AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಸುಕೃತಾ ಜತೆ ಮದುವೆ ಫಿಕ್ಸ್​ ಆಗಿದೆ ಎಂದ ಬಿಗ್​ ಬಾಸ್​ ಶೈನ್ ಶೆಟ್ಟಿ

ಕಲರ್ಸ್​ ಕನ್ನಡ ವಾಹಿನಿ ಅನುಬಂಧ ಅವಾರ್ಡ್ಸ್​​ ಮೂಲಕ ಪ್ರೇಕ್ಷಕರ ಎದುರು ಬರುತ್ತಿದೆ. ಕಲರ್ಸ್​ನಲ್ಲಿ ಪ್ರಸಾರವಾದ ಮತ್ತು ಪ್ರಸಾರವಾಗುತ್ತಿರುವ ಧಾರಾವಾಹಿ ಕಲಾವಿದರು ಹಾಗೂ ರಿಯಾಲಿಟಿ ಶೋಗಳ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ.

ನನಗೆ ಸುಕೃತಾ ಜತೆ ಮದುವೆ ಫಿಕ್ಸ್​ ಆಗಿದೆ ಎಂದ ಬಿಗ್​ ಬಾಸ್​ ಶೈನ್ ಶೆಟ್ಟಿ
ಶೈನ್​ ಶೆಟ್ಟಿ
TV9 Web
| Edited By: |

Updated on:Oct 09, 2021 | 2:23 PM

Share

ಶೈನ್​ ಶೆಟ್ಟಿ ಹೆಸರು ಕೇಳಿದ್ರೆ ಸಾಕಷ್ಟು ಹುಡುಗಿಯರಿಗೆ ಖುಷಿ ಆಗುತ್ತದೆ. ಅವರು ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದು, ವಿನ್ನರ್​ ಆಗಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡರು. ತಮ್ಮ ಮಾತಿನ ಮೂಲಕ, ಸ್ಟೈಲ್​ ಮೂಲಕ ಸಾಕಷ್ಟು ಹುಡುಗಿಯರ ಹೃದಯ ಕದ್ದಿದ್ದಾರೆ ಅವರು. ಈಗ ಅವರು ತಮ್ಮ ಮದುವೆ ಬಗ್ಗೆ ಮಾತನಾಡಿದ್ದಾರೆ. ತಮಗೆ ಸುಕೃತಾ ಎಂಬುವವರ ಜತೆ ಮದುವೆ ಫಿಕ್ಸ್​ ಆಗಿದೆ ಎಂದು ಹೇಳಿಕೊಂಡಿದ್ದಾರೆ. ಹಾಗಂತ ಇದು ತೆರೆಯ ಹಿಂದಿನ ವಿಚಾರ ಅಲ್ಲವೇ ಅಲ್ಲ.

ಕಲರ್ಸ್​ ಕನ್ನಡ ವಾಹಿನಿ ಅನುಬಂಧ ಅವಾರ್ಡ್ಸ್​​ ಮೂಲಕ ಪ್ರೇಕ್ಷಕರ ಎದುರು ಬರುತ್ತಿದೆ. ಕಲರ್ಸ್​ನಲ್ಲಿ ಪ್ರಸಾರವಾದ ಮತ್ತು ಪ್ರಸಾರವಾಗುತ್ತಿರುವ ಧಾರಾವಾಹಿ ಕಲಾವಿದರು ಹಾಗೂ ರಿಯಾಲಿಟಿ ಶೋಗಳ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ಭರಪೂರ ಮನರಂಜನೆ ಈ ಕಾರ್ಯಕ್ರಮದಲ್ಲಿ ಇರಲಿದೆ. ಪ್ರತಿ ವರ್ಷವೂ ಈ ಕಾರ್ಯಕ್ರಮ ನಡೆದು ಬಂದಿದೆ. ಇದನ್ನು ವಾಹಿನಿ ಕುಟುಂಬದ ಕಾರ್ಯಕ್ರಮ ಎಂದೇ ಹೇಳುತ್ತದೆ. ಬಿಗ್​ ಬಾಸ್​ ಮನೆ ಪ್ರವೇಶಿಸುವ ಮೂಲಕ ಶೈನ್​ ಶೆಟ್ಟಿ ಕೂಡ ಕಲರ್ಸ್​ ಕನ್ನಡ ವಾಹಿನಿಯ ಭಾಗವಾದರು. ಈ ಕಾರಣಕ್ಕೆ ಅವರು ಅನುಬಂಧ ಅವಾರ್ಡ್​ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಅಕ್ಟೋಬರ್​ 15,16,17ರಂದು ಸಂಜೆ 7ಗಂಟೆಗೆ ಅನುಬಂಧ ಅವಾರ್ಡ್ಸ್ ಕಾರ್ಯಕ್ರಮ ಪ್ರಸಾರವಾಗಲಿದೆ. ಅನುಬಂಧ ಅವಾರ್ಡ್​ ಅನ್ನೋದು ತುಂಬಾನೇ ದೊಡ್ಡ ಕಾರ್ಯಕ್ರಮ. ಹೀಗಾಗಿ, ಇದರ ಮೇಕಿಂಗ್​ಗೆ ಹೆಚ್ಚಿನ ಸಮಯ ಹಿಡಿದಿರುತ್ತದೆ. ಈ ಕಾರಣಕ್ಕೆ ವಾಹಿನಿ ಇದರ ಮೇಕಿಂಗ್ ವಿಡಿಯೋ ಪ್ರಸಾರ ಮಾಡುತ್ತಿದೆ. ಭಾನುವಾರ (ಅಕ್ಟೋಬರ್​ 10) ಸಂಜೆ 4:30ಕ್ಕೆ ಮೇಕಿಂಗ್​ ಪ್ರಸಾರವಾಗಲಿದೆ.

ಅನುಬಂಧ ಅವಾರ್ಡ್ಸ್​ ಕಾರ್ಯಕ್ರಮದ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ. ಇದರಲ್ಲಿ, ಯುವತಿ ಒಬ್ಬಳು ಬಂದು ಶೈನ್​ ಶೆಟ್ಟಿ ಮೈ ಮೇಲೆ ಬೀಳುತ್ತಾಳೆ. ಈ ವೇಳೆ ಶೈನ್​ ಶೆಟ್ಟಿ, ಇಲ್ಲ ನನಗೆ ಸುಕೃತಾ ಎಂಬುವವರ ಜತೆ ಮದುವೆ ಫಿಕ್ಸ್​ ಆಗಿದೆ ಎಂದು ಹೇಳುತ್ತಲೇ ಸುಕೃತಾಗೆ ಕರೆ ಮಾಡಿ ಮುದ್ದು ಎಂದೆಲ್ಲ ಕರೆದಿದ್ದಾರೆ. ಈ ವಿಡಿಯೋ ಮಾಡಿದ್ದೇಕೆ? ಎಂಬಿತ್ಯಾದಿ ಪ್ರಶ್ನೆಗೆ ಮೇಕಿಂಗ್​ನಲ್ಲಿ ಉತ್ತರ ಸಿಗಲಿದೆ.

ಇದನ್ನೂ ಓದಿ:  ಅಳಿಸಿದ್ದಾಯ್ತು, ನಗಿಸಿದ್ದಾಯ್ತು.. ಈಗ ಭಯ ಹುಟ್ಟಿಸುವ ಲುಕ್​ನಲ್ಲಿ ಶ್ರುತಿ; ಹುಟ್ಟುಹಬ್ಬಕ್ಕೆ ಖಡಕ್​ ಪೋಸ್ಟರ್​

ಕನ್ನಡ ಬಿಗ್ ಬಾಸ್​ನಿಂದ ಹೊರ ಬಂದ ರಘು ಗೌಡ ಗತಿ ನೋಡಿ ನಕ್ಕ ಶೈನ್​ ಶೆಟ್ಟಿ

Published On - 1:39 pm, Sat, 9 October 21

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?