AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅದೇ ಎನರ್ಜಿ, ಅದೇ ಗತ್ತು’; ಜೀ ಕನ್ನಡ ವೇದಿಕೆ ಮೇಲೆ ಶಿವಣ್ಣ-ಪ್ರೇಮಾ ‘ಓಂ’ ರೀ ಕ್ರಿಯೇಷನ್

‘ಒಂ’ ಚಿತ್ರವನ್ನು ಉಪೇಂದ್ರ ಅವರು ನಿರ್ದೇಶನ ಮಾಡಿದ್ದರು. 1995ರ ಮೇ 19ರಂದು ಈ ಚಿತ್ರ ರೀಲೀಸ್ ಆಯಿತು. ಈ ಸಿನಿಮಾ ಈವರೆಗೆ ಸಿನಿಮಾ 550ಕ್ಕೂ ಅಧಿಕ ಬಾರಿ ರೀ-ರಿಲೀಸ್ ಆಗಿದೆ ಅನ್ನೋದು ವಿಶೇಷ. ಈಗ ಜೀ ಕನ್ನಡ ವೇದಿಕೆ ಮೇಲೆ ಶಿವರಾಜ್​ಕುಮಾರ್ ಅವರು ‘ಓಂ’ ಚಿತ್ರವನ್ನು ರೀ ಕ್ರಿಯೇಟ್ ಮಾಡುತ್ತಿದ್ದಾರೆ.

‘ಅದೇ ಎನರ್ಜಿ, ಅದೇ ಗತ್ತು’; ಜೀ ಕನ್ನಡ ವೇದಿಕೆ ಮೇಲೆ ಶಿವಣ್ಣ-ಪ್ರೇಮಾ ‘ಓಂ’ ರೀ ಕ್ರಿಯೇಷನ್
ಶಿವರಾಜ್​ಕುಮಾರ್-ಪ್ರೇಮಾ
ರಾಜೇಶ್ ದುಗ್ಗುಮನೆ
|

Updated on: Aug 31, 2024 | 10:40 AM

Share

ನಟ ಶಿವರಾಜ್​ಕುಮಾರ್ ನಟನೆಯ ‘ಓಂ’ ಸಿನಿಮಾ 1995ರಲ್ಲಿ ರಿಲೀಸ್ ಆಯಿತು. ಈ ಚಿತ್ರ ಬಿಡುಗಡೆ ಆಗಿ 30 ವರ್ಷ ಪೂರ್ಣಗೊಳ್ಳುತ್ತಿದೆ. ಈ ಚಿತ್ರವನ್ನು ಈಗಲೂ ನೆನಪಿಸಿಕೊಳ್ಳು ಕೆಲಸ ಫ್ಯಾನ್ಸ್ ಮಾಡುತ್ತಾರೆ. ಈಗ ಜೀ ಕನ್ನಡ ವೇದಿಕೆ ಮೇಲೆ ಶಿವರಾಜ್​ಕುಮಾರ್ ಅವರು ‘ಓಂ’ ಚಿತ್ರವನ್ನು ರೀ ಕ್ರಿಯೇಟ್ ಮಾಡುತ್ತಿದ್ದಾರೆ. ಇದರ ಪ್ರೋಮೋ ರಿಲೀಸ್ ಆಗಿದೆ. ಸಂಪೂರ್ಣ ಎಪಿಸೋಡ್ ನೋಡಲು ಫ್ಯಾನ್ಸ್ ಕಾದಿದ್ದಾರೆ.

‘ಒಂ’ ಚಿತ್ರವನ್ನು ಉಪೇಂದ್ರ ಅವರು ನಿರ್ದೇಶನ ಮಾಡಿದ್ದರು. 1995ರ ಮೇ 19ರಂದು ಈ ಚಿತ್ರ ರೀಲೀಸ್ ಆಯಿತು. ಈ ಸಿನಿಮಾ ಈವರೆಗೆ ಸಿನಿಮಾ 550ಕ್ಕೂ ಅಧಿಕ ಬಾರಿ ರೀ-ರಿಲೀಸ್ ಆಗಿದೆ ಅನ್ನೋದು ವಿಶೇಷ. ಶಿವರಾಜ್​ಕುಮಾರ್ ಅವರು ಸತ್ಯ ಹೆಸರಿನ ಪಾತ್ರ ಮಾಡಿದರೆ, ಪ್ರೇಮಾ ಅವರು ಮಧು ಹೆಸರಿನ ಪಾತ್ರ ಮಾಡಿದ್ದರು. ಈ ಚಿತ್ರವನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದರು.

ಮಧು ಬಳಿ ಬರುವ ಸತ್ಯ ಪ್ರೀತಿಸು ಎಂದು ಪೀಡಿಸುತ್ತಾನೆ. ಈ ದೃಶ್ಯವನ್ನು ರೀ ಕ್ರಿಯೇಟ್ ಮಾಡಲಾಗಿದೆ. ‘ದಂತದ ಗೊಂಬೆ ತರ ಕಾಣ್ತಾ ಇದೀಯಾ, ಐ ಲವ್​ ಯೂ ಮಧು’ ಎಂದು ಶಿವಣ್ಣ ಹೇಳಿದ್ದಾರೆ. ‘ನನಗೆ ನೀನು ಇಷ್ಟ ಇಲ್ಲ ಅಂದ್ರೂ ಯಾಕೆ ನನ್ನ ಪೀಡಿಸ್ತೀಯಾ’ ಎಂದು ಪ್ರೇಮಾ ಕೇಳಿದ್ದಾರೆ. ಇಬ್ಬರ ಎನರ್ಜಿ ಅದೇ ರೀತಿ ಇದೆ. ಡೈಲಾಗ್​ ಡೆಲಿವರಿ ಆಗ ಹೇಗಿತ್ತೋ ಹಾಗೆಯೇ ಇದೆ ಅನ್ನೋದು ವಿಶೇಷ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ‘ನಾನು ತಾಳ್ಮೆ ಕಳೆದುಕೊಂಡಾಗಲೆಲ್ಲ, ತುಂಬಾ ಜನ ತಲೆ ಕಳೆದುಕೊಂಡಿದ್ದಾರೆ’; ಮತ್ತೆ ಲಾಂಗ್ ಹಿಡಿದ ಶಿವರಾಜ್​ಕುಮಾರ್

ಜೀ ಕನ್ನಡದಲ್ಲಿ ಇಂದು ಎರಡು ರಿಯಾಲಿಟಿ ಶೋಗಳ ಸಮಾಗಮ ಆಗುತ್ತಿದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಮತ್ತು ಮಹಾನಟಿ ‘ಮಹಾಸಂಭ್ರಮ’ ಕಾರ್ಯಕ್ರಮ ಸಂಜೆ 7ರಿಂದ ರಾತ್ರಿ 9:30ರವರೆಗೆ ನಡೆಯಲಿದೆ. ಶಿವಣ್ಣ ಅವರು ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಜಡ್ಡ್ ಆದರೆ, ಪ್ರೇಮಾ ಮಹಾನಟಿ ಶೋನ ಜಡ್ಜ್​ ಆಗಿದ್ದಾರೆ. ತರುಣ್ ಸುಧೀರ್ ಕೂಡ ಜಡ್ಜ್ ಸ್ಥಾನದಲ್ಲಿ ಇದ್ದು, ಅವರ ಪತ್ನಿ ಸೋನಲ್ ಅವರು ಬರಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ