ್​ಗೆ ಯಾವುದೇ ತೊಂದರೆ ಉಂಟಾಗಿಲ್ಲ. ಅವರು ಗನ್​ ಶಾಟ್​ ಕೇಳುತ್ತಿದ್ದಂತೆ ಕಾರಿನಲ್ಲಿ ಅಡಗಿಕೊಂಡಿದ್ದರು ಎನ್ನಲಾಗಿದೆ. ನಂತರ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಫೈರ್​ ಆದಂತಹ ಬುಲೆಟ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಸಂತೋಖ್ ಅವರ ಮೇಲೆ ದಾಳಿ ನಡೆದಿರುವ ವಿಚಾರ ಶೆಹನಾಜ್​ಗೆ ಶಾಕ್​ ನೀಡಿದೆ.

ಇದನ್ನೂ ಓದಿ: ಮಾತಾಡುತ್ತಿದೆಯಾ ಸಿದ್ದಾರ್ಥ್​ ಶುಕ್ಲಾ ಆತ್ಮ? ವೈರಲ್​ ಆಗುತ್ತಿದೆ ವಿಚಿತ್ರ ಧ್ವನಿ ಇರುವ ವಿಡಿಯೋ

ಬಿಗ್​ ಬಾಸ್​ ವೇದಿಕೆ ಮೇಲೆ ಸಿದ್ದಾರ್ಥ್​ ಶುಕ್ಲಾಗೆ ಬರ್ತ್​ಡೇ ವಿಶ್​ ತಿಳಿಸಿದ ಸಲ್ಮಾನ್​ ಖಾನ್​

Published On - 8:40 pm, Mon, 27 December 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ