AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣ ಎನ್ನುತ್ತಲೇ ಮೋಸ ಮಾಡಿದ ಚೈತ್ರಾ; ಡ್ರಾಮಾ ಗೊತ್ತಾಗಿ ಗ್ರಹಚಾರ ಬಿಡಿಸಿದ ಶಿಶಿರ್

ಶಿಶಿರ್ ಮತ್ತು ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಅಣ್ಣ-ತಂಗಿ ರೀತಿ ಇದ್ದರು. ಆದರೆ ಚೈತ್ರಾ ಅವರು ಉಲ್ಟಾ ಹೊಡೆದಿದ್ದಾರೆ. ಚೈತ್ರಾ ನಡೆದುಕೊಂಡ ರೀತಿಯನ್ನು ಕಂಡು ಶಿಶಿರ್ ಕೆಂಡಾಮಂಡಲ ಆಗಿದ್ದಾರೆ. ಇಷ್ಟು ದಿನ ಚೈತ್ರಾ ಮಾಡಿದ್ದು ಡ್ರಾಮಾ ಎಂಬುದು ಶಿಶಿರ್ ಅವರಿಗೆ ಸ್ಪಷ್ಟವಾಗಿ ಗೊತ್ತಾಗಿದೆ. ಅವಕಾಶವಾದಿತನವನ್ನು ವಿರೋಧಿಸಿ ಶಿಶಿರ್​ ಗರಂ ಆಗಿದ್ದಾರೆ.

ಅಣ್ಣ ಎನ್ನುತ್ತಲೇ ಮೋಸ ಮಾಡಿದ ಚೈತ್ರಾ; ಡ್ರಾಮಾ ಗೊತ್ತಾಗಿ ಗ್ರಹಚಾರ ಬಿಡಿಸಿದ ಶಿಶಿರ್
ಚೈತ್ರಾ ಕುಂದಾಪುರ, ಶಿಶಿರ್​
ಮದನ್​ ಕುಮಾರ್​
|

Updated on: Nov 13, 2024 | 11:10 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ರಿಯಾಲಿಟಿ ಶೋನಲ್ಲಿ ರೋಚಕತೆ ಹೆಚ್ಚಾಗಿದೆ. ಚೈತ್ರಾ ಕುಂದಾಪುರ ಅವರ ವಿರುದ್ಧ ಶಿಶಿರ್ ತಿರುಗಿ ಬಿದ್ದಿದ್ದಾರೆ. ಇಷ್ಟು ದಿನಗಳ ಕಾಲ ಶಿಶಿರ್ ಮತ್ತು ಚೈತ್ರಾ ನಡುವೆ ಉತ್ತಮ ಬಾಂಧವ್ಯ ಇತ್ತು. ಅಣ್ಣ-ತಂಗಿ ರೀತಿ ಅವರು ಕ್ಲೋಸ್ ಆಗಿದ್ದರು. ಜೋಡಿ ಟಾಸ್ಕ್​ನಲ್ಲಿ ಜೋಡಿಯಾಗಿದ್ದ ಅವರಿಬ್ಬರ ನಡುವೆ ನಾಮಿನೇಷನ್​ ವಿಚಾರ ಬಂದಾಗ ಶಿಶಿರ್ ಅವರು ತ್ಯಾಗ ಮಾಡಿ ತಾವೇ ನಾಮಿನೇಟ್ ಆಗಿದ್ದರು. ಇಷ್ಟೆಲ್ಲ ಮಾಡಿದರೂ ಕೂಡ ಚೈತ್ರಾ ಅವರು ಅವಕಾಶವಾದಿ ಆಗಿದ್ದಾರೆ. ಅರ್ಧ ಆಟದಲ್ಲಿ ಶಿಶಿರ್ ಅವರನ್ನು ಬಿಟ್ಟು ತ್ರಿವಿಕ್ರಮ್ ಜೊತೆ ಚೈತ್ರಾ ಕೈ ಜೋಡಿಸಿದ್ದಾರೆ.

ಈ ವಾರ ಜೋಡಿ ಆಟದ ನಡುವೆ ಬಿಗ್ ಬಾಸ್ ಒಂದು ಟ್ವಿಸ್ಟ್ ನೀಡಿದರು. ತಮ್ಮ ಜೋಡಿಯನ್ನು ಬಿಟ್ಟುಕೊಟ್ಟು ಕ್ಯಾಪ್ಟನ್ ಜೊತೆ ಆಟ ಮುಂದುವರಿಸಲು ಇಚ್ಛಿಸುತ್ತೀರಾ ಎಂದು ಬಿಗ್ ಬಾಸ್ ಕೇಳಿದರು. ಈ ಆಫರ್​ ಅನ್ನು ಚೈತ್ರಾ ಕುಂದಾಪುರ ಅವರು ಒಪ್ಪಿಕೊಂಡರು. ಇದರಿಂದಾಗಿ ಶಿಶಿರ್ ಅವರು ಆಟದಿಂದ ಹೊರಗೆ ಉಳಿಯುವ ಸಾಧ್ಯತೆ ದಟ್ಟವಾಗಿತ್ತು. ಹಾಗಾಗಿ ಶಿಶಿರ್ ಕೋಪಗೊಂಡರು.

ಚೈತ್ರಾ ಮಾಡಿದ ಅನ್ಯಾಯದಿಂದಾಗಿ ಶಿಶಿರ್​ ಸಿಕ್ಕಾಪಟ್ಟೆ ಸಿಟ್ಟು ಮಾಡಿಕೊಂಡಿದ್ದಾರೆ. ಇಷ್ಟು ದಿನ ಚೈತ್ರಾ ಬಗ್ಗೆ ಮೃದು ಧೋರಣೆ ಹೊಂದಿದ್ದ ಅವರು ಬುಧವಾರದ (ನವೆಂಬರ್ 13) ಎಪಿಸೋಡ್​ನಲ್ಲಿ ಚೈತ್ರಾಳ ಅಸಲಿ ಮುಖ ಏನು ಎಂಬುದನ್ನು ಬಯಲು ಮಾಡಿದ್ದಾರೆ. ಅಣ್ಣ ಎನ್ನುತ್ತ ತಮ್ಮ ಬೆನ್ನಿಗೆ ಚೂರಿ ಹಾಕಲು ಪ್ರಯತ್ನಿಸಿದ ತಂಗಿಗೆ ಅವರು ಮಾತಿನಲ್ಲೇ ಗ್ರಹಚಾರ ಬಿಡಿಸಿದ್ದಾರೆ. ತಾವು ಕೂಡ ಚೈತ್ರಾ ಜೊತೆ ಜೋಡಿಯಾಗಿ ಆಡಲ್ಲ ಎಂದು ಅವರು ಕೂಗಾಡಿದ್ದಾರೆ.

ಇದನ್ನೂ ಓದಿ: ಕೊರಗಜ್ಜನ ಕೃಪೆ: ಮಣ್ಣಿನ ರಾಶಿಯಲ್ಲಿ ಚೈತ್ರಾ ಕಳೆದುಕೊಂಡ ಚಿನ್ನದ ಉಂಗುರ ಕೂಡಲೇ ಪತ್ತೆ

‘ತ್ರಿವಿಕ್ರಮ್ ಮಾನಸಿಕವಾಗಿ, ದೈಹಿಕವಾಗಿ ಗಟ್ಟಿ ವ್ಯಕ್ತಿ’ ಎಂಬ ಕಾರಣವನ್ನು ನೀಡಿ ಚೈತ್ರಾ ಅವರು ತ್ರಿವಿಕ್ರಮ್ ಜೊತೆ ಜೋಡಿಯಾಗಲು ಬಯಸಿದ್ದಾರೆ. ಇದು ಶಿಶಿರ್ ಅವರಿಗೆ ಇನ್ನಷ್ಟು ಕೋಪ ತರಿಸಿದೆ. ‘ನಾಮಿನೇಷನ್​ ಸಮಯದಲ್ಲಿ ಅಯ್ಯೋ, ಅಮ್ಮಾ ಅನ್ನೋದು. 12 ವರ್ಷ ಮಣ್ಣು ಹೊತ್ತಿರುವ ನಾವು ಆ್ಯಕ್ಟರ್ ಅಲ್ಲ.. ಇಲ್ಲಿ ಇದ್ದಾರೆ ನೋಡಿ ದೊಡ್ಡ ಆ್ಯಕ್ಟರ್​’ ಎಂದು ಚೈತ್ರಾ ಮೇಲೆ ಶಿಶಿರ್​ ಹರಿಹಾಯ್ದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ