AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಾರ್ಥ್​ ಶುಕ್ಲಾ ಪ್ರಿಯತಮೆ ಶೆಹನಾಜ್ ಗಿಲ್​ ತಂದೆ ಮೇಲೆ ಗುಂಡಿನ ದಾಳಿ; ನಟಿಗೆ ಮತ್ತೊಂದು ಆಘಾತ

ಸಂತೋಖ್​ ಅವರು ಪಂಜಾಬ್​ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಬಿಜೆಪಿಗೆ ಸೇರ್ಪಡೆ ಆಗಿದ್ದರು. ಇದು ಕೆಲವರಿಗೆ ಇಷ್ಟವಿರಲಿಲ್ಲ ಎನ್ನಲಾಗಿದೆ. ಈ ದ್ವೇಷದ ಕಾರಣಕ್ಕೆ ಅವರ ಮೇಲೆ ಗುಂಡಿನ ದಾಳಿ ನಡೆದಿದೆ ಎಂಬ ಬಗ್ಗೆ ವರದಿ ಆಗಿದೆ.

ಸಿದ್ದಾರ್ಥ್​ ಶುಕ್ಲಾ ಪ್ರಿಯತಮೆ ಶೆಹನಾಜ್ ಗಿಲ್​ ತಂದೆ ಮೇಲೆ ಗುಂಡಿನ ದಾಳಿ; ನಟಿಗೆ ಮತ್ತೊಂದು ಆಘಾತ
ಸಿದ್ದಾರ್ಥ್​ ಶುಕ್ಲಾ
TV9 Web
| Edited By: |

Updated on:Dec 27, 2021 | 8:42 PM

Share

ಸಿದ್ದಾರ್ಥ್​ ಶುಕ್ಲಾ ಹಾಗೂ ಶೆಹನಾಜ್​ ಗಿಲ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ‘ಹಿಂದಿ ಬಿಗ್​ ಬಾಸ್​ 13’ರಲ್ಲಿ ಇಬ್ಬರೂ ಒಟ್ಟಾಗಿ ಸ್ಪರ್ಧಿಸಿದ್ದರು. ಆಗಲೇ ಇವರ ಮಧ್ಯೆ ಪ್ರೀತಿ ಮೊಳೆತಿತ್ತು. ಸಿದ್ದಾರ್ಥ್​ ಆ ಸೀಸನ್​ನಲ್ಲಿ ಗೆದ್ದಿದ್ದರು. ಇತ್ತೀಚೆಗೆ ಸಿದ್ದಾರ್ಥ್​ ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಸಾವು ಶೆಹನಾಜ್​ಗೆ ದೊಡ್ಡ ಆಘಾತ ತಂದಿತ್ತು. ಈ ನೋವಿನಿಂದ ಅವರಿಗೆ ಈಗಲೂ ಹೊರ ಬರೋಕೆ ಸಾಧ್ಯವಾಗಿಲ್ಲ. ಹಾಗಿರುವಾಗಲೇ ಶೆಹನಾಜ್​ಗೆ ಮತ್ತೊಂದು ಆಘಾತ ಆಗಿದೆ. ಅವರ ತಂದೆ ಸಂತೋಖ್​ ಸಿಂಗ್​ ಅಲಿಯಾಸ್​ ಸುಖ್​ ಮೇಲೆ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್​ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಂತೋಖ್​ ಅವರು ಪಂಜಾಬ್​ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಬಿಜೆಪಿಗೆ ಸೇರ್ಪಡೆ ಆಗಿದ್ದರು. ಇದು ಕೆಲವರಿಗೆ ಇಷ್ಟವಿರಲಿಲ್ಲ ಎನ್ನಲಾಗಿದೆ. ಈ ದ್ವೇಷದ ಕಾರಣಕ್ಕೆ ಅವರ ಮೇಲೆ ಗುಂಡಿನ ದಾಳಿ ನಡೆದಿದೆ ಎಂಬ ಬಗ್ಗೆ ವರದಿ ಆಗಿದೆ. ಆದರೆ, ಈ ಬಗ್ಗೆ ತನಿಖೆಯಿಂದ ಖಚಿತ ಮಾಹಿತಿ ಹೊರಬರಬೇಕಿದೆ. ಶನಿವಾರ (ಡಿಸೆಂಬರ್​ 25) ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಮೃತ್​ಸರದಿಂದ ಬಿಯಾಸ್​ಗೆ ಸಂತೋಖ್​ ಮರಳುತ್ತಿದ್ದರು. ಭದ್ರತಾ ಸಿಬ್ಬಂದಿಗೆ ವಾಶ್​ರೂಂಗೆ ತೆರಳಬೇಕಿತ್ತು. ಈ ಕಾರಣಕ್ಕೆ ಮಾರ್ಗ ಮಧ್ಯೆ ಡಾಬಾ ಒಂದರಲ್ಲಿ ಕಾರನ್ನು ನಿಲ್ಲಿಸಲಾಗಿತ್ತು. ಗನ್​ಮೆನ್​ ವಾಶ್​ರೂಂಗೆ ತೆರಳಿದ್ದಾಗ ಸಂತೋಖ್ ಕಾರಿನಲ್ಲಿ ಒಬ್ಬರೇ ಇದ್ದರು. ಈ ವೇಳೆ ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.

ಗುಂಡಿನ ಶಬ್ದ ಕೇಳುತ್ತಿದ್ದಂತೆ ಗನ್​ಮೆನ್​ ಓಡಿ ಬಂದಿದ್ದಾರೆ. ಆಗ ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಅದೃಷ್ಟವಶಾತ್​ ಸಂತೋಖ್​ಗೆ ಯಾವುದೇ ತೊಂದರೆ ಉಂಟಾಗಿಲ್ಲ. ಅವರು ಗನ್​ ಶಾಟ್​ ಕೇಳುತ್ತಿದ್ದಂತೆ ಕಾರಿನಲ್ಲಿ ಅಡಗಿಕೊಂಡಿದ್ದರು ಎನ್ನಲಾಗಿದೆ. ನಂತರ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಫೈರ್​ ಆದಂತಹ ಬುಲೆಟ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಸಂತೋಖ್ ಅವರ ಮೇಲೆ ದಾಳಿ ನಡೆದಿರುವ ವಿಚಾರ ಶೆಹನಾಜ್​ಗೆ ಶಾಕ್​ ನೀಡಿದೆ.

ಇದನ್ನೂ ಓದಿ: ಮಾತಾಡುತ್ತಿದೆಯಾ ಸಿದ್ದಾರ್ಥ್​ ಶುಕ್ಲಾ ಆತ್ಮ? ವೈರಲ್​ ಆಗುತ್ತಿದೆ ವಿಚಿತ್ರ ಧ್ವನಿ ಇರುವ ವಿಡಿಯೋ

ಬಿಗ್​ ಬಾಸ್​ ವೇದಿಕೆ ಮೇಲೆ ಸಿದ್ದಾರ್ಥ್​ ಶುಕ್ಲಾಗೆ ಬರ್ತ್​ಡೇ ವಿಶ್​ ತಿಳಿಸಿದ ಸಲ್ಮಾನ್​ ಖಾನ್​

Published On - 8:40 pm, Mon, 27 December 21

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್