AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದುಕೊಂಡ ದಿನವೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಶಿಶಿರ್

ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಶಿಶಿರ್ ಅವರು ತಮ್ಮ ಜನ್ಮದಿನದಂದು ನಿರ್ಗಮಿಸಿದ್ದಾರೆ. 11 ವಾರಗಳ ಕಾಲ ಸ್ಪರ್ಧಿಸಿದ ಅವರು ಇತ್ತೀಚೆಗೆ ಸ್ವಲ್ಪ ಡಲ್ ಆಗಿದ್ದರು. ಅವರು ಹೆಚ್ಚು ಸಕ್ರಿಯರಾಗಿದ್ದರೆ ಉಳಿಯುತ್ತಿದ್ದರು ಎಂದು ಅಭಿಪ್ರಾಯಪಟ್ಟಿದ್ದಾರೆ. ಶಿಶಿರ್ ಅವರು ತಮ್ಮ ಜನ್ಮದಿನದವರೆಗೆ ಇರಲು ಬಯಸಿದ್ದರು ಮತ್ತು ಅದು ನನಸಾಗಿದೆ.

ಅಂದುಕೊಂಡ ದಿನವೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಶಿಶಿರ್
ಶಿಶಿರ್
ರಾಜೇಶ್ ದುಗ್ಗುಮನೆ
|

Updated on: Dec 16, 2024 | 12:47 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಿಶಿರ್ ಅವರು ಎಲಿಮಿನೇಟ್ ಆಗಿದ್ದಾರೆ. 11 ವಾರಗಳ ಕಾಲ ಸ್ಪರ್ಧೆ ಮಾಡಿದ ಅವರು ಇತ್ತೀಚೆಗೆ ಡಲ್ ಆಗಿದ್ದರು. ‘ಮೊದಲ ಮೂರು ವಾರಗಳ ಕಾಲ ಇದ್ದ ಶಿಶಿರ್ ಈಗಲೂ ಇದ್ದಿದ್ದರೆ ಅವರು ಎಲಿಮಿನೇಟ್ ಆಗುತ್ತಿರಲಿಲ್ಲ’ ಎಂದು ಮನೆಯಲ್ಲಿ ಇದ್ದವರೇ ಅಭಿಪ್ರಾಯಪಟ್ಟಿದ್ದಾರೆ. ಮತ್ತೊಂದು ವಿಶೇಷ ಎಂದರೆ, ಶಿಶಿರ್ ಅವರು ತಾವು ಅಂದುಕೊಂಡ ದಿನವೇ ದೊಡ್ಮನೆಯಿಂದ ಹೊರ ಬಂದಿದ್ದಾರೆ.

ಶಿಶಿರ್ ಅವರಿಗೆ ಡಿಸೆಂಬರ್ 14 ಜನ್ಮದಿನ. ಈ ವಿಚಾರವನ್ನು ಅವರು ಈ ಮೊದಲೇ ಹಂಚಿಕೊಂಡಿದ್ದರು. ಅಲ್ಲದೆ, ಬರ್ತ್​ಡೇ ದಿನದವರೆಗೆ ತಾವು ಇರಬೇಕು ಎಂದು ಅಭಿಪ್ರಾಯಪಟ್ಟಿದ್ದರು. ‘ಡಿಸೆಂಬರ್ 14 ನನ್ನ ಜನ್ಮದಿನ. ಅಲ್ಲಿಯವರೆಗೆ ನಾನು ಬಿಗ್ ಬಾಸ್ ಮನೆಯಲ್ಲಿ ಇರಲೇಬೇಕು ಎಂಬ ಆಸೆ ಇದೆ. ಬಿಗ್ ಬಾಸ್ ಮನೆಯಲ್ಲಿ ನನ್ನ ಜನ್ಮದಿನ ಈ ವರ್ಷ ಆಚರಣೆ ಮಾಡಿಕೊಳ್ಳಬೇಕು ಎಂದಿದೆ’ ಎಂಬುದಾಗಿ ಶಿಶಿರ್ ಹೇಳಿದ್ದರು.

ಶಿಶಿರ್ ಅವರು ಅಂದುಕೊಂಡಂತೆ ಬಿಗ್ ಬಾಸ್ ಮನೆಯಲ್ಲೇ ಬರ್ತ್​ಡೇ ಆಚರಿಸಿಕೊಂಡರು. ಸುದೀಪ್ ಅವರು ಶಿಶಿರ್​ಗೆ ಕೇಕ್ ಕಳುಹಿಸಿಕೊಟ್ಟರು. ಅಷ್ಟೇ ಅಲ್ಲ, ತಾವು ಈ ಮೊದಲು ಬಳಸಿದ್ದ ಕೋಟ್​ನ ಗಿಫ್ಟ್ ಆಗಿ ಶಿಶಿರ್​ಗೆ ನೀಡಿದ್ದರು. ಈ ಖುಷಿಯ ದಿನವೇ ಶಿಶಿರ್ ಔಟ್ ಆಗಿದ್ದಾರೆ.

ಭಾನುವಾರದ ಎಪಿಸೋಡ್ ಒಂದು ದಿನ ಮೊದಲು ಅಂದರೆ ಶನಿವಾರವೇ ಶೂಟ್ ಆಗುತ್ತದೆ. ಕಳೆದ ವಾರವೂ ಹಾಗೆಯೇ ಆಗಿದೆ. ಡಿಸೆಂಬರ್ 15ರ ಎಪಿಸೋಡ್ ಡಿಸೆಂಬರ್ 14ರಂದೇ ಶೂಟ್ ಆಗಿತ್ತು. ಹೀಗಾಗಿ, ಶಿಶಿರ್ ಅವರು ಬರ್ತ್​ಡೇ ದಿನಾಂಕದಂದೇ ಎಲಿಮಿನೇಟ್ ಆದಂತೆ ಆಗಿದೆ.

ಇದನ್ನೂ ಓದಿ: ಎಲಿಮಿನೇಟ್ ಆದ ಶಿಶಿರ್​; ಐಶ್ವರ್ಯಾ ಜತೆಗಿನ ಸಂಬಂಧಕ್ಕೆ ಸ್ಪಷ್ಟನೆ ನೀಡಿದ ನಟ

ಶಿಶಿರ್ ಅವರು ಆರಂಭದಲ್ಲಿ ಸಾಕಷ್ಟು ಶ್ರಮ ಹಾಕಿದ್ದರು. ಬರುಬರುತ್ತಾ ಅವರು ಡಲ್ ಆದರು. ಇತ್ತೀಚೆಗೆ ಅವರು ದೊಡ್ಮನೆಯಲ್ಲಿ ಹೆಚ್ಚು ಕಾಣಿಸಿಕೊಂಡಿರಲಿಲ್ಲ. ‘ಮನೆಯಲ್ಲಿ ಎಲ್ಲರೂ ಟಾರ್ಗೆಟ್ ಮಾಡಿ ಶಿಶಿರ್​ನ ಕಳುಹಿಸಿದ್ದಾರೆ’ ಎಂದು ಐಶ್ವರ್ಯಾ ಅವರು ಮಾತನಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ