AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BOSS ಶರ್ಟ್ ಹಾಕಿ ‘ಸರಿಗಮಪ’ ಶೋಗೆ ಬಂದ ಶಿವರಾಜ್​ಕುಮಾರ್

ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ನಿಂದ ಗುಣಮುಖರಾಗಿ ‘ಸರಿಗಮಪ’ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ. ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಬಂದ ಅವರು ಜೀ ಕನ್ನಡ ವಾಹಿನಿಯ ಈ ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಅಭಿಮಾನಿಗಳನ್ನು ಸಂತೋಷಗೊಳಿಸಿದ್ದಾರೆ. ಅವರ ಆರೋಗ್ಯದ ಬಗ್ಗೆ ಚಿಂತೆ ವ್ಯಕ್ತಪಡಿಸಿದ್ದ ಅನುಶ್ರೀ ಮತ್ತು ಇತರರು ಶಿವಣ್ಣನನ್ನು ಭಾವುಕವಾಗಿ ಸ್ವಾಗತಿಸಿದರು.

BOSS ಶರ್ಟ್ ಹಾಕಿ ‘ಸರಿಗಮಪ’ ಶೋಗೆ ಬಂದ ಶಿವರಾಜ್​ಕುಮಾರ್
ಶಿವರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Jan 30, 2025 | 10:11 AM

Share

ಶಿವರಾಜ್​ಕುಮಾರ್ ಅವರ ಚೈತನ್ಯ ಎಲ್ಲರಿಗೂ ಮಾದರಿ. ಇದು ಅನೇಕರಿಗೆ ಗೊತ್ತಿದೆ. ಅವರು ಇತ್ತೀಚೆಗೆ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಅಮೆರಿಕಕ್ಕೆ ಹೋಗಿ ಚಿಕಿತ್ಸೆ ಪಡೆದು ಬಂದ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ. ಅವರು ‘ಸರಿಗಮಪ’ ವೇದಿಕೆ ಏರಿದ್ದಾರೆ. ಈ ಸಂದರ್ಭದ ಪ್ರೋಮೋನ ಜೀ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಫ್ಯಾನ್ಸ್ ಸಂಭ್ರಮಿಸಿದ್ದಾರೆ.

ಶಿವರಾಜ್​ಕುಮಾರ್ ಅವರಿಗೆ ಜೀ ಕನ್ನಡದ ಜೊತೆ ಒಳ್ಳೆಯ ಒಡನಾಟ ಇದೆ. ಈ ಮೊದಲು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋಗೆ ಅವರು ಜಡ್ಜ್ ಆಗಿದ್ದರು. ಇದು ಪೂರ್ಣಗೊಳ್ಳುತ್ತಿದ್ದಂತೆ ಶಿವಣ್ಣ ಅಮೆರಿಕಕ್ಕೆ ಚಿಕಿತ್ಸೆಗೆ ತೆರಳಿದರು. ಕೆಲ ದಿನಗಳ ಹಿಂದೆ ಅವರು ಬೆಂಗಳೂರಿಗೆ ಮರಳಿದ್ದಾರೆ. ವಿಶೇಷ ಎಂದರೆ ಅವರು ‘ಸರಿಗಮಪ’ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಜೀ ಕನ್ನಡ ವಾಹಿನಿ ಇದರ ಪ್ರೋಮೋ ರಿಲೀಸ್ ಮಾಡಿದೆ.

‘ಸರಿಗಮಪ’ ಶೋ ಇತ್ತೀಚೆಗೆ ಆರಂಭ ಆಗಿದೆ. ಈ ವೇದಿಕೆ ಮೇಲೆ ಶಿವರಾಜ್​ಕುಮಾರ್, ಗೀತಾ ಶಿವರಾಜ್​ಕುಮಾರ್ ಆಗಮಿಸಿದ್ದಾರೆ. ‘ಜೀವನವನ್ನು ಗೆದ್ದು ಬಂದತಹ ನಿಜವಾದ ಗೆಲುವಿನ ಸರದಾರರು’ ಎಂದು ಅನುಶ್ರೀ ಅವರು ಶಿವಣ್ಣನ ಎಂಟ್ರಿಗೆ ಡೈಲಾಗ್ ಹೊಡೆದಿದ್ದಾರೆ. ಶಿವರಾಜ್​ಕುಮಾರ್ ಅವರು ಆಗಮಿಸುತ್ತಿದ್ದಂತೆ ವೇದಿಕೆ ಮೇಲಿದ್ದ ತಾರಾ, ಶ್ರುತಿ ಆ್ಯಂಕರ್​ ಅನುಶ್ರೀ ಕಣ್ಣೀರು ಹಾಕಿದ್ದಾರೆ. ಅವರನ್ನು ತಬ್ಬಿ ಸ್ವಾಗತಿಸಿದ್ದಾರೆ. ಅವರ ಆರೋಗ್ಯ ವಿಚಾರಿಸಿಕೊಂಡಿದ್ದಾರೆ.

View this post on Instagram

A post shared by Zee Kannada (@zeekannada)

‘ಸರಿಗಮಪ ಮಹಾ ಮನರಂಜನೆ’ ಎಂದು ಜೀ ಕನ್ನಡ ವಾಹಿನಿ ಇದಕ್ಕೆ ಟೈಟಲ್ ನೀಡಿದೆ. ಈ ಎಪಿಸೋಡ್ ಶನಿವಾರ ಹಾಗೂ ಭಾನುವಾರ ರಾತ್ರಿ 7.30ಕ್ಕೆ ಪ್ರಸಾರ ಕಾಣಲಿದೆ. ಈ ಎಪಿಸೋಡ್​ ನೋಡಲು ವೀಕ್ಷಕರು ಕಾದಿದ್ದಾರೆ. ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ಗೆದ್ದು ಬಂದ ರೀತಿಯನ್ನು ವಿವರಿಸುವ ಸಾಧ್ಯತೆ ಇದೆ. ಈ ಮೂಲಕ ಅನೇಕರಿಗೆ ಸ್ಫೂರ್ತಿ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಶಿವರಾಜ್​ಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ರಾಜಕೀಯ ಹಾಗೂ ಸಿನಿಮಾ ಗಣ್ಯರು

ಶಿವರಾಜ್​ಕುಮಾರ್ ಅವರು ಮುಂದಿನ ಕೆಲ ತಿಂಗಳು ವಿಶ್ರಾಂತಿಯಲ್ಲಿ ಇರಲಿದ್ದಾರೆ. ಆ ಸಂದರ್ಭದಲ್ಲಿ ಅವರು ಸಿನಿಮಾ ಕೆಲಸಗಳನ್ನು ಮಾಡುತ್ತಿಲ್ಲ. ಸಂಪೂರ್ಣವಾಗಿ ವಿಶ್ರಾಂತಿ ಪಡೆದ ನಂತರ ಅವರು ಮರಳಿ ಕೆಲಸಕ್ಕೆ ಬರಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:57 am, Thu, 30 January 25

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​