AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅದೇ ಎನರ್ಜಿ, ಅದೇ ಗತ್ತು’; ಜೀ ಕನ್ನಡ ವೇದಿಕೆ ಮೇಲೆ ಶಿವಣ್ಣ-ಪ್ರೇಮಾ ‘ಓಂ’ ರೀ ಕ್ರಿಯೇಷನ್

‘ಒಂ’ ಚಿತ್ರವನ್ನು ಉಪೇಂದ್ರ ಅವರು ನಿರ್ದೇಶನ ಮಾಡಿದ್ದರು. 1995ರ ಮೇ 19ರಂದು ಈ ಚಿತ್ರ ರೀಲೀಸ್ ಆಯಿತು. ಈ ಸಿನಿಮಾ ಈವರೆಗೆ ಸಿನಿಮಾ 550ಕ್ಕೂ ಅಧಿಕ ಬಾರಿ ರೀ-ರಿಲೀಸ್ ಆಗಿದೆ ಅನ್ನೋದು ವಿಶೇಷ. ಈಗ ಜೀ ಕನ್ನಡ ವೇದಿಕೆ ಮೇಲೆ ಶಿವರಾಜ್​ಕುಮಾರ್ ಅವರು ‘ಓಂ’ ಚಿತ್ರವನ್ನು ರೀ ಕ್ರಿಯೇಟ್ ಮಾಡುತ್ತಿದ್ದಾರೆ.

‘ಅದೇ ಎನರ್ಜಿ, ಅದೇ ಗತ್ತು’; ಜೀ ಕನ್ನಡ ವೇದಿಕೆ ಮೇಲೆ ಶಿವಣ್ಣ-ಪ್ರೇಮಾ ‘ಓಂ’ ರೀ ಕ್ರಿಯೇಷನ್
ಶಿವರಾಜ್​ಕುಮಾರ್-ಪ್ರೇಮಾ
ರಾಜೇಶ್ ದುಗ್ಗುಮನೆ
|

Updated on: Aug 31, 2024 | 10:40 AM

Share

ನಟ ಶಿವರಾಜ್​ಕುಮಾರ್ ನಟನೆಯ ‘ಓಂ’ ಸಿನಿಮಾ 1995ರಲ್ಲಿ ರಿಲೀಸ್ ಆಯಿತು. ಈ ಚಿತ್ರ ಬಿಡುಗಡೆ ಆಗಿ 30 ವರ್ಷ ಪೂರ್ಣಗೊಳ್ಳುತ್ತಿದೆ. ಈ ಚಿತ್ರವನ್ನು ಈಗಲೂ ನೆನಪಿಸಿಕೊಳ್ಳು ಕೆಲಸ ಫ್ಯಾನ್ಸ್ ಮಾಡುತ್ತಾರೆ. ಈಗ ಜೀ ಕನ್ನಡ ವೇದಿಕೆ ಮೇಲೆ ಶಿವರಾಜ್​ಕುಮಾರ್ ಅವರು ‘ಓಂ’ ಚಿತ್ರವನ್ನು ರೀ ಕ್ರಿಯೇಟ್ ಮಾಡುತ್ತಿದ್ದಾರೆ. ಇದರ ಪ್ರೋಮೋ ರಿಲೀಸ್ ಆಗಿದೆ. ಸಂಪೂರ್ಣ ಎಪಿಸೋಡ್ ನೋಡಲು ಫ್ಯಾನ್ಸ್ ಕಾದಿದ್ದಾರೆ.

‘ಒಂ’ ಚಿತ್ರವನ್ನು ಉಪೇಂದ್ರ ಅವರು ನಿರ್ದೇಶನ ಮಾಡಿದ್ದರು. 1995ರ ಮೇ 19ರಂದು ಈ ಚಿತ್ರ ರೀಲೀಸ್ ಆಯಿತು. ಈ ಸಿನಿಮಾ ಈವರೆಗೆ ಸಿನಿಮಾ 550ಕ್ಕೂ ಅಧಿಕ ಬಾರಿ ರೀ-ರಿಲೀಸ್ ಆಗಿದೆ ಅನ್ನೋದು ವಿಶೇಷ. ಶಿವರಾಜ್​ಕುಮಾರ್ ಅವರು ಸತ್ಯ ಹೆಸರಿನ ಪಾತ್ರ ಮಾಡಿದರೆ, ಪ್ರೇಮಾ ಅವರು ಮಧು ಹೆಸರಿನ ಪಾತ್ರ ಮಾಡಿದ್ದರು. ಈ ಚಿತ್ರವನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದರು.

ಮಧು ಬಳಿ ಬರುವ ಸತ್ಯ ಪ್ರೀತಿಸು ಎಂದು ಪೀಡಿಸುತ್ತಾನೆ. ಈ ದೃಶ್ಯವನ್ನು ರೀ ಕ್ರಿಯೇಟ್ ಮಾಡಲಾಗಿದೆ. ‘ದಂತದ ಗೊಂಬೆ ತರ ಕಾಣ್ತಾ ಇದೀಯಾ, ಐ ಲವ್​ ಯೂ ಮಧು’ ಎಂದು ಶಿವಣ್ಣ ಹೇಳಿದ್ದಾರೆ. ‘ನನಗೆ ನೀನು ಇಷ್ಟ ಇಲ್ಲ ಅಂದ್ರೂ ಯಾಕೆ ನನ್ನ ಪೀಡಿಸ್ತೀಯಾ’ ಎಂದು ಪ್ರೇಮಾ ಕೇಳಿದ್ದಾರೆ. ಇಬ್ಬರ ಎನರ್ಜಿ ಅದೇ ರೀತಿ ಇದೆ. ಡೈಲಾಗ್​ ಡೆಲಿವರಿ ಆಗ ಹೇಗಿತ್ತೋ ಹಾಗೆಯೇ ಇದೆ ಅನ್ನೋದು ವಿಶೇಷ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ‘ನಾನು ತಾಳ್ಮೆ ಕಳೆದುಕೊಂಡಾಗಲೆಲ್ಲ, ತುಂಬಾ ಜನ ತಲೆ ಕಳೆದುಕೊಂಡಿದ್ದಾರೆ’; ಮತ್ತೆ ಲಾಂಗ್ ಹಿಡಿದ ಶಿವರಾಜ್​ಕುಮಾರ್

ಜೀ ಕನ್ನಡದಲ್ಲಿ ಇಂದು ಎರಡು ರಿಯಾಲಿಟಿ ಶೋಗಳ ಸಮಾಗಮ ಆಗುತ್ತಿದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಮತ್ತು ಮಹಾನಟಿ ‘ಮಹಾಸಂಭ್ರಮ’ ಕಾರ್ಯಕ್ರಮ ಸಂಜೆ 7ರಿಂದ ರಾತ್ರಿ 9:30ರವರೆಗೆ ನಡೆಯಲಿದೆ. ಶಿವಣ್ಣ ಅವರು ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಜಡ್ಡ್ ಆದರೆ, ಪ್ರೇಮಾ ಮಹಾನಟಿ ಶೋನ ಜಡ್ಜ್​ ಆಗಿದ್ದಾರೆ. ತರುಣ್ ಸುಧೀರ್ ಕೂಡ ಜಡ್ಜ್ ಸ್ಥಾನದಲ್ಲಿ ಇದ್ದು, ಅವರ ಪತ್ನಿ ಸೋನಲ್ ಅವರು ಬರಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ