AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅದೇ ಎನರ್ಜಿ, ಅದೇ ಗತ್ತು’; ಜೀ ಕನ್ನಡ ವೇದಿಕೆ ಮೇಲೆ ಶಿವಣ್ಣ-ಪ್ರೇಮಾ ‘ಓಂ’ ರೀ ಕ್ರಿಯೇಷನ್

‘ಒಂ’ ಚಿತ್ರವನ್ನು ಉಪೇಂದ್ರ ಅವರು ನಿರ್ದೇಶನ ಮಾಡಿದ್ದರು. 1995ರ ಮೇ 19ರಂದು ಈ ಚಿತ್ರ ರೀಲೀಸ್ ಆಯಿತು. ಈ ಸಿನಿಮಾ ಈವರೆಗೆ ಸಿನಿಮಾ 550ಕ್ಕೂ ಅಧಿಕ ಬಾರಿ ರೀ-ರಿಲೀಸ್ ಆಗಿದೆ ಅನ್ನೋದು ವಿಶೇಷ. ಈಗ ಜೀ ಕನ್ನಡ ವೇದಿಕೆ ಮೇಲೆ ಶಿವರಾಜ್​ಕುಮಾರ್ ಅವರು ‘ಓಂ’ ಚಿತ್ರವನ್ನು ರೀ ಕ್ರಿಯೇಟ್ ಮಾಡುತ್ತಿದ್ದಾರೆ.

‘ಅದೇ ಎನರ್ಜಿ, ಅದೇ ಗತ್ತು’; ಜೀ ಕನ್ನಡ ವೇದಿಕೆ ಮೇಲೆ ಶಿವಣ್ಣ-ಪ್ರೇಮಾ ‘ಓಂ’ ರೀ ಕ್ರಿಯೇಷನ್
ಶಿವರಾಜ್​ಕುಮಾರ್-ಪ್ರೇಮಾ
ರಾಜೇಶ್ ದುಗ್ಗುಮನೆ
|

Updated on: Aug 31, 2024 | 10:40 AM

Share

ನಟ ಶಿವರಾಜ್​ಕುಮಾರ್ ನಟನೆಯ ‘ಓಂ’ ಸಿನಿಮಾ 1995ರಲ್ಲಿ ರಿಲೀಸ್ ಆಯಿತು. ಈ ಚಿತ್ರ ಬಿಡುಗಡೆ ಆಗಿ 30 ವರ್ಷ ಪೂರ್ಣಗೊಳ್ಳುತ್ತಿದೆ. ಈ ಚಿತ್ರವನ್ನು ಈಗಲೂ ನೆನಪಿಸಿಕೊಳ್ಳು ಕೆಲಸ ಫ್ಯಾನ್ಸ್ ಮಾಡುತ್ತಾರೆ. ಈಗ ಜೀ ಕನ್ನಡ ವೇದಿಕೆ ಮೇಲೆ ಶಿವರಾಜ್​ಕುಮಾರ್ ಅವರು ‘ಓಂ’ ಚಿತ್ರವನ್ನು ರೀ ಕ್ರಿಯೇಟ್ ಮಾಡುತ್ತಿದ್ದಾರೆ. ಇದರ ಪ್ರೋಮೋ ರಿಲೀಸ್ ಆಗಿದೆ. ಸಂಪೂರ್ಣ ಎಪಿಸೋಡ್ ನೋಡಲು ಫ್ಯಾನ್ಸ್ ಕಾದಿದ್ದಾರೆ.

‘ಒಂ’ ಚಿತ್ರವನ್ನು ಉಪೇಂದ್ರ ಅವರು ನಿರ್ದೇಶನ ಮಾಡಿದ್ದರು. 1995ರ ಮೇ 19ರಂದು ಈ ಚಿತ್ರ ರೀಲೀಸ್ ಆಯಿತು. ಈ ಸಿನಿಮಾ ಈವರೆಗೆ ಸಿನಿಮಾ 550ಕ್ಕೂ ಅಧಿಕ ಬಾರಿ ರೀ-ರಿಲೀಸ್ ಆಗಿದೆ ಅನ್ನೋದು ವಿಶೇಷ. ಶಿವರಾಜ್​ಕುಮಾರ್ ಅವರು ಸತ್ಯ ಹೆಸರಿನ ಪಾತ್ರ ಮಾಡಿದರೆ, ಪ್ರೇಮಾ ಅವರು ಮಧು ಹೆಸರಿನ ಪಾತ್ರ ಮಾಡಿದ್ದರು. ಈ ಚಿತ್ರವನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದರು.

ಮಧು ಬಳಿ ಬರುವ ಸತ್ಯ ಪ್ರೀತಿಸು ಎಂದು ಪೀಡಿಸುತ್ತಾನೆ. ಈ ದೃಶ್ಯವನ್ನು ರೀ ಕ್ರಿಯೇಟ್ ಮಾಡಲಾಗಿದೆ. ‘ದಂತದ ಗೊಂಬೆ ತರ ಕಾಣ್ತಾ ಇದೀಯಾ, ಐ ಲವ್​ ಯೂ ಮಧು’ ಎಂದು ಶಿವಣ್ಣ ಹೇಳಿದ್ದಾರೆ. ‘ನನಗೆ ನೀನು ಇಷ್ಟ ಇಲ್ಲ ಅಂದ್ರೂ ಯಾಕೆ ನನ್ನ ಪೀಡಿಸ್ತೀಯಾ’ ಎಂದು ಪ್ರೇಮಾ ಕೇಳಿದ್ದಾರೆ. ಇಬ್ಬರ ಎನರ್ಜಿ ಅದೇ ರೀತಿ ಇದೆ. ಡೈಲಾಗ್​ ಡೆಲಿವರಿ ಆಗ ಹೇಗಿತ್ತೋ ಹಾಗೆಯೇ ಇದೆ ಅನ್ನೋದು ವಿಶೇಷ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ‘ನಾನು ತಾಳ್ಮೆ ಕಳೆದುಕೊಂಡಾಗಲೆಲ್ಲ, ತುಂಬಾ ಜನ ತಲೆ ಕಳೆದುಕೊಂಡಿದ್ದಾರೆ’; ಮತ್ತೆ ಲಾಂಗ್ ಹಿಡಿದ ಶಿವರಾಜ್​ಕುಮಾರ್

ಜೀ ಕನ್ನಡದಲ್ಲಿ ಇಂದು ಎರಡು ರಿಯಾಲಿಟಿ ಶೋಗಳ ಸಮಾಗಮ ಆಗುತ್ತಿದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಮತ್ತು ಮಹಾನಟಿ ‘ಮಹಾಸಂಭ್ರಮ’ ಕಾರ್ಯಕ್ರಮ ಸಂಜೆ 7ರಿಂದ ರಾತ್ರಿ 9:30ರವರೆಗೆ ನಡೆಯಲಿದೆ. ಶಿವಣ್ಣ ಅವರು ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಜಡ್ಡ್ ಆದರೆ, ಪ್ರೇಮಾ ಮಹಾನಟಿ ಶೋನ ಜಡ್ಜ್​ ಆಗಿದ್ದಾರೆ. ತರುಣ್ ಸುಧೀರ್ ಕೂಡ ಜಡ್ಜ್ ಸ್ಥಾನದಲ್ಲಿ ಇದ್ದು, ಅವರ ಪತ್ನಿ ಸೋನಲ್ ಅವರು ಬರಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ