AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅದೇ ಎನರ್ಜಿ, ಅದೇ ಗತ್ತು’; ಜೀ ಕನ್ನಡ ವೇದಿಕೆ ಮೇಲೆ ಶಿವಣ್ಣ-ಪ್ರೇಮಾ ‘ಓಂ’ ರೀ ಕ್ರಿಯೇಷನ್

‘ಒಂ’ ಚಿತ್ರವನ್ನು ಉಪೇಂದ್ರ ಅವರು ನಿರ್ದೇಶನ ಮಾಡಿದ್ದರು. 1995ರ ಮೇ 19ರಂದು ಈ ಚಿತ್ರ ರೀಲೀಸ್ ಆಯಿತು. ಈ ಸಿನಿಮಾ ಈವರೆಗೆ ಸಿನಿಮಾ 550ಕ್ಕೂ ಅಧಿಕ ಬಾರಿ ರೀ-ರಿಲೀಸ್ ಆಗಿದೆ ಅನ್ನೋದು ವಿಶೇಷ. ಈಗ ಜೀ ಕನ್ನಡ ವೇದಿಕೆ ಮೇಲೆ ಶಿವರಾಜ್​ಕುಮಾರ್ ಅವರು ‘ಓಂ’ ಚಿತ್ರವನ್ನು ರೀ ಕ್ರಿಯೇಟ್ ಮಾಡುತ್ತಿದ್ದಾರೆ.

‘ಅದೇ ಎನರ್ಜಿ, ಅದೇ ಗತ್ತು’; ಜೀ ಕನ್ನಡ ವೇದಿಕೆ ಮೇಲೆ ಶಿವಣ್ಣ-ಪ್ರೇಮಾ ‘ಓಂ’ ರೀ ಕ್ರಿಯೇಷನ್
ಶಿವರಾಜ್​ಕುಮಾರ್-ಪ್ರೇಮಾ
ರಾಜೇಶ್ ದುಗ್ಗುಮನೆ
|

Updated on: Aug 31, 2024 | 10:40 AM

Share

ನಟ ಶಿವರಾಜ್​ಕುಮಾರ್ ನಟನೆಯ ‘ಓಂ’ ಸಿನಿಮಾ 1995ರಲ್ಲಿ ರಿಲೀಸ್ ಆಯಿತು. ಈ ಚಿತ್ರ ಬಿಡುಗಡೆ ಆಗಿ 30 ವರ್ಷ ಪೂರ್ಣಗೊಳ್ಳುತ್ತಿದೆ. ಈ ಚಿತ್ರವನ್ನು ಈಗಲೂ ನೆನಪಿಸಿಕೊಳ್ಳು ಕೆಲಸ ಫ್ಯಾನ್ಸ್ ಮಾಡುತ್ತಾರೆ. ಈಗ ಜೀ ಕನ್ನಡ ವೇದಿಕೆ ಮೇಲೆ ಶಿವರಾಜ್​ಕುಮಾರ್ ಅವರು ‘ಓಂ’ ಚಿತ್ರವನ್ನು ರೀ ಕ್ರಿಯೇಟ್ ಮಾಡುತ್ತಿದ್ದಾರೆ. ಇದರ ಪ್ರೋಮೋ ರಿಲೀಸ್ ಆಗಿದೆ. ಸಂಪೂರ್ಣ ಎಪಿಸೋಡ್ ನೋಡಲು ಫ್ಯಾನ್ಸ್ ಕಾದಿದ್ದಾರೆ.

‘ಒಂ’ ಚಿತ್ರವನ್ನು ಉಪೇಂದ್ರ ಅವರು ನಿರ್ದೇಶನ ಮಾಡಿದ್ದರು. 1995ರ ಮೇ 19ರಂದು ಈ ಚಿತ್ರ ರೀಲೀಸ್ ಆಯಿತು. ಈ ಸಿನಿಮಾ ಈವರೆಗೆ ಸಿನಿಮಾ 550ಕ್ಕೂ ಅಧಿಕ ಬಾರಿ ರೀ-ರಿಲೀಸ್ ಆಗಿದೆ ಅನ್ನೋದು ವಿಶೇಷ. ಶಿವರಾಜ್​ಕುಮಾರ್ ಅವರು ಸತ್ಯ ಹೆಸರಿನ ಪಾತ್ರ ಮಾಡಿದರೆ, ಪ್ರೇಮಾ ಅವರು ಮಧು ಹೆಸರಿನ ಪಾತ್ರ ಮಾಡಿದ್ದರು. ಈ ಚಿತ್ರವನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದರು.

ಮಧು ಬಳಿ ಬರುವ ಸತ್ಯ ಪ್ರೀತಿಸು ಎಂದು ಪೀಡಿಸುತ್ತಾನೆ. ಈ ದೃಶ್ಯವನ್ನು ರೀ ಕ್ರಿಯೇಟ್ ಮಾಡಲಾಗಿದೆ. ‘ದಂತದ ಗೊಂಬೆ ತರ ಕಾಣ್ತಾ ಇದೀಯಾ, ಐ ಲವ್​ ಯೂ ಮಧು’ ಎಂದು ಶಿವಣ್ಣ ಹೇಳಿದ್ದಾರೆ. ‘ನನಗೆ ನೀನು ಇಷ್ಟ ಇಲ್ಲ ಅಂದ್ರೂ ಯಾಕೆ ನನ್ನ ಪೀಡಿಸ್ತೀಯಾ’ ಎಂದು ಪ್ರೇಮಾ ಕೇಳಿದ್ದಾರೆ. ಇಬ್ಬರ ಎನರ್ಜಿ ಅದೇ ರೀತಿ ಇದೆ. ಡೈಲಾಗ್​ ಡೆಲಿವರಿ ಆಗ ಹೇಗಿತ್ತೋ ಹಾಗೆಯೇ ಇದೆ ಅನ್ನೋದು ವಿಶೇಷ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ‘ನಾನು ತಾಳ್ಮೆ ಕಳೆದುಕೊಂಡಾಗಲೆಲ್ಲ, ತುಂಬಾ ಜನ ತಲೆ ಕಳೆದುಕೊಂಡಿದ್ದಾರೆ’; ಮತ್ತೆ ಲಾಂಗ್ ಹಿಡಿದ ಶಿವರಾಜ್​ಕುಮಾರ್

ಜೀ ಕನ್ನಡದಲ್ಲಿ ಇಂದು ಎರಡು ರಿಯಾಲಿಟಿ ಶೋಗಳ ಸಮಾಗಮ ಆಗುತ್ತಿದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಮತ್ತು ಮಹಾನಟಿ ‘ಮಹಾಸಂಭ್ರಮ’ ಕಾರ್ಯಕ್ರಮ ಸಂಜೆ 7ರಿಂದ ರಾತ್ರಿ 9:30ರವರೆಗೆ ನಡೆಯಲಿದೆ. ಶಿವಣ್ಣ ಅವರು ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಜಡ್ಡ್ ಆದರೆ, ಪ್ರೇಮಾ ಮಹಾನಟಿ ಶೋನ ಜಡ್ಜ್​ ಆಗಿದ್ದಾರೆ. ತರುಣ್ ಸುಧೀರ್ ಕೂಡ ಜಡ್ಜ್ ಸ್ಥಾನದಲ್ಲಿ ಇದ್ದು, ಅವರ ಪತ್ನಿ ಸೋನಲ್ ಅವರು ಬರಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ