AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನನ್ನು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಶಿವಣ್ಣ; ಕ್ಷಮೆ ಕೇಳಿದ ಅನುಶ್ರೀ

ಇಂದು (ಮೇ 8) ವಿಶ್ವ ತಾಯಂದಿರ ದಿನ. ಈ ವಿಶೇಷ ದಿನದಂದು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ವಿಶೇಷ ಎಪಿಸೋಡ್​ ಏರ್ಪಡಿಸಲಾಗಿತ್ತು. ಈ ಎಪಿಸೋಡ್​ನಲ್ಲಿ ಅಮ್ಮನ ಕಾನ್ಸೆಪ್ಟ್ ಮೇಲೆ ಡ್ಯಾನ್ಸ್ ಮಾಡಲಾಯಿತು.

ಅಮ್ಮನನ್ನು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಶಿವಣ್ಣ; ಕ್ಷಮೆ ಕೇಳಿದ ಅನುಶ್ರೀ
ಶಿವಣ್ಣ-ಅನುಶ್ರೀ
TV9 Web
| Edited By: |

Updated on: May 08, 2022 | 9:43 PM

Share

ಪಾರ್ವತಮ್ಮ ರಾಜ್​ಕುಮಾರ್ ಅವರನ್ನು (Parvathamma Rajkumar) ಕಂಡರೆ ಕರ್ನಾಟಕದ ಜನತೆಗೆ ವಿಶೇಷ ಪ್ರೀತಿ ಇದೆ. ಅವರು ನಿರ್ಮಾಣದ ಮೂಲಕ ಮನೆ ಮಾತಾದವರು. ಮನೆಯಲ್ಲಿ ತಾಯಿ ಆಗಿಯೂ ತಮ್ಮ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸಿದ್ದರು. ಇನ್ನು ಪಾರ್ವತಮ್ಮ ಅವರನ್ನು ಕಂಡರೆ ಶಿವರಾಜ್​ಕುಮಾರ್​​ಗೆ (Shivarajkumar) ವಿಶೇಷ ಗೌರವ ಇದೆ. ಅನೇಕ ವೇದಿಕೆ ಮೇಲೆ ಶಿವಣ್ಣ  ಅಮ್ಮನ ಬಗ್ಗೆ ಹೇಳುತ್ತಾ ಭಾವುಕರಾಗಿದ್ದರು. ಈಗ ಅವರು ತಾಯಿಯನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ.

ಜೀ ಕನ್ನಡದಲ್ಲಿ ಪ್ರಸಾರವಾಗುವ ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್’ ಈಗಾಗಲೇ ಐದು ಸೀಸನ್​​ಗಳನ್ನು ಯಶಸ್ವಿಯಾಗಿ ಪೂರ್ತಿಗೊಳಿಸಿದೆ. ಈಗ ಆರನೇ ಸೀಸನ್ ಆರಂಭವಾಗಿದೆ. ಅನೇಕ ಪ್ರತಿಭೆಗಳಿಗೆ ವೇದಿಕೆ ಆಗಿರುವ ಈ ಶೋಗೆ ಶಿವಣ್ಣ ಜಡ್ಜ್​ ಆಗಿದ್ದಾರೆ. ಶಿವರಾಜ್​ಕುಮಾರ್ ಡ್ಯಾನ್ಸ್ ಮೂಲಕವೂ ಜನಪ್ರಿಯತೆ ಗಳಿಸಿದವರು. ಈ ಕಾರಣಕ್ಕೆ ಶಿವಣ್ಣ ಅವರನ್ನು ಜಡ್ಜ್​ ಸ್ಥಾನದಲ್ಲಿ ಕೂರಿಸಲಾಗಿದೆ.

ಇದನ್ನೂ ಓದಿ
Image
‘ಬೀಸ್ಟ್​’ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ಸಿನಿಮಾದಲ್ಲಿ ಶಿವರಾಜ್​ಕುಮಾರ್​-ರಜನಿಕಾಂತ್​ ನಟನೆ?
Image
Bairagee Song: ಹೊಸ ಅವತಾರದಲ್ಲಿ ಶಿವಣ್ಣ; ಅಭಿಮಾನಿಗಳ ಮನಗೆದ್ದ ಬೈರಾಗಿ ಚಿತ್ರದ ‘ನಕರನಖ’
Image
ಕನ್ನಡದ ‘ಟಾಕೀಸ್​’ ಲಾಂಚ್​ ಮಾಡಿದ ಶಿವಣ್ಣ; ಇದರಲ್ಲಿ ಇದ್ದಾರೆ ಸಾವಿರಕ್ಕೂ ಹೆಚ್ಚು ಕಲಾವಿದರು
Image
ಪೊಲೀಸರ ಜತೆ ಮಸ್ತ್ ಡ್ಯಾನ್ಸ್ ಮಾಡಿದ ಶಿವಣ್ಣ

ಇಂದು (ಮೇ 8) ವಿಶ್ವ ತಾಯಂದಿರ ದಿನ. ಈ ವಿಶೇಷ ದಿನದಂದು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ವಿಶೇಷ ಎಪಿಸೋಡ್​ ಏರ್ಪಡಿಸಲಾಗಿತ್ತು. ಈ ಎಪಿಸೋಡ್​ನಲ್ಲಿ ಅಮ್ಮನ ಕಾನ್ಸೆಪ್ಟ್ ಮೇಲೆ ಡ್ಯಾನ್ಸ್ ಮಾಡಲಾಯಿತು. ಕೊನೆಯಲ್ಲಿ ಜಡ್ಜ್​ ಹಾಗೂ ನಿರೂಪಕಿ ಅನುಶ್ರೀ ಅವರು ತಾಯಿ ಇರುವ ಫೋಟೋವನ್ನು ಪ್ರದರ್ಶನ ಮಾಡಲಾಯಿತು. ಶಿವಣ್ಣ-ಪಾರ್ವತಮ್ಮನ ಫೋಟೋ ಎಲ್ಲರ ಗಮನ ಸೆಳೆಯಿತು.

ಈ ಫೋಟೋ ನೋಡುತ್ತಿದ್ದಂತೆ ಶಿವರಾಜ್​ಕುಮಾರ್ ಅವರು ಗಳಗಳನೆ ಅತ್ತುಬಿಟ್ಟರು. ದುಃಖವನ್ನು ನಿಯಂತ್ರಿಸಿಕೊಳ್ಳಲು ಅವರ ಬಳಿಯಿಂದ ಸಾಧ್ಯವೇ ಆಗಲಿಲ್ಲ. ಜಡ್ಜ್​ಗಳು ಶಿವಣ್ಣ ಅವರನ್ನು ಸಮಾಧಾನ ಮಾಡಿದರು. ರಕ್ಷಿತಾ ಕೂಡ ಶಿವಣ್ಣ ಅವರನ್ನು ಸಮಾಧಾನ ಮಾಡೋಕೆ ಪ್ರಯತ್ನಿಸಿದರು. ಕೊನೆಗೂ ಅವರು ಸಮಾಧಾನಗೊಂಡರು.

View this post on Instagram

A post shared by Zee Kannada (@zeekannada)

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ಶೋ ಅನ್ನು ಆ್ಯಂಕರ್ ಅನುಶ್ರೀ ನಿರೂಪಣೆ ಮಾಡುತ್ತಿದ್ದಾರೆ. ತಾಯಿಯ ಫೋಟೋವನ್ನು ಪ್ರದರ್ಶನ ಮಾಡಿ ಕಣ್ಣೀರು ಹಾಕಿಸಿದ್ದಕ್ಕೆ ಅವರು ಶಿವರಾಜ್​ಕುಮಾರ್ ಬಳಿ ಕ್ಷಮೆ ಕೇಳಿದರು. ಜೀ ಕನ್ನಡ ವಾಹಿನಿ ಇದರ ಪ್ರೋಮೋ ಹಂಚಿಕೊಂಡಿದೆ. ಇದಕ್ಕೆ ವೀಕ್ಷಕರು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ