AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನನ್ನು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಶಿವಣ್ಣ; ಕ್ಷಮೆ ಕೇಳಿದ ಅನುಶ್ರೀ

ಇಂದು (ಮೇ 8) ವಿಶ್ವ ತಾಯಂದಿರ ದಿನ. ಈ ವಿಶೇಷ ದಿನದಂದು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ವಿಶೇಷ ಎಪಿಸೋಡ್​ ಏರ್ಪಡಿಸಲಾಗಿತ್ತು. ಈ ಎಪಿಸೋಡ್​ನಲ್ಲಿ ಅಮ್ಮನ ಕಾನ್ಸೆಪ್ಟ್ ಮೇಲೆ ಡ್ಯಾನ್ಸ್ ಮಾಡಲಾಯಿತು.

ಅಮ್ಮನನ್ನು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಶಿವಣ್ಣ; ಕ್ಷಮೆ ಕೇಳಿದ ಅನುಶ್ರೀ
ಶಿವಣ್ಣ-ಅನುಶ್ರೀ
TV9 Web
| Edited By: |

Updated on: May 08, 2022 | 9:43 PM

Share

ಪಾರ್ವತಮ್ಮ ರಾಜ್​ಕುಮಾರ್ ಅವರನ್ನು (Parvathamma Rajkumar) ಕಂಡರೆ ಕರ್ನಾಟಕದ ಜನತೆಗೆ ವಿಶೇಷ ಪ್ರೀತಿ ಇದೆ. ಅವರು ನಿರ್ಮಾಣದ ಮೂಲಕ ಮನೆ ಮಾತಾದವರು. ಮನೆಯಲ್ಲಿ ತಾಯಿ ಆಗಿಯೂ ತಮ್ಮ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸಿದ್ದರು. ಇನ್ನು ಪಾರ್ವತಮ್ಮ ಅವರನ್ನು ಕಂಡರೆ ಶಿವರಾಜ್​ಕುಮಾರ್​​ಗೆ (Shivarajkumar) ವಿಶೇಷ ಗೌರವ ಇದೆ. ಅನೇಕ ವೇದಿಕೆ ಮೇಲೆ ಶಿವಣ್ಣ  ಅಮ್ಮನ ಬಗ್ಗೆ ಹೇಳುತ್ತಾ ಭಾವುಕರಾಗಿದ್ದರು. ಈಗ ಅವರು ತಾಯಿಯನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ.

ಜೀ ಕನ್ನಡದಲ್ಲಿ ಪ್ರಸಾರವಾಗುವ ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್’ ಈಗಾಗಲೇ ಐದು ಸೀಸನ್​​ಗಳನ್ನು ಯಶಸ್ವಿಯಾಗಿ ಪೂರ್ತಿಗೊಳಿಸಿದೆ. ಈಗ ಆರನೇ ಸೀಸನ್ ಆರಂಭವಾಗಿದೆ. ಅನೇಕ ಪ್ರತಿಭೆಗಳಿಗೆ ವೇದಿಕೆ ಆಗಿರುವ ಈ ಶೋಗೆ ಶಿವಣ್ಣ ಜಡ್ಜ್​ ಆಗಿದ್ದಾರೆ. ಶಿವರಾಜ್​ಕುಮಾರ್ ಡ್ಯಾನ್ಸ್ ಮೂಲಕವೂ ಜನಪ್ರಿಯತೆ ಗಳಿಸಿದವರು. ಈ ಕಾರಣಕ್ಕೆ ಶಿವಣ್ಣ ಅವರನ್ನು ಜಡ್ಜ್​ ಸ್ಥಾನದಲ್ಲಿ ಕೂರಿಸಲಾಗಿದೆ.

ಇದನ್ನೂ ಓದಿ
Image
‘ಬೀಸ್ಟ್​’ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ಸಿನಿಮಾದಲ್ಲಿ ಶಿವರಾಜ್​ಕುಮಾರ್​-ರಜನಿಕಾಂತ್​ ನಟನೆ?
Image
Bairagee Song: ಹೊಸ ಅವತಾರದಲ್ಲಿ ಶಿವಣ್ಣ; ಅಭಿಮಾನಿಗಳ ಮನಗೆದ್ದ ಬೈರಾಗಿ ಚಿತ್ರದ ‘ನಕರನಖ’
Image
ಕನ್ನಡದ ‘ಟಾಕೀಸ್​’ ಲಾಂಚ್​ ಮಾಡಿದ ಶಿವಣ್ಣ; ಇದರಲ್ಲಿ ಇದ್ದಾರೆ ಸಾವಿರಕ್ಕೂ ಹೆಚ್ಚು ಕಲಾವಿದರು
Image
ಪೊಲೀಸರ ಜತೆ ಮಸ್ತ್ ಡ್ಯಾನ್ಸ್ ಮಾಡಿದ ಶಿವಣ್ಣ

ಇಂದು (ಮೇ 8) ವಿಶ್ವ ತಾಯಂದಿರ ದಿನ. ಈ ವಿಶೇಷ ದಿನದಂದು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ವಿಶೇಷ ಎಪಿಸೋಡ್​ ಏರ್ಪಡಿಸಲಾಗಿತ್ತು. ಈ ಎಪಿಸೋಡ್​ನಲ್ಲಿ ಅಮ್ಮನ ಕಾನ್ಸೆಪ್ಟ್ ಮೇಲೆ ಡ್ಯಾನ್ಸ್ ಮಾಡಲಾಯಿತು. ಕೊನೆಯಲ್ಲಿ ಜಡ್ಜ್​ ಹಾಗೂ ನಿರೂಪಕಿ ಅನುಶ್ರೀ ಅವರು ತಾಯಿ ಇರುವ ಫೋಟೋವನ್ನು ಪ್ರದರ್ಶನ ಮಾಡಲಾಯಿತು. ಶಿವಣ್ಣ-ಪಾರ್ವತಮ್ಮನ ಫೋಟೋ ಎಲ್ಲರ ಗಮನ ಸೆಳೆಯಿತು.

ಈ ಫೋಟೋ ನೋಡುತ್ತಿದ್ದಂತೆ ಶಿವರಾಜ್​ಕುಮಾರ್ ಅವರು ಗಳಗಳನೆ ಅತ್ತುಬಿಟ್ಟರು. ದುಃಖವನ್ನು ನಿಯಂತ್ರಿಸಿಕೊಳ್ಳಲು ಅವರ ಬಳಿಯಿಂದ ಸಾಧ್ಯವೇ ಆಗಲಿಲ್ಲ. ಜಡ್ಜ್​ಗಳು ಶಿವಣ್ಣ ಅವರನ್ನು ಸಮಾಧಾನ ಮಾಡಿದರು. ರಕ್ಷಿತಾ ಕೂಡ ಶಿವಣ್ಣ ಅವರನ್ನು ಸಮಾಧಾನ ಮಾಡೋಕೆ ಪ್ರಯತ್ನಿಸಿದರು. ಕೊನೆಗೂ ಅವರು ಸಮಾಧಾನಗೊಂಡರು.

View this post on Instagram

A post shared by Zee Kannada (@zeekannada)

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ಶೋ ಅನ್ನು ಆ್ಯಂಕರ್ ಅನುಶ್ರೀ ನಿರೂಪಣೆ ಮಾಡುತ್ತಿದ್ದಾರೆ. ತಾಯಿಯ ಫೋಟೋವನ್ನು ಪ್ರದರ್ಶನ ಮಾಡಿ ಕಣ್ಣೀರು ಹಾಕಿಸಿದ್ದಕ್ಕೆ ಅವರು ಶಿವರಾಜ್​ಕುಮಾರ್ ಬಳಿ ಕ್ಷಮೆ ಕೇಳಿದರು. ಜೀ ಕನ್ನಡ ವಾಹಿನಿ ಇದರ ಪ್ರೋಮೋ ಹಂಚಿಕೊಂಡಿದೆ. ಇದಕ್ಕೆ ವೀಕ್ಷಕರು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?