AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣನ ಎದುರು ಖಡಕ್ ಡೈಲಾಗ್ ಹೇಳಿದ ಬಾಲಕಿ; ಶಿವರಾಜ್​ಕುಮಾರ ರಿಯಾಕ್ಷನ್ ಹೇಗಿತ್ತು?

ಬೆಂಗಳೂರಿನ ಲೇಖನಾ ಹೆಸರಿನ ಆರು ವರ್ಷದ ಬಾಲಕಿ ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದಾಳೆ. ಅವಳ ಡ್ಯಾನ್ಸ್ ನೋಡಿ ಕಾರ್ಯಕ್ರಮದ ಜಡ್ಜ್​​ಗಳು ಮೆಚ್ಚಿಕೊಂಡಿದ್ದಾರೆ.

ಶಿವಣ್ಣನ ಎದುರು ಖಡಕ್ ಡೈಲಾಗ್ ಹೇಳಿದ ಬಾಲಕಿ; ಶಿವರಾಜ್​ಕುಮಾರ ರಿಯಾಕ್ಷನ್ ಹೇಗಿತ್ತು?
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಆಡಿಷನ್
ರಾಜೇಶ್ ದುಗ್ಗುಮನೆ
|

Updated on:May 13, 2023 | 3:24 PM

Share

ಜೀ ಕನ್ನಡ ವಾಹಿನಿಯಲ್ಲಿ ಈಗಾಗಲೇ ಹಲವು ರಿಯಾಲಿಟಿ ಶೋಗಳು ಪ್ರಸಾರ ಕಂಡಿವೆ. ಈ ಕಾರ್ಯಕ್ರಮಗಳ ಮೂಲಕ ಹಲವು ಪ್ರತಿಭೆಗಳಿಗೆ ಅವಕಾಶ ಸಿಕ್ಕಿದೆ. ತಮ್ಮ ಪ್ರತಿಭೆಯನ್ನು ಜಗತ್ತಿಗೆ ತೋರಿಸಲು ಒಂದೊಳ್ಳೆಯ ವೇದಿಕೆ ಸಿಕ್ಕಿದೆ. ಈಗ ಜೀ ಕನ್ನಡ ವಾಹಿನಿಯಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​ ಸೀಸನ್ 7’  (DKD 7) ಆರಂಭ ಆಗುತ್ತಿದೆ. ಇದರ ಮೆಗಾ ಆಡಿಷನ್ ನಡೆದಿದ್ದು, ಇಂದು (ಮೇ 13) ಪ್ರಸಾರ ಕಾಣಲಿದೆ. ಈ ಶೋನಲ್ಲಿ ಶಿವರಾಜ್​ಕುಮಾರ್ (Shivarajkumar) ಅವರು ಜಡ್ಜ್ ಆಗಿ ಭಾಗಿ ಆಗಿದ್ದಾರೆ. ಪುಟ್ಟ ಬಾಲಕಿ ಹೇಳಿದ ಡೈಲಾಗ್​ ಕೇಳಿ ಅವರು ಖುಷಿಪಟ್ಟಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಈಗಾಗಲೇ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​’ ರಿಯಾಲಿಟಿ ಶೋ ಆರು ಸೀಸನ್​ಗಳನ್ನು ಪೂರ್ಣಗೊಳಿಸಿದೆ. ಹಲವು ಪ್ರತಿಭೆಗಳು ಈ ವೇದಿಕೆ ಮೇಲೆ ಬಂದಿದ್ದಾರೆ. ಈಗ ಹೊಸ ಸೀಸನ್ ಆರಂಭ ಆಗುತ್ತಿದೆ. ಇದಕ್ಕೆ ಮೆಗಾ ಆಡಿಷನ್ ಕೂಡ ನಡೆದಿದೆ. ಹಲವು ಪ್ರತಿಭೆಗಳು ಈ ಸೀಸನ್​ಗೆ ಬರುತ್ತಿದ್ದಾರೆ.

ಬೆಂಗಳೂರಿನ ಲೇಖನಾ ಹೆಸರಿನ ಆರು ವರ್ಷದ ಬಾಲಕಿ ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದಾಳೆ. ಅವಳ ಡ್ಯಾನ್ಸ್ ನೋಡಿ ಕಾರ್ಯಕ್ರಮದ ಜಡ್ಜ್​​ಗಳು ಮೆಚ್ಚಿಕೊಂಡಿದ್ದಾರೆ. ವೇದಿಕೆ ಮೇಲೆ ಕುಳಿತಿದ್ದ ಚಿನ್ನಿ ಪ್ರಕಾಶ್ ಮಾಸ್ಟರ್ ಕೂಡ ಲೇಖನಾಳನ್ನು ಹೊಗಳಿದರು. ಶಿವರಾಜ್​ಕುಮಾರ್ ಅವರು ಲೇಖನಾ ಅವಳನ್ನು ಎತ್ತಿಕೊಂಡಿದ್ದಾರೆ. ಈ ವೇಳೆ ಆಕೆ ಶಿವಣ್ಣನ ಡೈಲಾಗ್ ಹೇಳಿದ್ದಾಳೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ:  ಹೆಚ್ಚಾದ ಆಕ್ರೋಶ; ಶಿವರಾಜ್​ಕುಮಾರ್ ಬಗ್ಗೆ ಹೇಳಿದ ಮಾತು ಹಿಂಪಡೆದ ಪ್ರಶಾಂತ್ ಸಂಬರ್ಗಿ

‘ಇದಕ್ಕೆ ಅಂಥ ಒಂದು ಸ್ಟೈಲ್ ಇದೆ, ಏನ್ ಹೇಳು ಒಂದು ಗ್ರಿಪ್ ಇದೆ’ ಎಂದು ಖಡಕ್ ಆಗಿ ಡೈಲಾಗ್ ಹೇಳಿದ್ದಾಳೆ ಲೇಖನಾ. ಅವಳ ಡೈಲಾಗ್ ಕೇಳಿ ಶಿವರಾಜ್​ಕುಮಾರ್ ಅವರು ಮೆಚ್ಚಿಕೊಂಡಿದ್ದಾರೆ. ಅವರಿಗೆ ಸಖತ್ ಖುಷಿ ಆಗಿದೆ. ಈ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ‘ಡಿಕೆಡಿ ವೇದಿಕೆಯಲ್ಲಿ ಸಂಚಲನ ಸೃಷ್ಟಿಸಿದ ಮಂಡ್ಯದ ಅಂಜಲಿ ಮತ್ತು ಬೆಂಗಳೂರಿನ ಲೇಖನಾ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 7 ಮೆಗಾ ಆಡಿಷನ್. ಇಂದು ರಾತ್ರಿ 7.30ಕ್ಕೆ’ ಎಂದು ಕ್ಯಾಪ್ಶನ್ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:23 pm, Sat, 13 May 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ