AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣನ ಎದುರು ಖಡಕ್ ಡೈಲಾಗ್ ಹೇಳಿದ ಬಾಲಕಿ; ಶಿವರಾಜ್​ಕುಮಾರ ರಿಯಾಕ್ಷನ್ ಹೇಗಿತ್ತು?

ಬೆಂಗಳೂರಿನ ಲೇಖನಾ ಹೆಸರಿನ ಆರು ವರ್ಷದ ಬಾಲಕಿ ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದಾಳೆ. ಅವಳ ಡ್ಯಾನ್ಸ್ ನೋಡಿ ಕಾರ್ಯಕ್ರಮದ ಜಡ್ಜ್​​ಗಳು ಮೆಚ್ಚಿಕೊಂಡಿದ್ದಾರೆ.

ಶಿವಣ್ಣನ ಎದುರು ಖಡಕ್ ಡೈಲಾಗ್ ಹೇಳಿದ ಬಾಲಕಿ; ಶಿವರಾಜ್​ಕುಮಾರ ರಿಯಾಕ್ಷನ್ ಹೇಗಿತ್ತು?
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಆಡಿಷನ್
ರಾಜೇಶ್ ದುಗ್ಗುಮನೆ
|

Updated on:May 13, 2023 | 3:24 PM

Share

ಜೀ ಕನ್ನಡ ವಾಹಿನಿಯಲ್ಲಿ ಈಗಾಗಲೇ ಹಲವು ರಿಯಾಲಿಟಿ ಶೋಗಳು ಪ್ರಸಾರ ಕಂಡಿವೆ. ಈ ಕಾರ್ಯಕ್ರಮಗಳ ಮೂಲಕ ಹಲವು ಪ್ರತಿಭೆಗಳಿಗೆ ಅವಕಾಶ ಸಿಕ್ಕಿದೆ. ತಮ್ಮ ಪ್ರತಿಭೆಯನ್ನು ಜಗತ್ತಿಗೆ ತೋರಿಸಲು ಒಂದೊಳ್ಳೆಯ ವೇದಿಕೆ ಸಿಕ್ಕಿದೆ. ಈಗ ಜೀ ಕನ್ನಡ ವಾಹಿನಿಯಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​ ಸೀಸನ್ 7’  (DKD 7) ಆರಂಭ ಆಗುತ್ತಿದೆ. ಇದರ ಮೆಗಾ ಆಡಿಷನ್ ನಡೆದಿದ್ದು, ಇಂದು (ಮೇ 13) ಪ್ರಸಾರ ಕಾಣಲಿದೆ. ಈ ಶೋನಲ್ಲಿ ಶಿವರಾಜ್​ಕುಮಾರ್ (Shivarajkumar) ಅವರು ಜಡ್ಜ್ ಆಗಿ ಭಾಗಿ ಆಗಿದ್ದಾರೆ. ಪುಟ್ಟ ಬಾಲಕಿ ಹೇಳಿದ ಡೈಲಾಗ್​ ಕೇಳಿ ಅವರು ಖುಷಿಪಟ್ಟಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಈಗಾಗಲೇ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​’ ರಿಯಾಲಿಟಿ ಶೋ ಆರು ಸೀಸನ್​ಗಳನ್ನು ಪೂರ್ಣಗೊಳಿಸಿದೆ. ಹಲವು ಪ್ರತಿಭೆಗಳು ಈ ವೇದಿಕೆ ಮೇಲೆ ಬಂದಿದ್ದಾರೆ. ಈಗ ಹೊಸ ಸೀಸನ್ ಆರಂಭ ಆಗುತ್ತಿದೆ. ಇದಕ್ಕೆ ಮೆಗಾ ಆಡಿಷನ್ ಕೂಡ ನಡೆದಿದೆ. ಹಲವು ಪ್ರತಿಭೆಗಳು ಈ ಸೀಸನ್​ಗೆ ಬರುತ್ತಿದ್ದಾರೆ.

ಬೆಂಗಳೂರಿನ ಲೇಖನಾ ಹೆಸರಿನ ಆರು ವರ್ಷದ ಬಾಲಕಿ ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದಾಳೆ. ಅವಳ ಡ್ಯಾನ್ಸ್ ನೋಡಿ ಕಾರ್ಯಕ್ರಮದ ಜಡ್ಜ್​​ಗಳು ಮೆಚ್ಚಿಕೊಂಡಿದ್ದಾರೆ. ವೇದಿಕೆ ಮೇಲೆ ಕುಳಿತಿದ್ದ ಚಿನ್ನಿ ಪ್ರಕಾಶ್ ಮಾಸ್ಟರ್ ಕೂಡ ಲೇಖನಾಳನ್ನು ಹೊಗಳಿದರು. ಶಿವರಾಜ್​ಕುಮಾರ್ ಅವರು ಲೇಖನಾ ಅವಳನ್ನು ಎತ್ತಿಕೊಂಡಿದ್ದಾರೆ. ಈ ವೇಳೆ ಆಕೆ ಶಿವಣ್ಣನ ಡೈಲಾಗ್ ಹೇಳಿದ್ದಾಳೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ:  ಹೆಚ್ಚಾದ ಆಕ್ರೋಶ; ಶಿವರಾಜ್​ಕುಮಾರ್ ಬಗ್ಗೆ ಹೇಳಿದ ಮಾತು ಹಿಂಪಡೆದ ಪ್ರಶಾಂತ್ ಸಂಬರ್ಗಿ

‘ಇದಕ್ಕೆ ಅಂಥ ಒಂದು ಸ್ಟೈಲ್ ಇದೆ, ಏನ್ ಹೇಳು ಒಂದು ಗ್ರಿಪ್ ಇದೆ’ ಎಂದು ಖಡಕ್ ಆಗಿ ಡೈಲಾಗ್ ಹೇಳಿದ್ದಾಳೆ ಲೇಖನಾ. ಅವಳ ಡೈಲಾಗ್ ಕೇಳಿ ಶಿವರಾಜ್​ಕುಮಾರ್ ಅವರು ಮೆಚ್ಚಿಕೊಂಡಿದ್ದಾರೆ. ಅವರಿಗೆ ಸಖತ್ ಖುಷಿ ಆಗಿದೆ. ಈ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ‘ಡಿಕೆಡಿ ವೇದಿಕೆಯಲ್ಲಿ ಸಂಚಲನ ಸೃಷ್ಟಿಸಿದ ಮಂಡ್ಯದ ಅಂಜಲಿ ಮತ್ತು ಬೆಂಗಳೂರಿನ ಲೇಖನಾ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 7 ಮೆಗಾ ಆಡಿಷನ್. ಇಂದು ರಾತ್ರಿ 7.30ಕ್ಕೆ’ ಎಂದು ಕ್ಯಾಪ್ಶನ್ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:23 pm, Sat, 13 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್